Homeಮುಖಪುಟಕ್ರಿಮಿನಲ್ ವ್ಯಾಪ್ತಿಗೆ ಸಲಿಂಗಕಾಮ, ಸೆಕ್ಸ್‌ ವರ್ಕ್‌? ಸಂಸದೀಯ ಸಮಿತಿ ಸಲಹೆ ತಿರಸ್ಕರಿಸಿದ ಪಿಎಂ

ಕ್ರಿಮಿನಲ್ ವ್ಯಾಪ್ತಿಗೆ ಸಲಿಂಗಕಾಮ, ಸೆಕ್ಸ್‌ ವರ್ಕ್‌? ಸಂಸದೀಯ ಸಮಿತಿ ಸಲಹೆ ತಿರಸ್ಕರಿಸಿದ ಪಿಎಂ

- Advertisement -
- Advertisement -

ಸ್ವಾತಂತ್ರ್ಯ ಪೂರ್ವದಲ್ಲಿ ಜಾರಿಯಾಗಿರುವ ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಮುಂದಾಗಿರುವ ‘ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆ’ಗಳನ್ನು ಮಂಡಿಸಲು ಕೇಂದ್ರ ಸಂಪುಟ ಸಭೆಯು ಗೃಹ ಸಚಿವ ಅಮಿತ್ ಶಾ ಅವರಿಗೆ ಅನುಮತಿ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸೆಕ್ಸ್‌ವರ್ಕ್‌ ಮತ್ತು ಸಲಿಂಗ ಸಂಬಂಧಗಳನ್ನು ಕ್ರಿಮಿನಲ್ ವ್ಯಾಪ್ತಿಗೆ ತರುವುದಕ್ಕೆ ಗೃಹ ಇಲಾಖೆಗೆ ಸಂಸದೀಯ ಸ್ಥಾಯಿ ಸಮಿತಿ ನೀಡಿದ ಎರಡು ಪ್ರಮುಖ ಸಲಹೆಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಕಚೇರಿ ಒಪ್ಪಲಿಲ್ಲ ಎನ್ನಲಾಗಿದೆ. ಏಕೆಂದರೆ, ಇವುಗಳನ್ನು ಕ್ರಿಮಿನಲ್ ವ್ಯಾಪ್ತಿಗೆ ತರುವುದರಿಂದ ಸರ್ಕಾರವು ದೂರಗಾಮಿ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಮುಖ್ಯವಾಗಿ, ಸುಪ್ರೀಂಕೋರ್ಟ್ ಮತ್ತು ಅದರ ತೀರ್ಪುಗಳಿಗೆ ವಿರುದ್ಧವಾಗಿ ನಡೆದುಕೊಳ್ಳಬೇಕಾಗುತ್ತದೆ ಎಂಬ ಕಾರಣಕ್ಕೆ ನಿರಾಕರಿಸಿದೆ ಎನ್ನಲಾಗಿದೆ.

2023ರ ಭಾರತೀಯ ನ್ಯಾಯ ಸಂಹಿತಾ ಮಸೂದೆಯಲ್ಲಿ ವ್ಯಭಿಚಾರದ ಅಪರಾಧವನ್ನು ಉಳಿಸಿಕೊಳ್ಳಬೇಕೆಂದು ಸಮಿತಿಯು ಶಿಫಾರಸು ಮಾಡಿತ್ತು. ಆದರೆ 2018 ರಲ್ಲಿ ಸುಪ್ರೀಂಕೋರ್ಟ್ ಇದನ್ನು ಅಪರಾಧ ಎಂದು ಕರೆಯುವುದಕ್ಕೆ ನಿರಾಕರಿಸಿತ್ತು. ಈ ನಿರ್ಧಾರವು ಮಹಿಳೆಯರ ವಿರುದ್ಧ ತಾರತಮ್ಯವನ್ನು ಶಾಶ್ವತಗೊಳಿಸುತ್ತದೆ ಮತ್ತು ಮಹಿಳೆಯರ ಘನತೆಯನ್ನು ಕುಗ್ಗಿಸುತ್ತದೆ ಎಂದು ಹೇಳಿತ್ತು.

ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 377ರ ಅಡಿಯಲ್ಲಿ ಒಮ್ಮತವಿಲ್ಲದ ಕಾರ್ಯಗಳಿಗೆ ದಂಡ ವಿಧಿಸುವುದು ಸ್ಥಾಯಿ ಸಮಿತಿಯ ಮತ್ತೊಂದು ಶಿಫಾರಸು. ಒಪ್ಪಿಗೆಯ ವಯಸ್ಕರ ನಡುವಿನ ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವುದನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ್ದರೂ ಸಹ, ಹೊಸ ಮಸೂದೆಯಲ್ಲಿ ಈ ನಿಬಂಧನೆಯನ್ನು ಉಳಿಸಿಕೊಳ್ಳಲು ಗೃಹ ಇಲಾಖೆ ಮನವಿ ಮಾಡಿದೆ. ಪುರುಷ, ಮಹಿಳೆ, ತೃತೀಯಲಿಂಗಿಗಳ ಸಮ್ಮತಿಯಿಲ್ಲದ ಲೈಂಗಿಕ ಅಪರಾಧಕ್ಕೆ ಶಿಕ್ಷೆ ವಿಧಿಸುವುದಕ್ಕೆ ಯಾವುದೇ ನಿಬಂಧನೆ ಇಲ್ಲ ಎಂದು ಹೇಳಿದ್ದಾರೆ.

ವ್ಯಭಿಚಾರದ ಅಪರಾಧದಲ್ಲಿ ಮಹಿಳೆಯ ಸ್ವಾಯತ್ತತೆಯನ್ನು ಕಡೆಗಣಿಸಿ ಪುರುಷನಿಗೆ ಮಾತ್ರ ದಂಡ ವಿಧಿಸುವ ಮೂಲಕ ಹೆಂಡತಿಯನ್ನು ಗಂಡನ ಆಸ್ತಿಯಂತೆ ಪರಿಗಣಿಸಲಾಗಿದೆ ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಈ ಹಿಂದೆ ಹೇಳಿದೆ. ಸಂಸದೀಯ ಸಮಿತಿಯು ವೈವಾಹಿಕ ವ್ಯವಸ್ಥೆಯನ್ನು ಪವಿತ್ರವೆಂದು ಪರಿಗಣಿಸಲಾಗಿದೆ ಮತ್ತು ಭಾರತೀಯ ಸಮಾಜದಲ್ಲಿ ಅದನ್ನು ರಕ್ಷಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ಆದರೆ, ಪ್ರಧಾನಿ ಕಚೇರಿ ಮತ್ತು ಸಚಿವ ಸಂಪುಟ ಈ ಶಿಫಾರಸನ್ನು ಒಪ್ಪಿಕೊಳ್ಳದಿರುವ ನಿರ್ಧಾರಕ್ಕೆ ಬಂದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ; ‘ಇತಿಹಾಸವೊಂದೇ ಅಂತಿಮ ತೀರ್ಪುಗಾರ’; ಸುಪ್ರೀಂ ತೀರ್ಪಿನ ಬಳಿಕ ಕಪಿಲ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...