Homeಮುಖಪುಟ8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ವಿಕಾಸ್ ದುಬೆಯನ್ನು ಹುಡುಕಿಹೋದ ಪೊಲೀಸ್ ತಂಡಗಳ ಸಮರ್ಪಕ ಯೋಜನೆಯ ಕೊರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಮಧ್ಯೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಬಳಿಯ ಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಲು ಹೋದ 8 ಪೊಲೀಸರ ಮೇಲೆ ಆತನ ಸಹಚರರು ಗುಂಡಿಕ್ಕಿ ಕೊಂದಿರುವ ದುರ್ಘಟನೆ ಇಂದು ಮುಂಜಾನೆ ಜರುಗಿದೆ.

ಉತ್ತರ ಪ್ರದೇಶ ರಾಜಧಾನಿ ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಡಿಕ್ರು ಗ್ರಾಮದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ದಿವೇಂದ್ರ ಕುಮಾರ್ ಮಿಶ್ರಾ, ಮೂವರು ಸಬ್ ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಹತ್ಯೆ ಮಾಡಲಾಗಿದೆ.

ದರೋಡೆ, ಕೊಲೆ, ಅಪಹರಣ, ಸುಲಿಗೆ, ಗಲಭೆ, ಕ್ರಿಮಿನಲ್ ಪಿತೂರಿ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವಿಕಾಸ್ ದುಬೆ ಎಂಬಾತನನ್ನ ಹುಡುಕಿಕೊಂಡು ಮೂರು ಪೊಲೀಸ್ ಠಾಣೆಗಳ ತಂಡಗಳು ಹಳ್ಳಿಗೆ ಹೋಗಿದ್ದವು. ಆತನ ಮೇಲೆ ಸುಮಾರು 60 ಕ್ರಿಮಿನಲ್ ಪ್ರಕರಣಗಳಿದ್ದು ಹೊಸ ಕೊಲೆಗೆ ಯೋಜಿಸಿದ್ದ ಎನ್ನಲಾಗಿದೆ. ಆತನ ಸುಳಿವು ಹಿಡಿದು ಹೊರಟ ಪೊಲೀಸರ ಮೇಲೆ ಆತನ ಸಹಚರರು ಎಗ್ಗಾಮಗ್ಗಾ ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಪೊಲೀಸರು ಡಿಕ್ರು ಹಳ್ಳಿ ಸಮೀಪಿಸುತ್ತಿದ್ದಂತೆ ಭಾರೀ ಬುಲ್ಡೋಡರ್‌ಗಳನ್ನು ರಸ್ತೆಗಡ್ಡವಾಗಿ ನಿಲ್ಲಿಸಲಾಗಿತ್ತು. ಪೊಲೀಸರು ಬರುವ ಮುನ್ಸೂಚನೆ ಅರಿತಿದ್ದ ಆರೋಪಿಗಳು ಹಲವು ರಸ್ತೆಗಳನ್ನು ಬಂದ್ ಮಾಡಿದ್ದರು. ಅವುಗಳನ್ನು ತೆರವುಗೊಳಿಸಿ ಕೊನೆಗೆ ಪೊಲೀಸರು ಗ್ರಾಮ ಪ್ರವೇಶಿಸಿದ ಕೂಡಲೇ ಹಲವು ಕಟ್ಟಡಗಳ ಮೇಲ್ಛಾವಣಿಗಳಲ್ಲಿ ಅಡಗಿದ್ದ ಆರೋಪಿಗಳು ಮನಬಂದಂತೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖಂಡ ಪಿಂಟೂ ಸೆಂಗಾರ್‌ನನ್ನು ಇದೇ ಆರೋಪಿಗಳು ಜೂನ್ 18 ರಂದು ಕೊಂದಿದ್ದರು. ಈ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಮಧ್ಯಪ್ರದೇಶದ ಚಿಂದ್ವಾರದಿಂದ ಕಾನ್ಪುರ ಪೊಲೀಸರು ಗುರುವಾರ ಬಂಧಿಸಿದ್ದರು. ಆನಂತರ ಉಳಿದ ಆರೋಪಿಗಳು ಬಿಕ್ರುನಲ್ಲಿ ಹಲವು ಬಾಡಿಗೆ ಶೂಟರ್‌ಗಳೊಂದಿಗೆ ಅಡಗಿಕೊಂಡಿದ್ದರು ಎನ್ನಲಾಗಿದೆ.

ಶಿವರಾಜ್‌ಪುರದ ಸ್ಟೇಷನ್ ಆಫೀಸರ್ ಆಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ಸಬ್ ಇನ್ಸ್‌ಪೆಕ್ಟರ್ ಮಹೇಶ್ ಯಾದವ್ ಮತ್ತು ಕಾನ್‌ಸ್ಟೆಬಲ್‌ಗಳಾದ ಸುಲ್ತಾನ್ ಸಿಂಗ್, ರಾಹುಲ್, ಜಿತೇಂದ್ರ ಮತ್ತು ಬಾಬ್ಲೂ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಗುಂಡಿನ ದಾಳಿಯಲ್ಲಿ ಇತರ ಐವರು ಪೊಲೀಸರು ಗಾಯಗೊಂಡಿದ್ದಾರೆ.

“ಪೊಲೀಸರ ಕಡೆಯಿಂದಲೂ ಪ್ರತಿ ಗುಂಡಿನ ದಾಳಿ ನಡೆಯಿತು ಆದರೆ ಅಪರಾಧಿಗಳು ಕಟ್ಟಡಗಳ ಮೇಲಿದ್ದರಿಂದ ತಪ್ಪಿಸಿಕೊಂಡರು. ಪೊಲೀಸರ ಮೇಲಿನ ಏಕಾಏಕಿ ದಾಳಿಗೆ ನಮ್ಮ ಎಂಟು ಮಂದಿ ಸಾವನ್ನಪ್ಪಿದ್ದಾರೆ” ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಚ್‌ಸಿ ಅವಸ್ಥಿ ಹೇಳಿದ್ದಾರೆ.

ಎಕೆ 47 ಕಾರ್ಬೈನ್‌ಗಳ ಖಾಲಿ ಚಿಪ್ಪುಗಳನ್ನು ಮೇಲ್ಛಾವಣಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ, ಲಕ್ನೋದಿಂದ ವಿಧಿವಿಜ್ಞಾನ ತಂಡ ಆಗಮಿಸಿ ಸಾಕ್ಷ್ಯ ಸಂಗ್ರಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಕ್ರುನಿಂದ 3 ಕಿ.ಮೀ ದೂರದಲ್ಲಿರುವ ನಿವಾಡಾ ಗ್ರಾಮದಲ್ಲಿ ವಿಕಾಸ್ ದುಬೆ ಅವನ ಇಬ್ಬರು ಸಹಚರರು ಎನ್‌ಕೌಂಟರ್‌ನಲ್ಲಿ ಸಾವನಪ್ಪಿದ್ದಾರೆ. ಪೊಲೀಸರು ಆತನ ಸಹೋದರ ದಿನೇಶ್ ತಿವಾರಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

60 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ವಿಕಾಸ್ ದುಬೆ 2001 ರಲ್ಲಿ ಶಿವ್ಲಿ ಪೊಲೀಸ್ ಠಾಣೆಯೊಳಗೆ ರಾಜ್ಯ ಸಚಿವ ಮತ್ತು ಬಿಜೆಪಿ ನಾಯಕ ಸಂತೋಷ್ ಶುಕ್ಲಾ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದಾನೆ. ನಂತರ ಪ್ರಕರಣದಲ್ಲಿ ಅವನನ್ನು ಖುಲಾಸೆಗೊಳಿಸಲಾಯಿತು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಡಿಕ್ರು ಹಳ್ಳಿಗೆ ತೆರಳುತ್ತಿದ್ದಾರೆ ಮತ್ತು ಕಾನ್ಪುರದ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ದಿನೇಶ್ ಕುಮಾರ್ ಪಿ ಮತ್ತು ಇನ್ಸ್‌ಪೆಕ್ಟರ್ ಜನರಲ್ ಮೋಹಿತ್ ಅಗರ್‌ವಾಲ್ ಅವರು ಈಗಾಗಲೇ ಸ್ಥಳದಲ್ಲಿದ್ದಾರೆ.

ಆರು ಜಿಲ್ಲೆಗಳನ್ನು ಒಳಗೊಂಡ ಕಾನ್ಪುರ ವಿಭಾಗದ ಎಲ್ಲಾ ಗಡಿಗಳಿಗೆ ಪೊಲೀಸ್ ಕಣ್ಗಾವಲು ವಿಧಿಸಲಾಗಿದೆ.

ವಿಕಾಸ್ ದುಬೆಯನ್ನು ಹುಡುಕಿಹೋದ ಪೊಲೀಸ್ ತಂಡಗಳ ಸಮರ್ಪಕ ಯೋಜನೆಯ ಕೊರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಮಧ್ಯೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಘಟನೆಯ ಬಗ್ಗೆ ವರದಿ ಕೇಳಿದ್ದಾರೆ.

ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಯುಪಿ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ.


ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...