Homeಮುಖಪುಟಕ್ರಿಮಿನಲ್ ವ್ಯಾಪ್ತಿಗೆ ಸಲಿಂಗಕಾಮ, ಸೆಕ್ಸ್‌ ವರ್ಕ್‌? ಸಂಸದೀಯ ಸಮಿತಿ ಸಲಹೆ ತಿರಸ್ಕರಿಸಿದ ಪಿಎಂ

ಕ್ರಿಮಿನಲ್ ವ್ಯಾಪ್ತಿಗೆ ಸಲಿಂಗಕಾಮ, ಸೆಕ್ಸ್‌ ವರ್ಕ್‌? ಸಂಸದೀಯ ಸಮಿತಿ ಸಲಹೆ ತಿರಸ್ಕರಿಸಿದ ಪಿಎಂ

- Advertisement -
- Advertisement -

ಸ್ವಾತಂತ್ರ್ಯ ಪೂರ್ವದಲ್ಲಿ ಜಾರಿಯಾಗಿರುವ ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಮುಂದಾಗಿರುವ ‘ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆ’ಗಳನ್ನು ಮಂಡಿಸಲು ಕೇಂದ್ರ ಸಂಪುಟ ಸಭೆಯು ಗೃಹ ಸಚಿವ ಅಮಿತ್ ಶಾ ಅವರಿಗೆ ಅನುಮತಿ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸೆಕ್ಸ್‌ವರ್ಕ್‌ ಮತ್ತು ಸಲಿಂಗ ಸಂಬಂಧಗಳನ್ನು ಕ್ರಿಮಿನಲ್ ವ್ಯಾಪ್ತಿಗೆ ತರುವುದಕ್ಕೆ ಗೃಹ ಇಲಾಖೆಗೆ ಸಂಸದೀಯ ಸ್ಥಾಯಿ ಸಮಿತಿ ನೀಡಿದ ಎರಡು ಪ್ರಮುಖ ಸಲಹೆಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಕಚೇರಿ ಒಪ್ಪಲಿಲ್ಲ ಎನ್ನಲಾಗಿದೆ. ಏಕೆಂದರೆ, ಇವುಗಳನ್ನು ಕ್ರಿಮಿನಲ್ ವ್ಯಾಪ್ತಿಗೆ ತರುವುದರಿಂದ ಸರ್ಕಾರವು ದೂರಗಾಮಿ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಮುಖ್ಯವಾಗಿ, ಸುಪ್ರೀಂಕೋರ್ಟ್ ಮತ್ತು ಅದರ ತೀರ್ಪುಗಳಿಗೆ ವಿರುದ್ಧವಾಗಿ ನಡೆದುಕೊಳ್ಳಬೇಕಾಗುತ್ತದೆ ಎಂಬ ಕಾರಣಕ್ಕೆ ನಿರಾಕರಿಸಿದೆ ಎನ್ನಲಾಗಿದೆ.

2023ರ ಭಾರತೀಯ ನ್ಯಾಯ ಸಂಹಿತಾ ಮಸೂದೆಯಲ್ಲಿ ವ್ಯಭಿಚಾರದ ಅಪರಾಧವನ್ನು ಉಳಿಸಿಕೊಳ್ಳಬೇಕೆಂದು ಸಮಿತಿಯು ಶಿಫಾರಸು ಮಾಡಿತ್ತು. ಆದರೆ 2018 ರಲ್ಲಿ ಸುಪ್ರೀಂಕೋರ್ಟ್ ಇದನ್ನು ಅಪರಾಧ ಎಂದು ಕರೆಯುವುದಕ್ಕೆ ನಿರಾಕರಿಸಿತ್ತು. ಈ ನಿರ್ಧಾರವು ಮಹಿಳೆಯರ ವಿರುದ್ಧ ತಾರತಮ್ಯವನ್ನು ಶಾಶ್ವತಗೊಳಿಸುತ್ತದೆ ಮತ್ತು ಮಹಿಳೆಯರ ಘನತೆಯನ್ನು ಕುಗ್ಗಿಸುತ್ತದೆ ಎಂದು ಹೇಳಿತ್ತು.

ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 377ರ ಅಡಿಯಲ್ಲಿ ಒಮ್ಮತವಿಲ್ಲದ ಕಾರ್ಯಗಳಿಗೆ ದಂಡ ವಿಧಿಸುವುದು ಸ್ಥಾಯಿ ಸಮಿತಿಯ ಮತ್ತೊಂದು ಶಿಫಾರಸು. ಒಪ್ಪಿಗೆಯ ವಯಸ್ಕರ ನಡುವಿನ ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವುದನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ್ದರೂ ಸಹ, ಹೊಸ ಮಸೂದೆಯಲ್ಲಿ ಈ ನಿಬಂಧನೆಯನ್ನು ಉಳಿಸಿಕೊಳ್ಳಲು ಗೃಹ ಇಲಾಖೆ ಮನವಿ ಮಾಡಿದೆ. ಪುರುಷ, ಮಹಿಳೆ, ತೃತೀಯಲಿಂಗಿಗಳ ಸಮ್ಮತಿಯಿಲ್ಲದ ಲೈಂಗಿಕ ಅಪರಾಧಕ್ಕೆ ಶಿಕ್ಷೆ ವಿಧಿಸುವುದಕ್ಕೆ ಯಾವುದೇ ನಿಬಂಧನೆ ಇಲ್ಲ ಎಂದು ಹೇಳಿದ್ದಾರೆ.

ವ್ಯಭಿಚಾರದ ಅಪರಾಧದಲ್ಲಿ ಮಹಿಳೆಯ ಸ್ವಾಯತ್ತತೆಯನ್ನು ಕಡೆಗಣಿಸಿ ಪುರುಷನಿಗೆ ಮಾತ್ರ ದಂಡ ವಿಧಿಸುವ ಮೂಲಕ ಹೆಂಡತಿಯನ್ನು ಗಂಡನ ಆಸ್ತಿಯಂತೆ ಪರಿಗಣಿಸಲಾಗಿದೆ ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಈ ಹಿಂದೆ ಹೇಳಿದೆ. ಸಂಸದೀಯ ಸಮಿತಿಯು ವೈವಾಹಿಕ ವ್ಯವಸ್ಥೆಯನ್ನು ಪವಿತ್ರವೆಂದು ಪರಿಗಣಿಸಲಾಗಿದೆ ಮತ್ತು ಭಾರತೀಯ ಸಮಾಜದಲ್ಲಿ ಅದನ್ನು ರಕ್ಷಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ಆದರೆ, ಪ್ರಧಾನಿ ಕಚೇರಿ ಮತ್ತು ಸಚಿವ ಸಂಪುಟ ಈ ಶಿಫಾರಸನ್ನು ಒಪ್ಪಿಕೊಳ್ಳದಿರುವ ನಿರ್ಧಾರಕ್ಕೆ ಬಂದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ; ‘ಇತಿಹಾಸವೊಂದೇ ಅಂತಿಮ ತೀರ್ಪುಗಾರ’; ಸುಪ್ರೀಂ ತೀರ್ಪಿನ ಬಳಿಕ ಕಪಿಲ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...