Homeಮುಖಪುಟ370ನೇ ವಿಧಿಯ ರದ್ದತಿಯನ್ನು ಟೀಕಿಸುವುದು, ಪಾಕಿಸ್ತಾನಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಕೋರುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

370ನೇ ವಿಧಿಯ ರದ್ದತಿಯನ್ನು ಟೀಕಿಸುವುದು, ಪಾಕಿಸ್ತಾನಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಕೋರುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

"ಭಿನ್ನಾಭಿಪ್ರಾಯ, ಟೀಕೆ ವ್ಯಕ್ತಪಡಿಸುವುದು ನಾಗರಿಕರ 'ಮೂಲಭೂತ ಹಕ್ಕು, ಇತರ ದೇಶಗಳಿಗೆ ಶುಭ ಹಾರೈಸುವುದು ಸದ್ಭಾವನೆಯ ಸಂಕೇತ"

- Advertisement -
- Advertisement -

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ದಿನವನ್ನು ‘ಕರಾಳ ದಿನ’ ಎನ್ನುವುದು ಮತ್ತು ಪಾಕಿಸ್ತಾನದ ಸ್ವಾತಂತ್ರ್ಯ ದಿನದಂದು ಅಲ್ಲಿನ ನಾಗರಿಕರಿಗೆ ಶುಭಾಷಯ ತಿಳಿಸುವುದು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎಂದು ಲೈವ್‌ ಲಾ ವರದಿ ತಿಳಿಸಿದೆ.

ವಿಧಿ 370ರ ರದ್ದತಿಯ ದಿನವನ್ನು ಜಮ್ಮು ಕಾಶ್ಮೀರದ ‘ಕರಾಳ ದಿನ’ ಎಂದು ಟೀಕಿಸಿ ವಾಟ್ಸಾಪ್ ಸಂದೇಶ ಹಾಕಿದ್ದ ಪ್ರಾಧ್ಯಾಪಕನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.

ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಪ್ರಾಧ್ಯಾಪಕನ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಕೋಮು ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಧಿ 370ರ ರದ್ದತಿಯ ದಿನವನ್ನು ಜಮ್ಮು ಕಾಶ್ಮೀರದ ‘ಕರಾಳ ದಿನ’ ಎಂದು ಟೀಕಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಪ್ರಾಧ್ಯಾಪಕ ಪ್ರೊ. ಜಾವೆದ್ ಅಹ್ಮದ್ ಹಜಾಮ್ ಅವರ ವಿರುದ್ದ ಮಹಾರಾಷ್ಟ್ರ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಸಂವಿಧಾನದ ವಿಧಿ 370ರ ರದ್ದತಿಯ ದಿನವಾದ ‘ಆಗಸ್ಟ್ 5 ಜಮ್ಮು ಕಾಶ್ಮೀರದ ಜನತೆಗೆ ಕರಾಳ ದಿನ’ ಎಂದು ಶಿಕ್ಷಕರು ಮತ್ತು ಪೋಷಕರ ವಾಟ್ಸಾಪ್ ಗ್ರೂಪ್‌ನಲ್ಲಿ ಪ್ರಾಧ್ಯಾಪಕ ಪ್ರೊ. ಜಾವೆದ್ ಅಹ್ಮದ್ ಮೆಸೇಜ್ ಹಾಕಿದ್ದರು. ಅಲ್ಲದೆ, ‘ಆಗಸ್ಟ್ 14ರಂದು ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯ’ ಕೋರಿದ್ದರು.

ಕೋಮು ದ್ವೇಷ ಉತ್ತೇಜಿಸುವ ಸಂದೇಶ ಹಾಕಿದ್ದಾರೆ ಎಂಬ ಆರೋಪದ ಮೇಲೆ ಪ್ರೊ. ಜಾವೆದ್ ಅಹ್ಮದ್ ವಿರುದ್ದ ಮಹಾರಾಷ್ಟ್ರ ಪೊಲೀಸರು ದಾಖಲಿಸಿದ್ದ ಎಫ್‌ಐಅರ್‌ ರದ್ದತಿಗೆ ಈ ಹಿಂದೆ ಬಾಂಬೆ ಹೈಕೋರ್ಟ್ ನಿರಾಕರಿಸಿತ್ತು. ಆದರೆ, ಸುಪ್ರೀಂ ಕೋರ್ಟ್‌ ಭಾರತೀಯ ನಾಗರಿಕರಿಗೆ ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯ ನೀಡಿರುವ ಸಂವಿಧಾನದ ‘ಪರಿಚ್ಛೇದ 19(1)(ಎ)’ ಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿ ವಿಭಿನ್ನ ನಿಲುವು ಪ್ರಕಟಿಸಿದೆ.

ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠ, ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಮತ್ತು ಟೀಕೆಗಳನ್ನು ವ್ಯಕ್ತಪಡಿಸುವುದು ಭಾರತೀಯ ನಾಗರಿಕರ ‘ಮೂಲಭೂತ ಹಕ್ಕು’ ಎಂದು ಒತ್ತಿ ಹೇಳಿದೆ.

ಪ್ರೊ. ಜಾವೆದ್ ಅಹ್ಮದ್ ಅವರು 370ನೇ ವಿಧಿಯ ರದ್ದತಿಯನ್ನು ಟೀಕಿಸಿ ಸಂದೇಶ ಹಾಕುವಾಗ ಯಾವುದೇ ಗುಂಪು, ಜಾತಿ, ಜನಾಂಗ ಮತ್ತು ಧರ್ಮವನ್ನು ಉಲ್ಲೇಖಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಜಾವೆದ್ ಅವರ ವಾಟ್ಸಾಪ್ ಸಂದೇಶ 370 ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಒಂದು ‘ಸರಳ ಪ್ರತಿಭಟನೆ’ ಎಂದು ಪರಿಗಣಿಸಬಹುದು ಎಂದಿದೆ.

ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಷಯ ಕೋರಿರುವ ಎರಡನೇ ವಾಟ್ಸಾಪ್ ಸಂದೇಶಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ನ್ಯಾಯಾಲಯ, ‘ಪಾಕಿಸ್ತಾನಕ್ಕೆ ಶುಭಾಷಯ ಕೋರುವುದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದಿದೆ. ಪಾಕಿಸ್ತಾನಕ್ಕೆ ಶುಭಾಷಯ ಕೋರಿದಂತೆ, ಇತರ ದೇಶಗಳಿಗೆ ಶುಭ ಹಾರೈಕೆಗಳನ್ನು ವ್ಯಕ್ತಪಡಿಸಲು ನಾಗರಿಕರಿಗೆ ಹಕ್ಕಿದೆ. ಭಾರತದ ಪ್ರಜೆಯು ಪಾಕಿಸ್ತಾನದ ನಾಗರಿಕರಿಗೆ ಅವರ ಸ್ವಾತಂತ್ರ್ಯ ದಿನಾಚರಣೆಯಾದ ಆಗಸ್ಟ್ 14 ರಂದು ಶುಭ ಹಾರೈಸಿದರೆ ಅದರಲ್ಲಿ ತಪ್ಪೇನಿಲ್ಲ. ಇದು ಸದ್ಭಾವನೆಯ ಸಂಕೇತವಾಗಿದೆ’ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಈ ಪ್ರಕರಣದಲ್ಲಿ ಪ್ರೊ. ಜಾವೆದ್ ಅಹ್ಮದ್ ಅವರ ಧರ್ಮದ ಆಧಾರದಲ್ಲಿ ಅವರ ಉದ್ದೇಶವನ್ನು ನಿರ್ಧರಿಸಲು ಮತ್ತು ಅವರನ್ನು ಗುರಿಯಾಗಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ: ‘ನಾನು ಜೈಲಿನಿಂದ ಜೀವಂತವಾಗಿ ಹೊರಬಂದಿರುವುದು ಆಕಸ್ಮಿಕ’: ಪ್ರೊ.ಜಿ.ಎನ್‌ ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...