ಉತ್ತರ ಪ್ರದೇಶದ 8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆಯನ್ನು ಗುರುವಾರ ಬೆಳಿಗ್ಗೆ ಮಧ್ಯಪ್ರದೇಶದ ಉಜ್ಜಯಿನಿಯ ಮಹಕಲ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ವಿಶೇಷ ಕಾರ್ಯಪಡೆಯ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಅಮಿತಾಬ್ ಯಶ್ ತಿಳಿಸಿದ್ದಾರೆ. ದುಬೆ ಶರಣಾಗಲು ಸ್ವತಃ ಪೊಲೀಸ್ ಠಾಣೆಗೆ ಹೊರಟಿದ್ದಾಗ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
“ಇದು ದೊಡ್ಡ ಯಶಸ್ಸು. ವಿಕಾಸ್ ದುಬೆ ಕ್ರೂರ ಕೊಲೆಗಾರ. ಅವನನ್ನು ಹಿಡಿಯಲು ಮಧ್ಯಪ್ರದೇಶ ಪೊಲೀಸರು ಸಂಪೂರ್ಣ ಜಾಗರೂಕರಾಗಿದ್ದರು. ಅವನನ್ನು ಉಜ್ಜಯಿನಿ ಮಹಕಲ್ ದೇವಸ್ಥಾನದಲ್ಲಿ ಬಂಧಿಸಲಾಗಿದೆ. ಈ ಕುರಿತು ನಾವು ಉತ್ತರ ಪ್ರದೇಶ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ” ಎಂದು ಮಧ್ಯಪ್ರದೇಶ ಸಚಿವ ನರೋತ್ತಮ್ ಮಿಶ್ರಾ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.
Vikas Dubey was going to Ujjain Mahakal temple when he was identified by security personnel. Police were informed, he confessed his identity after being pushed for it. He has been apprehended by police & interrogation is underway: Ashish Singh, Ujjain Collector #MadhyaPradesh https://t.co/tBNHn3pwuw
— ANI (@ANI) July 9, 2020
#WATCH Madhya Pradesh: After arrest in Ujjain, Vikas Dubey confesses, "Main Vikas Dubey hoon, Kanpur wala." #KanpurEncounter pic.twitter.com/bIPaqy2r9d
— ANI (@ANI) July 9, 2020
ಬಂಧನದ ಬಳಿಕ “ನಾನು ವಿಕಾಸ್ ದುಬೆ, ಕಾನ್ಪುರದವನು” ಎಂದು ವಿಕಾಸ್ ದುಬೆ ಒಪ್ಪಿಕೊಂಡಿದ್ದಾನೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.
ಕಳೆದ ವಾರ ಕಾನ್ಪುರ ಬಳಿಯ ಬಿಕ್ರು ಗ್ರಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 8 ಪೊಲೀಸರು ಹತ್ಯೆಯಾದಾಗಿನಿಂದ ದುಬೆ ಪರಾರಿಯಾಗಿದ್ದ. ಅವನ ಬಂಧನಕ್ಕೆ 25 ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.
ದುಬೆಯ ಬಂಧನ ಕುರಿತು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿದ್ದಾರೆ.
ಇದಕ್ಕೂ ಮುನ್ನ ಗುರುವಾರ ಯುಪಿ ದರೋಡೆಕೋರ ವಿಕಾಸ್ ದುಬೆಯ ಇಬ್ಬರು ಸಹಚರರು ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಸಾವನ್ನಪ್ಪಿದ್ದರು.
ನಿನ್ನೆ ಫರಿದಾಬಾದ್, ಗುರುಗ್ರಾಮ್ ಹೊಟೆಲ್ನಲ್ಲಿ ವಿಕಾಸ್ ದುಬೆ ಕಾಣಿಸಿಕೊಂಡಿದ್ದ ಎನ್ನಲಾಗಿದ್ದು, ಪೊಲೀಸರಿಗೆ ಸಿಗದೆ ಪರಾರಿಯಾಗಿದ್ದ.
60ಕ್ಕು ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿರುವ ಈತ ಮತ್ತು ಅವರ ಸಹಚರರು ಜುಲೈ 1 ರಂದು ತನ್ನನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಗುಂಡಿನ ಮಳೆಗರೆದಿದ್ದರು. ಘಟನೆಯಲ್ಲಿ 8 ಪೊಲೀಸರು ಹತರಾಗಿದ್ದರು. ದಾಳಿಯ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಹಲವು ಪೊಲೀಸರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು…


