Homeಮುಖಪುಟಮಹಾರಾಷ್ಟ್ರ ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟು : ಮಿತ್ರಪಕ್ಷಗಳ ಸಭೆ ಕರೆದ ಉದ್ದವ್ ಠಾಕ್ರೆ

ಮಹಾರಾಷ್ಟ್ರ ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟು : ಮಿತ್ರಪಕ್ಷಗಳ ಸಭೆ ಕರೆದ ಉದ್ದವ್ ಠಾಕ್ರೆ

- Advertisement -
- Advertisement -

ಮಹಾ ವಿಕಾಸ್‌ ಅಗಾಡಿ ನಾಯಕರು ನಿನ್ನೆ ರಾಜ್ಯಪಾಲರನ್ನು ಪ್ರತ್ಯೇಕವಾಗಿ ಭೇಟಿ ಮಾಡಿರುವುದು ಮಹಾರಾಷ್ಟ್ರದ ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟು ಸೃಷ್ಟಿಗೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದಕ್ಕಿಂತಲೂ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಸರ್ಕಾರದಿಂದ ಅಂತರ ಕಾಯ್ದುಕೊಳ್ಳಿ ಎಂದಿರುವುದರಿಂದ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಮಿತ್ರಪಕ್ಷಗಳ ಸಭೆ ಕರೆದಿದ್ದಾರೆ.

ಮಹಾ ವಿಕಾಸ್‌ ಅಗಾಡಿ ನಾಯಕರ ಸಭೆ ಮತ್ತು ಸಚಿವ ಸಂಪುಟ ಸಭೆಯನ್ನು ಒಂದೇ ದಿನ ಕರೆದಿದ್ದು ಸರ್ಕಾರ ಅಲುಗಾಡುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನು ಅಲ್ಲಗಳೆದಿರುವ ಮುಖ್ಯಮಂತ್ರಿ ಉದ್ದವ್ ಠಾಕ್ರೆ, ಇದು ಬಿಕ್ಕಟ್ಟಿನ ಕುರಿತು ಕರೆದಿರುವ ಸಭೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟ ಸಭೆ ನಿರಂತರವಾಗಿ ಕರೆಯುತ್ತಿದ್ದೇನೆ. ಸಭೆಯಲ್ಲಿ ಕೋವಿಡ್-19 ನಿಯಂತ್ರಣದ ಕುರಿತು ಚರ್ಚೆ ನಡೆಯಲಿದೆ. ಇದೊಂದು ಸಾಮಾನ್ಯ ಸಚಿವ ಸಂಪುಟ ಸಭೆಯಾಗಿದೆ ಎಂದು ಹೇಳಿದ್ದಾರೆ.

ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್ ಮತ್ತು ಮುಖ್ಯಮಂತ್ರಿ ಉದ್ದವ್ ಠಾಕ್ರೆ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ  ಚರ್ಚಿಸಿದ್ದರು. ಇದು ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸಂದೇಶವನ್ನು ರವಾನಿಸಿತ್ತು.

ನಂತರ ರಾಹುಲ್‌ ಗಾಂಧಿ ಮಾತನಾಡುತ್ತಾ ನಾವು ಮಹಾರಾಷ್ಟ್ರದಲ್ಲಿ ಬೆಂಬಲ ನೀಡಿರುವವರು ಅಷ್ಟೆ ಹೊರತು ನಿರ್ಧಾರ ತೆಗೆದುಕೊಳ್ಳುವವರ ಅಲ್ಲ. ನಾವು ರಾಜಸ್ತಾನ, ಪಂಜಾಬ್‌, ಛತ್ತೀಸ್‌ಘಡ ಮತ್ತು ಜಾರ್ಖಂಡ್‌ನಲ್ಲಿ ಮಾತ್ರ ಸ್ವಂತ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಿದ್ದರು. ಈ ಹೇಳಿಕೆಯ ನಂತರ ಬಿಕ್ಕಟ್ಟು ಮತ್ತಷ್ಟು ತೀವ್ರ ರೂಪ ಪಡೆದುಕೊಂಡಿದೆ ಎಂದು ಹೇಳಲಾಗಿದೆ.

ಈ ಮಧ್ಯೆ ಸನ್ನಿವೇಶದ ಲಾಭ ಪಡೆಯಲು ಬಿಜೆಪಿ ಅಖಾಡಕ್ಕೆ ಇಳಿದಿದೆ. ಕೋವಿಡ್-19 ನಿಭಾಯಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿದೆ. ಬಿಕ್ಕಟ್ಟಿನ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ದೇವೇಂದ್ರ ಫಡ್ನಾವೀಸ್ ನಾವು ಸರ್ಕಾರ ರಚನೆಯ ಯತ್ನ ನಡೆಸುವುದಿಲ್ಲ ಎಂದು ಹೇಳಿದ್ದಾರೆ.

ಶಿವನೇನೆ ಮುಖಂಡ ಸಂಜಯ್ ರಾವತ್‌ ಮಾತನಾಡಿ, ಮಹಾರಾಷ್ಟ್ರ ಸರ್ಕಾರದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಮುಖ್ಯಮಂತ್ರಿ ಉದ್ದವ್ ಠಾಕ್ರೆ ಮತ್ತು ಎನ್.ಸಿ.ಪಿ. ಮುಖ್ಯಸ್ಥ ಶರದ್‌ ಪವಾರ್ ರಾಜ್ಯಪಾಲರವನ್ನು ಭೇಟಿ ಮಾಡಿ ಕೊರೊನ ನಿಯಂತ್ರಣದ ಕುರಿತು ಚರ್ಚೆ ನಡೆಸಿದ್ದಾರೆ. ಇದನ್ನು ಬಿಜೆಪಿ ರಾಜಕೀಯ ಬಿಕ್ಕಟ್ಟು ಎಂಬಂತೆ ಬಿಂಬಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಹಾ ವಿಕಾಸ್‌ ಅಗಾಡಿ ನೇತೃತ್ವದ ಮೈತ್ರಿ ಸರ್ಕಾರ ಐದು ವರ್ಷವನ್ನೂ ಪೂರ್ಣಗೊಳಿಸಲಿದೆ. ಮೂರು ಪಕ್ಷಗಳಲ್ಲೂ ಯಾವುದೇ ಬಿಕ್ಕಟ್ಟು ಇಲ್ಲ. ಮುಂದಿನ  ಬಾರಿಯೂ ಮಹಾ ವಿಕಾಸ ಅಗಾದಿ ನೇತೃತ್ವದಲ್ಲೇ ಚುನಾವಣೆ ಹೋಗುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ..


ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ : ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು- ಶಿವಸೇನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...