Homeಮುಖಪುಟ370ನೇ ವಿಧಿಯ ರದ್ದತಿಯನ್ನು ಟೀಕಿಸುವುದು, ಪಾಕಿಸ್ತಾನಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಕೋರುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

370ನೇ ವಿಧಿಯ ರದ್ದತಿಯನ್ನು ಟೀಕಿಸುವುದು, ಪಾಕಿಸ್ತಾನಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಕೋರುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

"ಭಿನ್ನಾಭಿಪ್ರಾಯ, ಟೀಕೆ ವ್ಯಕ್ತಪಡಿಸುವುದು ನಾಗರಿಕರ 'ಮೂಲಭೂತ ಹಕ್ಕು, ಇತರ ದೇಶಗಳಿಗೆ ಶುಭ ಹಾರೈಸುವುದು ಸದ್ಭಾವನೆಯ ಸಂಕೇತ"

- Advertisement -
- Advertisement -

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ದಿನವನ್ನು ‘ಕರಾಳ ದಿನ’ ಎನ್ನುವುದು ಮತ್ತು ಪಾಕಿಸ್ತಾನದ ಸ್ವಾತಂತ್ರ್ಯ ದಿನದಂದು ಅಲ್ಲಿನ ನಾಗರಿಕರಿಗೆ ಶುಭಾಷಯ ತಿಳಿಸುವುದು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎಂದು ಲೈವ್‌ ಲಾ ವರದಿ ತಿಳಿಸಿದೆ.

ವಿಧಿ 370ರ ರದ್ದತಿಯ ದಿನವನ್ನು ಜಮ್ಮು ಕಾಶ್ಮೀರದ ‘ಕರಾಳ ದಿನ’ ಎಂದು ಟೀಕಿಸಿ ವಾಟ್ಸಾಪ್ ಸಂದೇಶ ಹಾಕಿದ್ದ ಪ್ರಾಧ್ಯಾಪಕನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.

ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಪ್ರಾಧ್ಯಾಪಕನ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಕೋಮು ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಧಿ 370ರ ರದ್ದತಿಯ ದಿನವನ್ನು ಜಮ್ಮು ಕಾಶ್ಮೀರದ ‘ಕರಾಳ ದಿನ’ ಎಂದು ಟೀಕಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಪ್ರಾಧ್ಯಾಪಕ ಪ್ರೊ. ಜಾವೆದ್ ಅಹ್ಮದ್ ಹಜಾಮ್ ಅವರ ವಿರುದ್ದ ಮಹಾರಾಷ್ಟ್ರ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಸಂವಿಧಾನದ ವಿಧಿ 370ರ ರದ್ದತಿಯ ದಿನವಾದ ‘ಆಗಸ್ಟ್ 5 ಜಮ್ಮು ಕಾಶ್ಮೀರದ ಜನತೆಗೆ ಕರಾಳ ದಿನ’ ಎಂದು ಶಿಕ್ಷಕರು ಮತ್ತು ಪೋಷಕರ ವಾಟ್ಸಾಪ್ ಗ್ರೂಪ್‌ನಲ್ಲಿ ಪ್ರಾಧ್ಯಾಪಕ ಪ್ರೊ. ಜಾವೆದ್ ಅಹ್ಮದ್ ಮೆಸೇಜ್ ಹಾಕಿದ್ದರು. ಅಲ್ಲದೆ, ‘ಆಗಸ್ಟ್ 14ರಂದು ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯ’ ಕೋರಿದ್ದರು.

ಕೋಮು ದ್ವೇಷ ಉತ್ತೇಜಿಸುವ ಸಂದೇಶ ಹಾಕಿದ್ದಾರೆ ಎಂಬ ಆರೋಪದ ಮೇಲೆ ಪ್ರೊ. ಜಾವೆದ್ ಅಹ್ಮದ್ ವಿರುದ್ದ ಮಹಾರಾಷ್ಟ್ರ ಪೊಲೀಸರು ದಾಖಲಿಸಿದ್ದ ಎಫ್‌ಐಅರ್‌ ರದ್ದತಿಗೆ ಈ ಹಿಂದೆ ಬಾಂಬೆ ಹೈಕೋರ್ಟ್ ನಿರಾಕರಿಸಿತ್ತು. ಆದರೆ, ಸುಪ್ರೀಂ ಕೋರ್ಟ್‌ ಭಾರತೀಯ ನಾಗರಿಕರಿಗೆ ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯ ನೀಡಿರುವ ಸಂವಿಧಾನದ ‘ಪರಿಚ್ಛೇದ 19(1)(ಎ)’ ಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿ ವಿಭಿನ್ನ ನಿಲುವು ಪ್ರಕಟಿಸಿದೆ.

ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠ, ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಮತ್ತು ಟೀಕೆಗಳನ್ನು ವ್ಯಕ್ತಪಡಿಸುವುದು ಭಾರತೀಯ ನಾಗರಿಕರ ‘ಮೂಲಭೂತ ಹಕ್ಕು’ ಎಂದು ಒತ್ತಿ ಹೇಳಿದೆ.

ಪ್ರೊ. ಜಾವೆದ್ ಅಹ್ಮದ್ ಅವರು 370ನೇ ವಿಧಿಯ ರದ್ದತಿಯನ್ನು ಟೀಕಿಸಿ ಸಂದೇಶ ಹಾಕುವಾಗ ಯಾವುದೇ ಗುಂಪು, ಜಾತಿ, ಜನಾಂಗ ಮತ್ತು ಧರ್ಮವನ್ನು ಉಲ್ಲೇಖಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಜಾವೆದ್ ಅವರ ವಾಟ್ಸಾಪ್ ಸಂದೇಶ 370 ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಒಂದು ‘ಸರಳ ಪ್ರತಿಭಟನೆ’ ಎಂದು ಪರಿಗಣಿಸಬಹುದು ಎಂದಿದೆ.

ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಷಯ ಕೋರಿರುವ ಎರಡನೇ ವಾಟ್ಸಾಪ್ ಸಂದೇಶಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ನ್ಯಾಯಾಲಯ, ‘ಪಾಕಿಸ್ತಾನಕ್ಕೆ ಶುಭಾಷಯ ಕೋರುವುದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದಿದೆ. ಪಾಕಿಸ್ತಾನಕ್ಕೆ ಶುಭಾಷಯ ಕೋರಿದಂತೆ, ಇತರ ದೇಶಗಳಿಗೆ ಶುಭ ಹಾರೈಕೆಗಳನ್ನು ವ್ಯಕ್ತಪಡಿಸಲು ನಾಗರಿಕರಿಗೆ ಹಕ್ಕಿದೆ. ಭಾರತದ ಪ್ರಜೆಯು ಪಾಕಿಸ್ತಾನದ ನಾಗರಿಕರಿಗೆ ಅವರ ಸ್ವಾತಂತ್ರ್ಯ ದಿನಾಚರಣೆಯಾದ ಆಗಸ್ಟ್ 14 ರಂದು ಶುಭ ಹಾರೈಸಿದರೆ ಅದರಲ್ಲಿ ತಪ್ಪೇನಿಲ್ಲ. ಇದು ಸದ್ಭಾವನೆಯ ಸಂಕೇತವಾಗಿದೆ’ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಈ ಪ್ರಕರಣದಲ್ಲಿ ಪ್ರೊ. ಜಾವೆದ್ ಅಹ್ಮದ್ ಅವರ ಧರ್ಮದ ಆಧಾರದಲ್ಲಿ ಅವರ ಉದ್ದೇಶವನ್ನು ನಿರ್ಧರಿಸಲು ಮತ್ತು ಅವರನ್ನು ಗುರಿಯಾಗಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ: ‘ನಾನು ಜೈಲಿನಿಂದ ಜೀವಂತವಾಗಿ ಹೊರಬಂದಿರುವುದು ಆಕಸ್ಮಿಕ’: ಪ್ರೊ.ಜಿ.ಎನ್‌ ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...