Homeಮುಖಪುಟ8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ವಿಕಾಸ್ ದುಬೆಯನ್ನು ಹುಡುಕಿಹೋದ ಪೊಲೀಸ್ ತಂಡಗಳ ಸಮರ್ಪಕ ಯೋಜನೆಯ ಕೊರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಮಧ್ಯೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಬಳಿಯ ಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಲು ಹೋದ 8 ಪೊಲೀಸರ ಮೇಲೆ ಆತನ ಸಹಚರರು ಗುಂಡಿಕ್ಕಿ ಕೊಂದಿರುವ ದುರ್ಘಟನೆ ಇಂದು ಮುಂಜಾನೆ ಜರುಗಿದೆ.

ಉತ್ತರ ಪ್ರದೇಶ ರಾಜಧಾನಿ ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಡಿಕ್ರು ಗ್ರಾಮದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ದಿವೇಂದ್ರ ಕುಮಾರ್ ಮಿಶ್ರಾ, ಮೂವರು ಸಬ್ ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಹತ್ಯೆ ಮಾಡಲಾಗಿದೆ.

ದರೋಡೆ, ಕೊಲೆ, ಅಪಹರಣ, ಸುಲಿಗೆ, ಗಲಭೆ, ಕ್ರಿಮಿನಲ್ ಪಿತೂರಿ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವಿಕಾಸ್ ದುಬೆ ಎಂಬಾತನನ್ನ ಹುಡುಕಿಕೊಂಡು ಮೂರು ಪೊಲೀಸ್ ಠಾಣೆಗಳ ತಂಡಗಳು ಹಳ್ಳಿಗೆ ಹೋಗಿದ್ದವು. ಆತನ ಮೇಲೆ ಸುಮಾರು 60 ಕ್ರಿಮಿನಲ್ ಪ್ರಕರಣಗಳಿದ್ದು ಹೊಸ ಕೊಲೆಗೆ ಯೋಜಿಸಿದ್ದ ಎನ್ನಲಾಗಿದೆ. ಆತನ ಸುಳಿವು ಹಿಡಿದು ಹೊರಟ ಪೊಲೀಸರ ಮೇಲೆ ಆತನ ಸಹಚರರು ಎಗ್ಗಾಮಗ್ಗಾ ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಪೊಲೀಸರು ಡಿಕ್ರು ಹಳ್ಳಿ ಸಮೀಪಿಸುತ್ತಿದ್ದಂತೆ ಭಾರೀ ಬುಲ್ಡೋಡರ್‌ಗಳನ್ನು ರಸ್ತೆಗಡ್ಡವಾಗಿ ನಿಲ್ಲಿಸಲಾಗಿತ್ತು. ಪೊಲೀಸರು ಬರುವ ಮುನ್ಸೂಚನೆ ಅರಿತಿದ್ದ ಆರೋಪಿಗಳು ಹಲವು ರಸ್ತೆಗಳನ್ನು ಬಂದ್ ಮಾಡಿದ್ದರು. ಅವುಗಳನ್ನು ತೆರವುಗೊಳಿಸಿ ಕೊನೆಗೆ ಪೊಲೀಸರು ಗ್ರಾಮ ಪ್ರವೇಶಿಸಿದ ಕೂಡಲೇ ಹಲವು ಕಟ್ಟಡಗಳ ಮೇಲ್ಛಾವಣಿಗಳಲ್ಲಿ ಅಡಗಿದ್ದ ಆರೋಪಿಗಳು ಮನಬಂದಂತೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖಂಡ ಪಿಂಟೂ ಸೆಂಗಾರ್‌ನನ್ನು ಇದೇ ಆರೋಪಿಗಳು ಜೂನ್ 18 ರಂದು ಕೊಂದಿದ್ದರು. ಈ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಮಧ್ಯಪ್ರದೇಶದ ಚಿಂದ್ವಾರದಿಂದ ಕಾನ್ಪುರ ಪೊಲೀಸರು ಗುರುವಾರ ಬಂಧಿಸಿದ್ದರು. ಆನಂತರ ಉಳಿದ ಆರೋಪಿಗಳು ಬಿಕ್ರುನಲ್ಲಿ ಹಲವು ಬಾಡಿಗೆ ಶೂಟರ್‌ಗಳೊಂದಿಗೆ ಅಡಗಿಕೊಂಡಿದ್ದರು ಎನ್ನಲಾಗಿದೆ.

ಶಿವರಾಜ್‌ಪುರದ ಸ್ಟೇಷನ್ ಆಫೀಸರ್ ಆಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ಸಬ್ ಇನ್ಸ್‌ಪೆಕ್ಟರ್ ಮಹೇಶ್ ಯಾದವ್ ಮತ್ತು ಕಾನ್‌ಸ್ಟೆಬಲ್‌ಗಳಾದ ಸುಲ್ತಾನ್ ಸಿಂಗ್, ರಾಹುಲ್, ಜಿತೇಂದ್ರ ಮತ್ತು ಬಾಬ್ಲೂ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಗುಂಡಿನ ದಾಳಿಯಲ್ಲಿ ಇತರ ಐವರು ಪೊಲೀಸರು ಗಾಯಗೊಂಡಿದ್ದಾರೆ.

“ಪೊಲೀಸರ ಕಡೆಯಿಂದಲೂ ಪ್ರತಿ ಗುಂಡಿನ ದಾಳಿ ನಡೆಯಿತು ಆದರೆ ಅಪರಾಧಿಗಳು ಕಟ್ಟಡಗಳ ಮೇಲಿದ್ದರಿಂದ ತಪ್ಪಿಸಿಕೊಂಡರು. ಪೊಲೀಸರ ಮೇಲಿನ ಏಕಾಏಕಿ ದಾಳಿಗೆ ನಮ್ಮ ಎಂಟು ಮಂದಿ ಸಾವನ್ನಪ್ಪಿದ್ದಾರೆ” ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಚ್‌ಸಿ ಅವಸ್ಥಿ ಹೇಳಿದ್ದಾರೆ.

ಎಕೆ 47 ಕಾರ್ಬೈನ್‌ಗಳ ಖಾಲಿ ಚಿಪ್ಪುಗಳನ್ನು ಮೇಲ್ಛಾವಣಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ, ಲಕ್ನೋದಿಂದ ವಿಧಿವಿಜ್ಞಾನ ತಂಡ ಆಗಮಿಸಿ ಸಾಕ್ಷ್ಯ ಸಂಗ್ರಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಕ್ರುನಿಂದ 3 ಕಿ.ಮೀ ದೂರದಲ್ಲಿರುವ ನಿವಾಡಾ ಗ್ರಾಮದಲ್ಲಿ ವಿಕಾಸ್ ದುಬೆ ಅವನ ಇಬ್ಬರು ಸಹಚರರು ಎನ್‌ಕೌಂಟರ್‌ನಲ್ಲಿ ಸಾವನಪ್ಪಿದ್ದಾರೆ. ಪೊಲೀಸರು ಆತನ ಸಹೋದರ ದಿನೇಶ್ ತಿವಾರಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

60 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ವಿಕಾಸ್ ದುಬೆ 2001 ರಲ್ಲಿ ಶಿವ್ಲಿ ಪೊಲೀಸ್ ಠಾಣೆಯೊಳಗೆ ರಾಜ್ಯ ಸಚಿವ ಮತ್ತು ಬಿಜೆಪಿ ನಾಯಕ ಸಂತೋಷ್ ಶುಕ್ಲಾ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದಾನೆ. ನಂತರ ಪ್ರಕರಣದಲ್ಲಿ ಅವನನ್ನು ಖುಲಾಸೆಗೊಳಿಸಲಾಯಿತು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಡಿಕ್ರು ಹಳ್ಳಿಗೆ ತೆರಳುತ್ತಿದ್ದಾರೆ ಮತ್ತು ಕಾನ್ಪುರದ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ದಿನೇಶ್ ಕುಮಾರ್ ಪಿ ಮತ್ತು ಇನ್ಸ್‌ಪೆಕ್ಟರ್ ಜನರಲ್ ಮೋಹಿತ್ ಅಗರ್‌ವಾಲ್ ಅವರು ಈಗಾಗಲೇ ಸ್ಥಳದಲ್ಲಿದ್ದಾರೆ.

ಆರು ಜಿಲ್ಲೆಗಳನ್ನು ಒಳಗೊಂಡ ಕಾನ್ಪುರ ವಿಭಾಗದ ಎಲ್ಲಾ ಗಡಿಗಳಿಗೆ ಪೊಲೀಸ್ ಕಣ್ಗಾವಲು ವಿಧಿಸಲಾಗಿದೆ.

ವಿಕಾಸ್ ದುಬೆಯನ್ನು ಹುಡುಕಿಹೋದ ಪೊಲೀಸ್ ತಂಡಗಳ ಸಮರ್ಪಕ ಯೋಜನೆಯ ಕೊರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಮಧ್ಯೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಘಟನೆಯ ಬಗ್ಗೆ ವರದಿ ಕೇಳಿದ್ದಾರೆ.

ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಯುಪಿ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ.


ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...