Homeಮುಖಪುಟಮೋದಿ ವಿರುದ್ಧದ ಟೀಕೆ ಪ್ರಕರಣ: ಕಾಂಗ್ರೆಸ್ ನಾಯಕ ಪವನ್ ಖೇರಾ ಜಾಮೀನು ಮಾರ್ಚ್ 3ರವರೆಗೆ ವಿಸ್ತರಣೆ

ಮೋದಿ ವಿರುದ್ಧದ ಟೀಕೆ ಪ್ರಕರಣ: ಕಾಂಗ್ರೆಸ್ ನಾಯಕ ಪವನ್ ಖೇರಾ ಜಾಮೀನು ಮಾರ್ಚ್ 3ರವರೆಗೆ ವಿಸ್ತರಣೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಫೆಬ್ರವರಿ 23ರಂದು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಖೇರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ಮಾರ್ಚ್ 3ರವರೆಗೆ ವಿಸ್ತರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಅಸ್ಸಾಂ ಪೊಲೀಸರು ಗುರುವಾರ (ಫೆ.23) ಬಂಧಿಸಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ಮಟ್ಟಿಲೇರಿತ್ತು. ಆಗ ಸುಪ್ರೀಂ ಕೋರ್ಟ್, ಖೇರಾ ಅವರಿಗೆ ಫೆಬ್ರವರಿ 28ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.

ಅಸ್ಸಾಂ ಪೊಲೀಸರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಲ್ಲಿಕೆಗಳನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಗಮನಿಸಿತು.

ಉತ್ತರ ಪ್ರದೇಶದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಅವರು, ಈ ವಿಚಾರದಲ್ಲಿ ಪ್ರತಿಕ್ರಿಯೆಯನ್ನು ಸಲ್ಲಿಸುವುದಾಗಿ ಹೇಳಿದರು.

ಇದನ್ನೂ ಓದಿ: ಪ್ರಧಾನಿ ವಿರುದ್ಧ ಟೀಕೆ: ಮಧ್ಯಂತರ ಜಾಮೀನಿನ ಮೇಲೆ ಪವನ್ ಖೇರಾ ಬಿಡುಗಡೆಗೆ ಸುಪ್ರೀಂ ಆದೇಶ

ಪೀಠವು ಸಲ್ಲಿಕೆಗಳನ್ನು ಗಮನಿಸಿತು ಮತ್ತು ಫೆಬ್ರವರಿ 23ರಂದು ಅವರಿಗೆ ನೀಡಲಾದ ಮಧ್ಯಂತರ ಜಾಮೀನು ವಿಸ್ತರಣೆ ಮಾಡುವ ಮೂಲಕ ವಿಚಾರಣೆಯನ್ನು ಮಾರ್ಚ್ 3ರವರೆಗೆ ಮುಂದೂಡಿತು.

ಘಟನೆ ಹಿನ್ನೆಲೆ:

ಫೆ.17ರಂದು ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಖೇರಾ ಅವರು, ಪ್ರಧಾನಿಯನ್ನು ನರೇಂದ್ರ ದಾಮೋದರದಾಸ್ ಮೋದಿ ಬದಲಿಗೆ ”ನರೇಂದ್ರ ಗೌತಮ್‌ದಾಸ್ ಮೋದಿ” ಎಂದು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

ಪ್ರಧಾನಿ ವಿರುದ್ಧದ ಹೇಳಿಕೆಗಳಿಗಾಗಿ ಖೇರಾ ಅವರ ವಿರುದ್ಧ ಅಸ್ಸಾಂ, ಲಕ್ನೋ ಮತ್ತು ವಾರಣಾಸಿಯಲ್ಲಿ ಅನೇಕ ಎಫ್‌ಐಆರ್‌ಗಳನ್ನು ಸಲ್ಲಿಸಲಾಗಿದೆ ಆ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಅಸ್ಸಾಂ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು.

ಖೇರಾ ಪರ ವಾದ ಮಂಡಿಸಿದ ಹಿರಿಯ ವಕೀಲ ಎಎಂ ಸಿಂಘ್ವಿ ಅವರು, ಕಾಂಗ್ರೆಸ್ ನಾಯಕ ಖೇರಾ ಅವರು ಪ್ರಧಾನಿಯ ಮೇಲಿನ ಹೇಳಿಕೆಗೆ ಅದೇ ದಿನ ಕ್ಷಮೆಯಾಚಿಸಿದ್ದರು. ಈ ಎಫ್‌ಐಆರ್‌ಗಳಲ್ಲಿ ಅವರ ವಿರುದ್ಧ ಆರೋಪ ಮಾಡಿರುವ ಅಪರಾಧಗಳಿಗೆ ಬಂಧನ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಖೇರಾ ಅವರು ಬಳಸಿದ ಪದಗಳ ಆಯ್ಕೆ ಮತ್ತು ಅವರ ವಿರುದ್ಧ ದಾಖಲಾದ ಪ್ರಕರಣಕ್ಕೂ ಹೊಂದಿಕೆಯಾಗುವುದಿಲ್ಲ. ”ಇದು ವಾಕ್ ಸ್ವಾತಂತ್ರ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ” ಎಂದು ಸಿಂಘ್ವಿ ಹೇಳಿದ್ದರು.

ಅಸ್ಸಾಂ ಪೊಲೀಸರ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು, ಆಪಾದಿತ ಹೇಳಿಕೆಗಳ ಆಡಿಯೋ-ವಿಡಿಯೋ ಕ್ಲಿಪ್‌ಅನ್ನು ನ್ಯಾಯಾಲಯದಲ್ಲಿ ಪ್ಲೇ ಮಾಡಿದ್ದರು ಮತ್ತು ಖೇರಾ ಅವರು ದೇಶದ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಪ್ರಧಾನಿಯ ವಿರುದ್ಧ ಇಂತಹ ”ಅವಹೇಳನಕಾರಿ ಪದಗಳನ್ನು” ಬಳಸುವಂತಿಲ್ಲ ಎಂದಿದ್ದರು.

ಆ ಬಳಿಕ ಪ್ರಕರಣದಲ್ಲಿ ಖೇರಾ ಅವರಿಗೆ ಫೆ.28ರವರೆಗೆ  ಮಧ್ಯಂತರ ಜಾಮೀನು ನೀಡಿತ್ತು. ಇಂದು ಮತ್ತೆ  ಸುಪ್ರೀಂ ಕೋರ್ಟ್, ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಣೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...