Homeಮುಖಪುಟ370ನೇ ವಿಧಿಯ ರದ್ದತಿಯನ್ನು ಟೀಕಿಸುವುದು, ಪಾಕಿಸ್ತಾನಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಕೋರುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

370ನೇ ವಿಧಿಯ ರದ್ದತಿಯನ್ನು ಟೀಕಿಸುವುದು, ಪಾಕಿಸ್ತಾನಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಕೋರುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

"ಭಿನ್ನಾಭಿಪ್ರಾಯ, ಟೀಕೆ ವ್ಯಕ್ತಪಡಿಸುವುದು ನಾಗರಿಕರ 'ಮೂಲಭೂತ ಹಕ್ಕು, ಇತರ ದೇಶಗಳಿಗೆ ಶುಭ ಹಾರೈಸುವುದು ಸದ್ಭಾವನೆಯ ಸಂಕೇತ"

- Advertisement -
- Advertisement -

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ದಿನವನ್ನು ‘ಕರಾಳ ದಿನ’ ಎನ್ನುವುದು ಮತ್ತು ಪಾಕಿಸ್ತಾನದ ಸ್ವಾತಂತ್ರ್ಯ ದಿನದಂದು ಅಲ್ಲಿನ ನಾಗರಿಕರಿಗೆ ಶುಭಾಷಯ ತಿಳಿಸುವುದು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎಂದು ಲೈವ್‌ ಲಾ ವರದಿ ತಿಳಿಸಿದೆ.

ವಿಧಿ 370ರ ರದ್ದತಿಯ ದಿನವನ್ನು ಜಮ್ಮು ಕಾಶ್ಮೀರದ ‘ಕರಾಳ ದಿನ’ ಎಂದು ಟೀಕಿಸಿ ವಾಟ್ಸಾಪ್ ಸಂದೇಶ ಹಾಕಿದ್ದ ಪ್ರಾಧ್ಯಾಪಕನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.

ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಪ್ರಾಧ್ಯಾಪಕನ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಕೋಮು ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಧಿ 370ರ ರದ್ದತಿಯ ದಿನವನ್ನು ಜಮ್ಮು ಕಾಶ್ಮೀರದ ‘ಕರಾಳ ದಿನ’ ಎಂದು ಟೀಕಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಪ್ರಾಧ್ಯಾಪಕ ಪ್ರೊ. ಜಾವೆದ್ ಅಹ್ಮದ್ ಹಜಾಮ್ ಅವರ ವಿರುದ್ದ ಮಹಾರಾಷ್ಟ್ರ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಸಂವಿಧಾನದ ವಿಧಿ 370ರ ರದ್ದತಿಯ ದಿನವಾದ ‘ಆಗಸ್ಟ್ 5 ಜಮ್ಮು ಕಾಶ್ಮೀರದ ಜನತೆಗೆ ಕರಾಳ ದಿನ’ ಎಂದು ಶಿಕ್ಷಕರು ಮತ್ತು ಪೋಷಕರ ವಾಟ್ಸಾಪ್ ಗ್ರೂಪ್‌ನಲ್ಲಿ ಪ್ರಾಧ್ಯಾಪಕ ಪ್ರೊ. ಜಾವೆದ್ ಅಹ್ಮದ್ ಮೆಸೇಜ್ ಹಾಕಿದ್ದರು. ಅಲ್ಲದೆ, ‘ಆಗಸ್ಟ್ 14ರಂದು ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯ’ ಕೋರಿದ್ದರು.

ಕೋಮು ದ್ವೇಷ ಉತ್ತೇಜಿಸುವ ಸಂದೇಶ ಹಾಕಿದ್ದಾರೆ ಎಂಬ ಆರೋಪದ ಮೇಲೆ ಪ್ರೊ. ಜಾವೆದ್ ಅಹ್ಮದ್ ವಿರುದ್ದ ಮಹಾರಾಷ್ಟ್ರ ಪೊಲೀಸರು ದಾಖಲಿಸಿದ್ದ ಎಫ್‌ಐಅರ್‌ ರದ್ದತಿಗೆ ಈ ಹಿಂದೆ ಬಾಂಬೆ ಹೈಕೋರ್ಟ್ ನಿರಾಕರಿಸಿತ್ತು. ಆದರೆ, ಸುಪ್ರೀಂ ಕೋರ್ಟ್‌ ಭಾರತೀಯ ನಾಗರಿಕರಿಗೆ ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯ ನೀಡಿರುವ ಸಂವಿಧಾನದ ‘ಪರಿಚ್ಛೇದ 19(1)(ಎ)’ ಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿ ವಿಭಿನ್ನ ನಿಲುವು ಪ್ರಕಟಿಸಿದೆ.

ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠ, ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಮತ್ತು ಟೀಕೆಗಳನ್ನು ವ್ಯಕ್ತಪಡಿಸುವುದು ಭಾರತೀಯ ನಾಗರಿಕರ ‘ಮೂಲಭೂತ ಹಕ್ಕು’ ಎಂದು ಒತ್ತಿ ಹೇಳಿದೆ.

ಪ್ರೊ. ಜಾವೆದ್ ಅಹ್ಮದ್ ಅವರು 370ನೇ ವಿಧಿಯ ರದ್ದತಿಯನ್ನು ಟೀಕಿಸಿ ಸಂದೇಶ ಹಾಕುವಾಗ ಯಾವುದೇ ಗುಂಪು, ಜಾತಿ, ಜನಾಂಗ ಮತ್ತು ಧರ್ಮವನ್ನು ಉಲ್ಲೇಖಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಜಾವೆದ್ ಅವರ ವಾಟ್ಸಾಪ್ ಸಂದೇಶ 370 ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಒಂದು ‘ಸರಳ ಪ್ರತಿಭಟನೆ’ ಎಂದು ಪರಿಗಣಿಸಬಹುದು ಎಂದಿದೆ.

ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಷಯ ಕೋರಿರುವ ಎರಡನೇ ವಾಟ್ಸಾಪ್ ಸಂದೇಶಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ನ್ಯಾಯಾಲಯ, ‘ಪಾಕಿಸ್ತಾನಕ್ಕೆ ಶುಭಾಷಯ ಕೋರುವುದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದಿದೆ. ಪಾಕಿಸ್ತಾನಕ್ಕೆ ಶುಭಾಷಯ ಕೋರಿದಂತೆ, ಇತರ ದೇಶಗಳಿಗೆ ಶುಭ ಹಾರೈಕೆಗಳನ್ನು ವ್ಯಕ್ತಪಡಿಸಲು ನಾಗರಿಕರಿಗೆ ಹಕ್ಕಿದೆ. ಭಾರತದ ಪ್ರಜೆಯು ಪಾಕಿಸ್ತಾನದ ನಾಗರಿಕರಿಗೆ ಅವರ ಸ್ವಾತಂತ್ರ್ಯ ದಿನಾಚರಣೆಯಾದ ಆಗಸ್ಟ್ 14 ರಂದು ಶುಭ ಹಾರೈಸಿದರೆ ಅದರಲ್ಲಿ ತಪ್ಪೇನಿಲ್ಲ. ಇದು ಸದ್ಭಾವನೆಯ ಸಂಕೇತವಾಗಿದೆ’ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಈ ಪ್ರಕರಣದಲ್ಲಿ ಪ್ರೊ. ಜಾವೆದ್ ಅಹ್ಮದ್ ಅವರ ಧರ್ಮದ ಆಧಾರದಲ್ಲಿ ಅವರ ಉದ್ದೇಶವನ್ನು ನಿರ್ಧರಿಸಲು ಮತ್ತು ಅವರನ್ನು ಗುರಿಯಾಗಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ: ‘ನಾನು ಜೈಲಿನಿಂದ ಜೀವಂತವಾಗಿ ಹೊರಬಂದಿರುವುದು ಆಕಸ್ಮಿಕ’: ಪ್ರೊ.ಜಿ.ಎನ್‌ ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...