Homeಕರ್ನಾಟಕಸಿಎಂ ವಿರುದ್ಧ ಟೀಕೆ: ಯತ್ನಾಳ್‌ಗೆ ನೀಡಿದ್ದ ವೈಯಕ್ತಿಕ ಭದ್ರತೆ ಹಿಂಪಡೆದ ರಾಜ್ಯ ಸರ್ಕಾರ!

ಸಿಎಂ ವಿರುದ್ಧ ಟೀಕೆ: ಯತ್ನಾಳ್‌ಗೆ ನೀಡಿದ್ದ ವೈಯಕ್ತಿಕ ಭದ್ರತೆ ಹಿಂಪಡೆದ ರಾಜ್ಯ ಸರ್ಕಾರ!

ಮುಂದಿನ ದಿನಗಳಲ್ಲಿ ನನಗೆ ಏನಾದರೂ ತೊಂದರೆಗಳಾದರೆ ಅಥವಾ ಅನಾಹುತಗಳಾದರೆ, ಅದಕ್ಕೆ ಆಡಳಿತ ನಡೆಸುತ್ತಿರುವ ತಾವು ಮತ್ತು ಸರ್ಕಾರವೇ ಹೊಣೆ- ಯತ್ನಾಳ್

- Advertisement -
- Advertisement -

“ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಹೇಳಿಕೆಗಳನ್ನು ನೀಡಿದ್ದಕ್ಕೆ ತನಗೆ ನೀಡಲಾಗಿದ್ದ ವೈಯಕ್ತಿಕ ಭದ್ರತಾ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ” ಎಂದು ವಿಜಯಪುರ ಶಾಸಕ ಬಸನಗೌಡ ಯತ್ನಾಳ್‌ ಆರೋಪಿಸಿದ್ದಾರೆ. “ಇದು ಕೀಳುಮಟ್ಟದ ಕಾರ್ಯವೈಖರಿ. ಇಂತಹ ಸೇಡಿನ ರಾಜಕೀಯಕ್ಕೆ ನನ್ನ ಧಿಕ್ಕಾರವಿರಲಿ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಯತ್ನಾಳ್, “ಮುಂದಿನ ದಿನಗಳಲ್ಲಿ ನನಗೆ ಏನಾದರೂ ತೊಂದರೆಗಳಾದರೆ ಅಥವಾ ಅನಾಹುತಗಳಾದರೆ, ಅದಕ್ಕೆ ಆಡಳಿತ ನಡೆಸುತ್ತಿರುವ ತಾವು ಮತ್ತು ಸರ್ಕಾರವೇ ಹೊಣೆ” ಎಂದು ಎಚ್ಚರಿಸಿದ್ದಾರೆ.

“ನಾನು ಹಿಂದುಪರವಾದ ಮತ್ತು ಜನಪರ ಹೋರಾಟ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿರುವವನು. ಹಾಗಾಗಿ ಈ ಹಿಂದೆ ನನ್ನ ಮೇಲೆ ಅನೇಕ ಬಾರಿ ಕೆಲವು ಹಿಂದೂ ವಿರೋಧಿ ಸಂಘಟನೆಗಳು ಮತ್ತ ಮತಾಂಧ ಶಕ್ತಿಗಳು ದಾಳಿ ಮಾಡುವ ಮುನ್ಸೂಚನೆ ಸಿಕ್ಕಿತ್ತು. ಇದನ್ನು ಅರಿತ ಗುಪ್ತಚರ ಇಲಾಖೆಯ ಆದೇಶದ ಮೇರೆಗೆ ನನಗೆ ಸೂಕ್ತ ಭದ್ರತೆ ಒದಗಿಸಲಾಗಿತ್ತು. ಆದರೆ, ನಾನು ಮುಖ್ಯಮಂತ್ರಿ ವಿರುದ್ಧ ಹೇಳಿಕೆ ನೀಡಿದ ಕಾರಣಕ್ಕೆ ಸೇಡಿನ ರಾಜಕಾರಣ ಮಾಡಿ ಭದ್ರತೆ ಹಿಂಪಡೆಯಲಾಗಿದೆ. ಈಗ ದಿಢೀರನೆ ಪೊಲೀಸ್‌ ಭದ್ರತೆ ಹಿಂಪಡೆದಿರುವುದರ ಹಿಂದಿನ ದುರುದ್ದೇಶ ಗೊತ್ತು” ಎಂದು ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ನಂತರ ಯಡಿಯೂರಪ್ಪ ಅಧಃಪತನ ಆರಂಭ: ಯತ್ನಾಳ್

ಯಡಿಯೂರಪ್ಪನವರ ವಿರುದ್ಧ ತಮ್ಮ ಆಕ್ರೋಶವನ್ನು ಯತ್ನಾಳ್ ಆಗಾಗ ಹೊರಹಾಕುತ್ತಲೇ ಇದ್ದಾರೆ. ಇತ್ತೀಚೆಗೆ ವಿಜಯಪುರಕ್ಕೆನೀಡುವ ಅನುದಾನದ ವಿಷಯದಲ್ಲಿ ಅನ್ಯಾಯವಾಗಿರುವುದರ ಕುರಿತು ಯಡಿಯೂರಪ್ಪನವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ರಾಜ್ಯದಲ್ಲಿ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆಯೂ ತಮ್ಮ ಅಸಮಾಧಾನ ಹೊರಹಾಕಿರುವ ಯತ್ನಾಳ್, ಇದು ಸಿಡಿ ರಾಜಕೀಯ ಎಂದು ಯಡಿಯೂರಪ್ಪನವರನ್ನು ತೀವ್ರವಾಗಿ ಖಂಡಿಸಿದ್ದರು. ಈಗ ಇವರ ಭದ್ರತಾ ವ್ಯವಸ್ಥೆಯನ್ನು ಹಿಂಪಡೆದಿರುವುದಕ್ಕೆ ಇದೇ ಕಾರಣ ಎಂದು ಯತ್ನಾಳ್ ಆರೋಪಿಸಿದ್ದಾರೆ.


ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...