Homeಮುಖಪುಟ8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ವಿಕಾಸ್ ದುಬೆಯನ್ನು ಹುಡುಕಿಹೋದ ಪೊಲೀಸ್ ತಂಡಗಳ ಸಮರ್ಪಕ ಯೋಜನೆಯ ಕೊರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಮಧ್ಯೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಬಳಿಯ ಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಲು ಹೋದ 8 ಪೊಲೀಸರ ಮೇಲೆ ಆತನ ಸಹಚರರು ಗುಂಡಿಕ್ಕಿ ಕೊಂದಿರುವ ದುರ್ಘಟನೆ ಇಂದು ಮುಂಜಾನೆ ಜರುಗಿದೆ.

ಉತ್ತರ ಪ್ರದೇಶ ರಾಜಧಾನಿ ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಡಿಕ್ರು ಗ್ರಾಮದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ದಿವೇಂದ್ರ ಕುಮಾರ್ ಮಿಶ್ರಾ, ಮೂವರು ಸಬ್ ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಹತ್ಯೆ ಮಾಡಲಾಗಿದೆ.

ದರೋಡೆ, ಕೊಲೆ, ಅಪಹರಣ, ಸುಲಿಗೆ, ಗಲಭೆ, ಕ್ರಿಮಿನಲ್ ಪಿತೂರಿ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವಿಕಾಸ್ ದುಬೆ ಎಂಬಾತನನ್ನ ಹುಡುಕಿಕೊಂಡು ಮೂರು ಪೊಲೀಸ್ ಠಾಣೆಗಳ ತಂಡಗಳು ಹಳ್ಳಿಗೆ ಹೋಗಿದ್ದವು. ಆತನ ಮೇಲೆ ಸುಮಾರು 60 ಕ್ರಿಮಿನಲ್ ಪ್ರಕರಣಗಳಿದ್ದು ಹೊಸ ಕೊಲೆಗೆ ಯೋಜಿಸಿದ್ದ ಎನ್ನಲಾಗಿದೆ. ಆತನ ಸುಳಿವು ಹಿಡಿದು ಹೊರಟ ಪೊಲೀಸರ ಮೇಲೆ ಆತನ ಸಹಚರರು ಎಗ್ಗಾಮಗ್ಗಾ ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಪೊಲೀಸರು ಡಿಕ್ರು ಹಳ್ಳಿ ಸಮೀಪಿಸುತ್ತಿದ್ದಂತೆ ಭಾರೀ ಬುಲ್ಡೋಡರ್‌ಗಳನ್ನು ರಸ್ತೆಗಡ್ಡವಾಗಿ ನಿಲ್ಲಿಸಲಾಗಿತ್ತು. ಪೊಲೀಸರು ಬರುವ ಮುನ್ಸೂಚನೆ ಅರಿತಿದ್ದ ಆರೋಪಿಗಳು ಹಲವು ರಸ್ತೆಗಳನ್ನು ಬಂದ್ ಮಾಡಿದ್ದರು. ಅವುಗಳನ್ನು ತೆರವುಗೊಳಿಸಿ ಕೊನೆಗೆ ಪೊಲೀಸರು ಗ್ರಾಮ ಪ್ರವೇಶಿಸಿದ ಕೂಡಲೇ ಹಲವು ಕಟ್ಟಡಗಳ ಮೇಲ್ಛಾವಣಿಗಳಲ್ಲಿ ಅಡಗಿದ್ದ ಆರೋಪಿಗಳು ಮನಬಂದಂತೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖಂಡ ಪಿಂಟೂ ಸೆಂಗಾರ್‌ನನ್ನು ಇದೇ ಆರೋಪಿಗಳು ಜೂನ್ 18 ರಂದು ಕೊಂದಿದ್ದರು. ಈ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಮಧ್ಯಪ್ರದೇಶದ ಚಿಂದ್ವಾರದಿಂದ ಕಾನ್ಪುರ ಪೊಲೀಸರು ಗುರುವಾರ ಬಂಧಿಸಿದ್ದರು. ಆನಂತರ ಉಳಿದ ಆರೋಪಿಗಳು ಬಿಕ್ರುನಲ್ಲಿ ಹಲವು ಬಾಡಿಗೆ ಶೂಟರ್‌ಗಳೊಂದಿಗೆ ಅಡಗಿಕೊಂಡಿದ್ದರು ಎನ್ನಲಾಗಿದೆ.

ಶಿವರಾಜ್‌ಪುರದ ಸ್ಟೇಷನ್ ಆಫೀಸರ್ ಆಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ಸಬ್ ಇನ್ಸ್‌ಪೆಕ್ಟರ್ ಮಹೇಶ್ ಯಾದವ್ ಮತ್ತು ಕಾನ್‌ಸ್ಟೆಬಲ್‌ಗಳಾದ ಸುಲ್ತಾನ್ ಸಿಂಗ್, ರಾಹುಲ್, ಜಿತೇಂದ್ರ ಮತ್ತು ಬಾಬ್ಲೂ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಗುಂಡಿನ ದಾಳಿಯಲ್ಲಿ ಇತರ ಐವರು ಪೊಲೀಸರು ಗಾಯಗೊಂಡಿದ್ದಾರೆ.

“ಪೊಲೀಸರ ಕಡೆಯಿಂದಲೂ ಪ್ರತಿ ಗುಂಡಿನ ದಾಳಿ ನಡೆಯಿತು ಆದರೆ ಅಪರಾಧಿಗಳು ಕಟ್ಟಡಗಳ ಮೇಲಿದ್ದರಿಂದ ತಪ್ಪಿಸಿಕೊಂಡರು. ಪೊಲೀಸರ ಮೇಲಿನ ಏಕಾಏಕಿ ದಾಳಿಗೆ ನಮ್ಮ ಎಂಟು ಮಂದಿ ಸಾವನ್ನಪ್ಪಿದ್ದಾರೆ” ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಚ್‌ಸಿ ಅವಸ್ಥಿ ಹೇಳಿದ್ದಾರೆ.

ಎಕೆ 47 ಕಾರ್ಬೈನ್‌ಗಳ ಖಾಲಿ ಚಿಪ್ಪುಗಳನ್ನು ಮೇಲ್ಛಾವಣಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ, ಲಕ್ನೋದಿಂದ ವಿಧಿವಿಜ್ಞಾನ ತಂಡ ಆಗಮಿಸಿ ಸಾಕ್ಷ್ಯ ಸಂಗ್ರಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಕ್ರುನಿಂದ 3 ಕಿ.ಮೀ ದೂರದಲ್ಲಿರುವ ನಿವಾಡಾ ಗ್ರಾಮದಲ್ಲಿ ವಿಕಾಸ್ ದುಬೆ ಅವನ ಇಬ್ಬರು ಸಹಚರರು ಎನ್‌ಕೌಂಟರ್‌ನಲ್ಲಿ ಸಾವನಪ್ಪಿದ್ದಾರೆ. ಪೊಲೀಸರು ಆತನ ಸಹೋದರ ದಿನೇಶ್ ತಿವಾರಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

60 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ವಿಕಾಸ್ ದುಬೆ 2001 ರಲ್ಲಿ ಶಿವ್ಲಿ ಪೊಲೀಸ್ ಠಾಣೆಯೊಳಗೆ ರಾಜ್ಯ ಸಚಿವ ಮತ್ತು ಬಿಜೆಪಿ ನಾಯಕ ಸಂತೋಷ್ ಶುಕ್ಲಾ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದಾನೆ. ನಂತರ ಪ್ರಕರಣದಲ್ಲಿ ಅವನನ್ನು ಖುಲಾಸೆಗೊಳಿಸಲಾಯಿತು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಡಿಕ್ರು ಹಳ್ಳಿಗೆ ತೆರಳುತ್ತಿದ್ದಾರೆ ಮತ್ತು ಕಾನ್ಪುರದ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ದಿನೇಶ್ ಕುಮಾರ್ ಪಿ ಮತ್ತು ಇನ್ಸ್‌ಪೆಕ್ಟರ್ ಜನರಲ್ ಮೋಹಿತ್ ಅಗರ್‌ವಾಲ್ ಅವರು ಈಗಾಗಲೇ ಸ್ಥಳದಲ್ಲಿದ್ದಾರೆ.

ಆರು ಜಿಲ್ಲೆಗಳನ್ನು ಒಳಗೊಂಡ ಕಾನ್ಪುರ ವಿಭಾಗದ ಎಲ್ಲಾ ಗಡಿಗಳಿಗೆ ಪೊಲೀಸ್ ಕಣ್ಗಾವಲು ವಿಧಿಸಲಾಗಿದೆ.

ವಿಕಾಸ್ ದುಬೆಯನ್ನು ಹುಡುಕಿಹೋದ ಪೊಲೀಸ್ ತಂಡಗಳ ಸಮರ್ಪಕ ಯೋಜನೆಯ ಕೊರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಮಧ್ಯೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಘಟನೆಯ ಬಗ್ಗೆ ವರದಿ ಕೇಳಿದ್ದಾರೆ.

ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಯುಪಿ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ.


ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....