Homeಕರ್ನಾಟಕರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ಯತ್ನಾಳ್​ ಇತ್ತೀಚೆಗೆ ಮುಖ್ಯಮಂತ್ರಿಯ ಕಾರ್ಯ ವೈಖರಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರಿಗೆ ಬಹಿರಂಗ ಪತ್ರ ಬರೆದಿದ್ದರು.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿರುವ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಯಡಿಯೂರಪ್ಪ ಬೆಂಬಲಿಗರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದಾರೆ. “ರಾಜ್ಯ ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವ ಯತ್ನಾಳ್ ಮೇಲೆ ಕ್ರಮ ಕೈಗೊಳ್ಳಿ” ಎಂದು ಪತ್ರ ಬರೆದಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈಗಾಗಲೇ ಯತ್ನಾಳ್ ಅವರೊಂದಿಗೆ ಮಾತನಾಡಿದ್ದು, ಕೇಂದ್ರದ ಶಿಸ್ತಿನ ಸಮಿತಿ ಅವರ ಹೇಳಿಕೆಗಳನ್ನು ಗಮನಿಸುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ, “ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಉಳಿಯುವುದಿಲ್ಲ. ಕೇಂದ್ರರು ನಾಯಕರು ಅವರಿಗೆ ಗಡುವು ನೀಡಿದ್ದಾರೆ. ಜನವರಿ 14 ರಂದು ಸಂಕ್ರಾಂತಿ ಹಬ್ಬಕ್ಕಿಂತ ಮೊದಲು ಯಡಿಯೂರಪ್ಪನನ್ನು ಬದಲಾಯಿಸಲಾಗುವುದು” ಎಂದು ಹೇಳಿದ್ದರು.

ಇದನ್ನೂ ಓದಿ: ಬಿಎಸ್​ವೈ ವಿರುದ್ಧ ಮತ್ತೆ ಅಪಸ್ವರ ಎತ್ತಿದ ಯತ್ನಾಳ್​; ಸಿಎಂ ಕಾರ್ಯವೈಖರಿ ಖಂಡಿಸಿ ಕಟೀಲ್​ಗೆ ಪತ್ರ

ಯತ್ನಾಳ್ ಮತ್ತು ಬಿಜೆಪಿ ನಡುವಿನ ಮುಸುಕಿನ ಗುದ್ದಾಟ ತುಂಬಾ ದಿನದಿಂದ ನಡೆಯುತ್ತಿದೆ. 2009 ರಲ್ಲಿ, ಎರಡು ಬಾರಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾಗಿದ್ದ ಯತ್ನಾಳ್‌ ಅವರಿಗೆ ಟಿಕೆಟ್ ನಿರಾಕರಿಸಿದಾಗ, ಅವರು ಜೆಡಿಎಸ್‌ಗೆ ಪಕ್ಷಾಂತರವಾಗಿದ್ದರು. ನಂತರ 2013 ರಲ್ಲಿ ಮತ್ತೆ ಬಿಜೆಪಿಗೆ ಸೇರಿದ್ದರು. ಆದರೆ 2015 ರಲ್ಲಿ ಅವರನ್ನು ಪಕ್ಷದಿಂದ ಮತ್ತೆ ಹೊರಹಾಕಲಾಯಿತು. ಇತ್ತೀಚಿಗೆ 2018 ರಲ್ಲಿ ಮತ್ತೆ ಪಕ್ಷಕ್ಕೆ ಸೇರಿಕೊಂಡಿದ್ದರು. ಅಂದಿನ ಮುಖ್ಯಮಂತ್ರಿಯಾಗಿದ್ದ ಡಿ.ವಿ ಸದಾನಂದ ಗೌಡ ಅವರು ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡದಂತೆ ಯತ್ನಾಳ್ ಅವರಿಗೆ ಆದೇಶಿಸಿದ್ದರು. ಆದರೆ ಯತ್ನಾಳ್‌, “ತಾನು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸೇವೆ ಸಲ್ಲಿಸಿರುವುದಾಗಿಯೂ, ಸದಾನಂದ ಗೌಡ ತಮಗಿಂತ ಕಿರಿಯರು” ಎಂದು ತಿರುಗೇಟು ನೀಡಿದ್ದರು.

ಭಾನುವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಯತ್ನಾಳ್‌ ಅವರ ಹೇಳಿಕೆಯ ಕುರಿತು ಚರ್ಚೆ ಮಾಡುವುದಿಲ್ಲ ಎಂದು ಪಕ್ಷದ ಅಧಿಕೃತ ವಕ್ತಾರ ಗಣೇಶ್ ಕಾರ್ನಿಕ್ ಹೇಳಿದ್ದಾರೆ. “ಆದರೆ ಯತ್ನಾಳ್‌ ಅವರನ್ನು ಮೂರರಿಂದ ನಾಲ್ಕು ಪ್ರಬಲ ನಾಯಕರು ಬೆಂಬಲಿಸುತ್ತಿದ್ದಾರೆ ಎನಿಸುತ್ತದೆ. ಯಾಕೆಂದರೆ, ಉನ್ನತ ನಾಯಕರ ವಿರುದ್ಧ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರೂ ಅವರು ಪಕ್ಷದಲ್ಲಿ ಉಳಿಯಲು ಹೇಗೆ ಸಾಧ್ಯ?” ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಬಿಜೆಪಿ ಪಕ್ಷ ರಾಜ್ಯದಲ್ಲಿ ತಮ್ಮ ನಿರೀಕ್ಷೆಯಂತೆ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷದ ಮೇಲಾಗಿದೆ. ಆದರೂ ಆಂತರಿಕ ಬಿಕ್ಕಟ್ಟು ಮಾತ್ರ ಇನ್ನೂ ಶಮನವಾಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಇನ್ನು, ವಿರೋಧ ಪಕ್ಷಗಳಿಗಿಂತ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿ ಬಿಎಸ್​ವೈ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಪಕ್ಷಕ್ಕೆ ಬಿಸಿತುಪ್ಪವಾಗಿ ಪರಿಣಮಿಸುತ್ತಿದೆ. ಪಕ್ಷದ ನಾಯಕರು ಎಷ್ಟೇ ಹೇಳಿದರೂ ಬಿಎಸ್​ ಯಡಿಯೂರಪ್ಪ ವಿರುದ್ಧದ ತಮ್ಮ ವಾಡಿಕೆಯ ವಾಗ್ದಾಳಿಯನ್ನು ನಿಲ್ಲಿಸಿಲ್ಲ.

ಯತ್ನಾಳ್​ ಇತ್ತೀಚೆಗೆ ಮುಖ್ಯಮಂತ್ರಿಯ ಕಾರ್ಯ ವೈಖರಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರಿಗೆ ಬಹಿರಂಗ ಪತ್ರ ಬರೆದಿದ್ದರು.

ಆಡಳಿತ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಜನವರಿ.4 ಮತ್ತು 5 ರಂದು ಬೆಂಗಳೂರಿನಲ್ಲಿ ವಿಭಾಗವಾರು ಶಾಸಕರ ಸಭೆ ಕರೆದಿದ್ದಾರೆ. ಆದರೆ, ಈ ಸಭೆಯ ವಿಚಾರವನ್ನು ಮುಂದಿಟ್ಟುಕೊಂಡು ಶಾಸಕ ಯತ್ನಾಳ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್​ ಕಟೀಲ್ ಅವರಿಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...