Homeಕರ್ನಾಟಕಸಿಎಂ ವಿರುದ್ಧ ಟೀಕೆ: ಯತ್ನಾಳ್‌ಗೆ ನೀಡಿದ್ದ ವೈಯಕ್ತಿಕ ಭದ್ರತೆ ಹಿಂಪಡೆದ ರಾಜ್ಯ ಸರ್ಕಾರ!

ಸಿಎಂ ವಿರುದ್ಧ ಟೀಕೆ: ಯತ್ನಾಳ್‌ಗೆ ನೀಡಿದ್ದ ವೈಯಕ್ತಿಕ ಭದ್ರತೆ ಹಿಂಪಡೆದ ರಾಜ್ಯ ಸರ್ಕಾರ!

ಮುಂದಿನ ದಿನಗಳಲ್ಲಿ ನನಗೆ ಏನಾದರೂ ತೊಂದರೆಗಳಾದರೆ ಅಥವಾ ಅನಾಹುತಗಳಾದರೆ, ಅದಕ್ಕೆ ಆಡಳಿತ ನಡೆಸುತ್ತಿರುವ ತಾವು ಮತ್ತು ಸರ್ಕಾರವೇ ಹೊಣೆ- ಯತ್ನಾಳ್

- Advertisement -
- Advertisement -

“ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಹೇಳಿಕೆಗಳನ್ನು ನೀಡಿದ್ದಕ್ಕೆ ತನಗೆ ನೀಡಲಾಗಿದ್ದ ವೈಯಕ್ತಿಕ ಭದ್ರತಾ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ” ಎಂದು ವಿಜಯಪುರ ಶಾಸಕ ಬಸನಗೌಡ ಯತ್ನಾಳ್‌ ಆರೋಪಿಸಿದ್ದಾರೆ. “ಇದು ಕೀಳುಮಟ್ಟದ ಕಾರ್ಯವೈಖರಿ. ಇಂತಹ ಸೇಡಿನ ರಾಜಕೀಯಕ್ಕೆ ನನ್ನ ಧಿಕ್ಕಾರವಿರಲಿ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಯತ್ನಾಳ್, “ಮುಂದಿನ ದಿನಗಳಲ್ಲಿ ನನಗೆ ಏನಾದರೂ ತೊಂದರೆಗಳಾದರೆ ಅಥವಾ ಅನಾಹುತಗಳಾದರೆ, ಅದಕ್ಕೆ ಆಡಳಿತ ನಡೆಸುತ್ತಿರುವ ತಾವು ಮತ್ತು ಸರ್ಕಾರವೇ ಹೊಣೆ” ಎಂದು ಎಚ್ಚರಿಸಿದ್ದಾರೆ.

“ನಾನು ಹಿಂದುಪರವಾದ ಮತ್ತು ಜನಪರ ಹೋರಾಟ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿರುವವನು. ಹಾಗಾಗಿ ಈ ಹಿಂದೆ ನನ್ನ ಮೇಲೆ ಅನೇಕ ಬಾರಿ ಕೆಲವು ಹಿಂದೂ ವಿರೋಧಿ ಸಂಘಟನೆಗಳು ಮತ್ತ ಮತಾಂಧ ಶಕ್ತಿಗಳು ದಾಳಿ ಮಾಡುವ ಮುನ್ಸೂಚನೆ ಸಿಕ್ಕಿತ್ತು. ಇದನ್ನು ಅರಿತ ಗುಪ್ತಚರ ಇಲಾಖೆಯ ಆದೇಶದ ಮೇರೆಗೆ ನನಗೆ ಸೂಕ್ತ ಭದ್ರತೆ ಒದಗಿಸಲಾಗಿತ್ತು. ಆದರೆ, ನಾನು ಮುಖ್ಯಮಂತ್ರಿ ವಿರುದ್ಧ ಹೇಳಿಕೆ ನೀಡಿದ ಕಾರಣಕ್ಕೆ ಸೇಡಿನ ರಾಜಕಾರಣ ಮಾಡಿ ಭದ್ರತೆ ಹಿಂಪಡೆಯಲಾಗಿದೆ. ಈಗ ದಿಢೀರನೆ ಪೊಲೀಸ್‌ ಭದ್ರತೆ ಹಿಂಪಡೆದಿರುವುದರ ಹಿಂದಿನ ದುರುದ್ದೇಶ ಗೊತ್ತು” ಎಂದು ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ನಂತರ ಯಡಿಯೂರಪ್ಪ ಅಧಃಪತನ ಆರಂಭ: ಯತ್ನಾಳ್

ಯಡಿಯೂರಪ್ಪನವರ ವಿರುದ್ಧ ತಮ್ಮ ಆಕ್ರೋಶವನ್ನು ಯತ್ನಾಳ್ ಆಗಾಗ ಹೊರಹಾಕುತ್ತಲೇ ಇದ್ದಾರೆ. ಇತ್ತೀಚೆಗೆ ವಿಜಯಪುರಕ್ಕೆನೀಡುವ ಅನುದಾನದ ವಿಷಯದಲ್ಲಿ ಅನ್ಯಾಯವಾಗಿರುವುದರ ಕುರಿತು ಯಡಿಯೂರಪ್ಪನವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ರಾಜ್ಯದಲ್ಲಿ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆಯೂ ತಮ್ಮ ಅಸಮಾಧಾನ ಹೊರಹಾಕಿರುವ ಯತ್ನಾಳ್, ಇದು ಸಿಡಿ ರಾಜಕೀಯ ಎಂದು ಯಡಿಯೂರಪ್ಪನವರನ್ನು ತೀವ್ರವಾಗಿ ಖಂಡಿಸಿದ್ದರು. ಈಗ ಇವರ ಭದ್ರತಾ ವ್ಯವಸ್ಥೆಯನ್ನು ಹಿಂಪಡೆದಿರುವುದಕ್ಕೆ ಇದೇ ಕಾರಣ ಎಂದು ಯತ್ನಾಳ್ ಆರೋಪಿಸಿದ್ದಾರೆ.


ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...