Homeಮುಖಪುಟ8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ವಿಕಾಸ್ ದುಬೆಯನ್ನು ಹುಡುಕಿಹೋದ ಪೊಲೀಸ್ ತಂಡಗಳ ಸಮರ್ಪಕ ಯೋಜನೆಯ ಕೊರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಮಧ್ಯೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಬಳಿಯ ಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಲು ಹೋದ 8 ಪೊಲೀಸರ ಮೇಲೆ ಆತನ ಸಹಚರರು ಗುಂಡಿಕ್ಕಿ ಕೊಂದಿರುವ ದುರ್ಘಟನೆ ಇಂದು ಮುಂಜಾನೆ ಜರುಗಿದೆ.

ಉತ್ತರ ಪ್ರದೇಶ ರಾಜಧಾನಿ ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಡಿಕ್ರು ಗ್ರಾಮದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ದಿವೇಂದ್ರ ಕುಮಾರ್ ಮಿಶ್ರಾ, ಮೂವರು ಸಬ್ ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಹತ್ಯೆ ಮಾಡಲಾಗಿದೆ.

ದರೋಡೆ, ಕೊಲೆ, ಅಪಹರಣ, ಸುಲಿಗೆ, ಗಲಭೆ, ಕ್ರಿಮಿನಲ್ ಪಿತೂರಿ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವಿಕಾಸ್ ದುಬೆ ಎಂಬಾತನನ್ನ ಹುಡುಕಿಕೊಂಡು ಮೂರು ಪೊಲೀಸ್ ಠಾಣೆಗಳ ತಂಡಗಳು ಹಳ್ಳಿಗೆ ಹೋಗಿದ್ದವು. ಆತನ ಮೇಲೆ ಸುಮಾರು 60 ಕ್ರಿಮಿನಲ್ ಪ್ರಕರಣಗಳಿದ್ದು ಹೊಸ ಕೊಲೆಗೆ ಯೋಜಿಸಿದ್ದ ಎನ್ನಲಾಗಿದೆ. ಆತನ ಸುಳಿವು ಹಿಡಿದು ಹೊರಟ ಪೊಲೀಸರ ಮೇಲೆ ಆತನ ಸಹಚರರು ಎಗ್ಗಾಮಗ್ಗಾ ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಪೊಲೀಸರು ಡಿಕ್ರು ಹಳ್ಳಿ ಸಮೀಪಿಸುತ್ತಿದ್ದಂತೆ ಭಾರೀ ಬುಲ್ಡೋಡರ್‌ಗಳನ್ನು ರಸ್ತೆಗಡ್ಡವಾಗಿ ನಿಲ್ಲಿಸಲಾಗಿತ್ತು. ಪೊಲೀಸರು ಬರುವ ಮುನ್ಸೂಚನೆ ಅರಿತಿದ್ದ ಆರೋಪಿಗಳು ಹಲವು ರಸ್ತೆಗಳನ್ನು ಬಂದ್ ಮಾಡಿದ್ದರು. ಅವುಗಳನ್ನು ತೆರವುಗೊಳಿಸಿ ಕೊನೆಗೆ ಪೊಲೀಸರು ಗ್ರಾಮ ಪ್ರವೇಶಿಸಿದ ಕೂಡಲೇ ಹಲವು ಕಟ್ಟಡಗಳ ಮೇಲ್ಛಾವಣಿಗಳಲ್ಲಿ ಅಡಗಿದ್ದ ಆರೋಪಿಗಳು ಮನಬಂದಂತೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖಂಡ ಪಿಂಟೂ ಸೆಂಗಾರ್‌ನನ್ನು ಇದೇ ಆರೋಪಿಗಳು ಜೂನ್ 18 ರಂದು ಕೊಂದಿದ್ದರು. ಈ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಮಧ್ಯಪ್ರದೇಶದ ಚಿಂದ್ವಾರದಿಂದ ಕಾನ್ಪುರ ಪೊಲೀಸರು ಗುರುವಾರ ಬಂಧಿಸಿದ್ದರು. ಆನಂತರ ಉಳಿದ ಆರೋಪಿಗಳು ಬಿಕ್ರುನಲ್ಲಿ ಹಲವು ಬಾಡಿಗೆ ಶೂಟರ್‌ಗಳೊಂದಿಗೆ ಅಡಗಿಕೊಂಡಿದ್ದರು ಎನ್ನಲಾಗಿದೆ.

ಶಿವರಾಜ್‌ಪುರದ ಸ್ಟೇಷನ್ ಆಫೀಸರ್ ಆಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ಸಬ್ ಇನ್ಸ್‌ಪೆಕ್ಟರ್ ಮಹೇಶ್ ಯಾದವ್ ಮತ್ತು ಕಾನ್‌ಸ್ಟೆಬಲ್‌ಗಳಾದ ಸುಲ್ತಾನ್ ಸಿಂಗ್, ರಾಹುಲ್, ಜಿತೇಂದ್ರ ಮತ್ತು ಬಾಬ್ಲೂ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಗುಂಡಿನ ದಾಳಿಯಲ್ಲಿ ಇತರ ಐವರು ಪೊಲೀಸರು ಗಾಯಗೊಂಡಿದ್ದಾರೆ.

“ಪೊಲೀಸರ ಕಡೆಯಿಂದಲೂ ಪ್ರತಿ ಗುಂಡಿನ ದಾಳಿ ನಡೆಯಿತು ಆದರೆ ಅಪರಾಧಿಗಳು ಕಟ್ಟಡಗಳ ಮೇಲಿದ್ದರಿಂದ ತಪ್ಪಿಸಿಕೊಂಡರು. ಪೊಲೀಸರ ಮೇಲಿನ ಏಕಾಏಕಿ ದಾಳಿಗೆ ನಮ್ಮ ಎಂಟು ಮಂದಿ ಸಾವನ್ನಪ್ಪಿದ್ದಾರೆ” ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಚ್‌ಸಿ ಅವಸ್ಥಿ ಹೇಳಿದ್ದಾರೆ.

ಎಕೆ 47 ಕಾರ್ಬೈನ್‌ಗಳ ಖಾಲಿ ಚಿಪ್ಪುಗಳನ್ನು ಮೇಲ್ಛಾವಣಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ, ಲಕ್ನೋದಿಂದ ವಿಧಿವಿಜ್ಞಾನ ತಂಡ ಆಗಮಿಸಿ ಸಾಕ್ಷ್ಯ ಸಂಗ್ರಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಕ್ರುನಿಂದ 3 ಕಿ.ಮೀ ದೂರದಲ್ಲಿರುವ ನಿವಾಡಾ ಗ್ರಾಮದಲ್ಲಿ ವಿಕಾಸ್ ದುಬೆ ಅವನ ಇಬ್ಬರು ಸಹಚರರು ಎನ್‌ಕೌಂಟರ್‌ನಲ್ಲಿ ಸಾವನಪ್ಪಿದ್ದಾರೆ. ಪೊಲೀಸರು ಆತನ ಸಹೋದರ ದಿನೇಶ್ ತಿವಾರಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

60 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ವಿಕಾಸ್ ದುಬೆ 2001 ರಲ್ಲಿ ಶಿವ್ಲಿ ಪೊಲೀಸ್ ಠಾಣೆಯೊಳಗೆ ರಾಜ್ಯ ಸಚಿವ ಮತ್ತು ಬಿಜೆಪಿ ನಾಯಕ ಸಂತೋಷ್ ಶುಕ್ಲಾ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದಾನೆ. ನಂತರ ಪ್ರಕರಣದಲ್ಲಿ ಅವನನ್ನು ಖುಲಾಸೆಗೊಳಿಸಲಾಯಿತು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಡಿಕ್ರು ಹಳ್ಳಿಗೆ ತೆರಳುತ್ತಿದ್ದಾರೆ ಮತ್ತು ಕಾನ್ಪುರದ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ದಿನೇಶ್ ಕುಮಾರ್ ಪಿ ಮತ್ತು ಇನ್ಸ್‌ಪೆಕ್ಟರ್ ಜನರಲ್ ಮೋಹಿತ್ ಅಗರ್‌ವಾಲ್ ಅವರು ಈಗಾಗಲೇ ಸ್ಥಳದಲ್ಲಿದ್ದಾರೆ.

ಆರು ಜಿಲ್ಲೆಗಳನ್ನು ಒಳಗೊಂಡ ಕಾನ್ಪುರ ವಿಭಾಗದ ಎಲ್ಲಾ ಗಡಿಗಳಿಗೆ ಪೊಲೀಸ್ ಕಣ್ಗಾವಲು ವಿಧಿಸಲಾಗಿದೆ.

ವಿಕಾಸ್ ದುಬೆಯನ್ನು ಹುಡುಕಿಹೋದ ಪೊಲೀಸ್ ತಂಡಗಳ ಸಮರ್ಪಕ ಯೋಜನೆಯ ಕೊರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಮಧ್ಯೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಘಟನೆಯ ಬಗ್ಗೆ ವರದಿ ಕೇಳಿದ್ದಾರೆ.

ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಯುಪಿ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ.


ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...