Homeಮುಖಪುಟಮೋದಿ ವಿರುದ್ಧದ ಟೀಕೆ ಪ್ರಕರಣ: ಕಾಂಗ್ರೆಸ್ ನಾಯಕ ಪವನ್ ಖೇರಾ ಜಾಮೀನು ಮಾರ್ಚ್ 3ರವರೆಗೆ ವಿಸ್ತರಣೆ

ಮೋದಿ ವಿರುದ್ಧದ ಟೀಕೆ ಪ್ರಕರಣ: ಕಾಂಗ್ರೆಸ್ ನಾಯಕ ಪವನ್ ಖೇರಾ ಜಾಮೀನು ಮಾರ್ಚ್ 3ರವರೆಗೆ ವಿಸ್ತರಣೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಫೆಬ್ರವರಿ 23ರಂದು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಖೇರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ಮಾರ್ಚ್ 3ರವರೆಗೆ ವಿಸ್ತರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಅಸ್ಸಾಂ ಪೊಲೀಸರು ಗುರುವಾರ (ಫೆ.23) ಬಂಧಿಸಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ಮಟ್ಟಿಲೇರಿತ್ತು. ಆಗ ಸುಪ್ರೀಂ ಕೋರ್ಟ್, ಖೇರಾ ಅವರಿಗೆ ಫೆಬ್ರವರಿ 28ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.

ಅಸ್ಸಾಂ ಪೊಲೀಸರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಲ್ಲಿಕೆಗಳನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಗಮನಿಸಿತು.

ಉತ್ತರ ಪ್ರದೇಶದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಅವರು, ಈ ವಿಚಾರದಲ್ಲಿ ಪ್ರತಿಕ್ರಿಯೆಯನ್ನು ಸಲ್ಲಿಸುವುದಾಗಿ ಹೇಳಿದರು.

ಇದನ್ನೂ ಓದಿ: ಪ್ರಧಾನಿ ವಿರುದ್ಧ ಟೀಕೆ: ಮಧ್ಯಂತರ ಜಾಮೀನಿನ ಮೇಲೆ ಪವನ್ ಖೇರಾ ಬಿಡುಗಡೆಗೆ ಸುಪ್ರೀಂ ಆದೇಶ

ಪೀಠವು ಸಲ್ಲಿಕೆಗಳನ್ನು ಗಮನಿಸಿತು ಮತ್ತು ಫೆಬ್ರವರಿ 23ರಂದು ಅವರಿಗೆ ನೀಡಲಾದ ಮಧ್ಯಂತರ ಜಾಮೀನು ವಿಸ್ತರಣೆ ಮಾಡುವ ಮೂಲಕ ವಿಚಾರಣೆಯನ್ನು ಮಾರ್ಚ್ 3ರವರೆಗೆ ಮುಂದೂಡಿತು.

ಘಟನೆ ಹಿನ್ನೆಲೆ:

ಫೆ.17ರಂದು ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಖೇರಾ ಅವರು, ಪ್ರಧಾನಿಯನ್ನು ನರೇಂದ್ರ ದಾಮೋದರದಾಸ್ ಮೋದಿ ಬದಲಿಗೆ ”ನರೇಂದ್ರ ಗೌತಮ್‌ದಾಸ್ ಮೋದಿ” ಎಂದು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

ಪ್ರಧಾನಿ ವಿರುದ್ಧದ ಹೇಳಿಕೆಗಳಿಗಾಗಿ ಖೇರಾ ಅವರ ವಿರುದ್ಧ ಅಸ್ಸಾಂ, ಲಕ್ನೋ ಮತ್ತು ವಾರಣಾಸಿಯಲ್ಲಿ ಅನೇಕ ಎಫ್‌ಐಆರ್‌ಗಳನ್ನು ಸಲ್ಲಿಸಲಾಗಿದೆ ಆ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಅಸ್ಸಾಂ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು.

ಖೇರಾ ಪರ ವಾದ ಮಂಡಿಸಿದ ಹಿರಿಯ ವಕೀಲ ಎಎಂ ಸಿಂಘ್ವಿ ಅವರು, ಕಾಂಗ್ರೆಸ್ ನಾಯಕ ಖೇರಾ ಅವರು ಪ್ರಧಾನಿಯ ಮೇಲಿನ ಹೇಳಿಕೆಗೆ ಅದೇ ದಿನ ಕ್ಷಮೆಯಾಚಿಸಿದ್ದರು. ಈ ಎಫ್‌ಐಆರ್‌ಗಳಲ್ಲಿ ಅವರ ವಿರುದ್ಧ ಆರೋಪ ಮಾಡಿರುವ ಅಪರಾಧಗಳಿಗೆ ಬಂಧನ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಖೇರಾ ಅವರು ಬಳಸಿದ ಪದಗಳ ಆಯ್ಕೆ ಮತ್ತು ಅವರ ವಿರುದ್ಧ ದಾಖಲಾದ ಪ್ರಕರಣಕ್ಕೂ ಹೊಂದಿಕೆಯಾಗುವುದಿಲ್ಲ. ”ಇದು ವಾಕ್ ಸ್ವಾತಂತ್ರ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ” ಎಂದು ಸಿಂಘ್ವಿ ಹೇಳಿದ್ದರು.

ಅಸ್ಸಾಂ ಪೊಲೀಸರ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು, ಆಪಾದಿತ ಹೇಳಿಕೆಗಳ ಆಡಿಯೋ-ವಿಡಿಯೋ ಕ್ಲಿಪ್‌ಅನ್ನು ನ್ಯಾಯಾಲಯದಲ್ಲಿ ಪ್ಲೇ ಮಾಡಿದ್ದರು ಮತ್ತು ಖೇರಾ ಅವರು ದೇಶದ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಪ್ರಧಾನಿಯ ವಿರುದ್ಧ ಇಂತಹ ”ಅವಹೇಳನಕಾರಿ ಪದಗಳನ್ನು” ಬಳಸುವಂತಿಲ್ಲ ಎಂದಿದ್ದರು.

ಆ ಬಳಿಕ ಪ್ರಕರಣದಲ್ಲಿ ಖೇರಾ ಅವರಿಗೆ ಫೆ.28ರವರೆಗೆ  ಮಧ್ಯಂತರ ಜಾಮೀನು ನೀಡಿತ್ತು. ಇಂದು ಮತ್ತೆ  ಸುಪ್ರೀಂ ಕೋರ್ಟ್, ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಣೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...