Homeಕರ್ನಾಟಕರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ಯತ್ನಾಳ್​ ಇತ್ತೀಚೆಗೆ ಮುಖ್ಯಮಂತ್ರಿಯ ಕಾರ್ಯ ವೈಖರಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರಿಗೆ ಬಹಿರಂಗ ಪತ್ರ ಬರೆದಿದ್ದರು.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿರುವ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಯಡಿಯೂರಪ್ಪ ಬೆಂಬಲಿಗರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದಾರೆ. “ರಾಜ್ಯ ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವ ಯತ್ನಾಳ್ ಮೇಲೆ ಕ್ರಮ ಕೈಗೊಳ್ಳಿ” ಎಂದು ಪತ್ರ ಬರೆದಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈಗಾಗಲೇ ಯತ್ನಾಳ್ ಅವರೊಂದಿಗೆ ಮಾತನಾಡಿದ್ದು, ಕೇಂದ್ರದ ಶಿಸ್ತಿನ ಸಮಿತಿ ಅವರ ಹೇಳಿಕೆಗಳನ್ನು ಗಮನಿಸುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ, “ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಉಳಿಯುವುದಿಲ್ಲ. ಕೇಂದ್ರರು ನಾಯಕರು ಅವರಿಗೆ ಗಡುವು ನೀಡಿದ್ದಾರೆ. ಜನವರಿ 14 ರಂದು ಸಂಕ್ರಾಂತಿ ಹಬ್ಬಕ್ಕಿಂತ ಮೊದಲು ಯಡಿಯೂರಪ್ಪನನ್ನು ಬದಲಾಯಿಸಲಾಗುವುದು” ಎಂದು ಹೇಳಿದ್ದರು.

ಇದನ್ನೂ ಓದಿ: ಬಿಎಸ್​ವೈ ವಿರುದ್ಧ ಮತ್ತೆ ಅಪಸ್ವರ ಎತ್ತಿದ ಯತ್ನಾಳ್​; ಸಿಎಂ ಕಾರ್ಯವೈಖರಿ ಖಂಡಿಸಿ ಕಟೀಲ್​ಗೆ ಪತ್ರ

ಯತ್ನಾಳ್ ಮತ್ತು ಬಿಜೆಪಿ ನಡುವಿನ ಮುಸುಕಿನ ಗುದ್ದಾಟ ತುಂಬಾ ದಿನದಿಂದ ನಡೆಯುತ್ತಿದೆ. 2009 ರಲ್ಲಿ, ಎರಡು ಬಾರಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾಗಿದ್ದ ಯತ್ನಾಳ್‌ ಅವರಿಗೆ ಟಿಕೆಟ್ ನಿರಾಕರಿಸಿದಾಗ, ಅವರು ಜೆಡಿಎಸ್‌ಗೆ ಪಕ್ಷಾಂತರವಾಗಿದ್ದರು. ನಂತರ 2013 ರಲ್ಲಿ ಮತ್ತೆ ಬಿಜೆಪಿಗೆ ಸೇರಿದ್ದರು. ಆದರೆ 2015 ರಲ್ಲಿ ಅವರನ್ನು ಪಕ್ಷದಿಂದ ಮತ್ತೆ ಹೊರಹಾಕಲಾಯಿತು. ಇತ್ತೀಚಿಗೆ 2018 ರಲ್ಲಿ ಮತ್ತೆ ಪಕ್ಷಕ್ಕೆ ಸೇರಿಕೊಂಡಿದ್ದರು. ಅಂದಿನ ಮುಖ್ಯಮಂತ್ರಿಯಾಗಿದ್ದ ಡಿ.ವಿ ಸದಾನಂದ ಗೌಡ ಅವರು ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡದಂತೆ ಯತ್ನಾಳ್ ಅವರಿಗೆ ಆದೇಶಿಸಿದ್ದರು. ಆದರೆ ಯತ್ನಾಳ್‌, “ತಾನು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸೇವೆ ಸಲ್ಲಿಸಿರುವುದಾಗಿಯೂ, ಸದಾನಂದ ಗೌಡ ತಮಗಿಂತ ಕಿರಿಯರು” ಎಂದು ತಿರುಗೇಟು ನೀಡಿದ್ದರು.

ಭಾನುವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಯತ್ನಾಳ್‌ ಅವರ ಹೇಳಿಕೆಯ ಕುರಿತು ಚರ್ಚೆ ಮಾಡುವುದಿಲ್ಲ ಎಂದು ಪಕ್ಷದ ಅಧಿಕೃತ ವಕ್ತಾರ ಗಣೇಶ್ ಕಾರ್ನಿಕ್ ಹೇಳಿದ್ದಾರೆ. “ಆದರೆ ಯತ್ನಾಳ್‌ ಅವರನ್ನು ಮೂರರಿಂದ ನಾಲ್ಕು ಪ್ರಬಲ ನಾಯಕರು ಬೆಂಬಲಿಸುತ್ತಿದ್ದಾರೆ ಎನಿಸುತ್ತದೆ. ಯಾಕೆಂದರೆ, ಉನ್ನತ ನಾಯಕರ ವಿರುದ್ಧ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರೂ ಅವರು ಪಕ್ಷದಲ್ಲಿ ಉಳಿಯಲು ಹೇಗೆ ಸಾಧ್ಯ?” ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಬಿಜೆಪಿ ಪಕ್ಷ ರಾಜ್ಯದಲ್ಲಿ ತಮ್ಮ ನಿರೀಕ್ಷೆಯಂತೆ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷದ ಮೇಲಾಗಿದೆ. ಆದರೂ ಆಂತರಿಕ ಬಿಕ್ಕಟ್ಟು ಮಾತ್ರ ಇನ್ನೂ ಶಮನವಾಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಇನ್ನು, ವಿರೋಧ ಪಕ್ಷಗಳಿಗಿಂತ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿ ಬಿಎಸ್​ವೈ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಪಕ್ಷಕ್ಕೆ ಬಿಸಿತುಪ್ಪವಾಗಿ ಪರಿಣಮಿಸುತ್ತಿದೆ. ಪಕ್ಷದ ನಾಯಕರು ಎಷ್ಟೇ ಹೇಳಿದರೂ ಬಿಎಸ್​ ಯಡಿಯೂರಪ್ಪ ವಿರುದ್ಧದ ತಮ್ಮ ವಾಡಿಕೆಯ ವಾಗ್ದಾಳಿಯನ್ನು ನಿಲ್ಲಿಸಿಲ್ಲ.

ಯತ್ನಾಳ್​ ಇತ್ತೀಚೆಗೆ ಮುಖ್ಯಮಂತ್ರಿಯ ಕಾರ್ಯ ವೈಖರಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರಿಗೆ ಬಹಿರಂಗ ಪತ್ರ ಬರೆದಿದ್ದರು.

ಆಡಳಿತ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಜನವರಿ.4 ಮತ್ತು 5 ರಂದು ಬೆಂಗಳೂರಿನಲ್ಲಿ ವಿಭಾಗವಾರು ಶಾಸಕರ ಸಭೆ ಕರೆದಿದ್ದಾರೆ. ಆದರೆ, ಈ ಸಭೆಯ ವಿಚಾರವನ್ನು ಮುಂದಿಟ್ಟುಕೊಂಡು ಶಾಸಕ ಯತ್ನಾಳ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್​ ಕಟೀಲ್ ಅವರಿಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...