Homeಮುಖಪುಟಮೋದಿ ವಿರುದ್ಧದ ಟೀಕೆ ಪ್ರಕರಣ: ಕಾಂಗ್ರೆಸ್ ನಾಯಕ ಪವನ್ ಖೇರಾ ಜಾಮೀನು ಮಾರ್ಚ್ 3ರವರೆಗೆ ವಿಸ್ತರಣೆ

ಮೋದಿ ವಿರುದ್ಧದ ಟೀಕೆ ಪ್ರಕರಣ: ಕಾಂಗ್ರೆಸ್ ನಾಯಕ ಪವನ್ ಖೇರಾ ಜಾಮೀನು ಮಾರ್ಚ್ 3ರವರೆಗೆ ವಿಸ್ತರಣೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಫೆಬ್ರವರಿ 23ರಂದು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಖೇರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ಮಾರ್ಚ್ 3ರವರೆಗೆ ವಿಸ್ತರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಅಸ್ಸಾಂ ಪೊಲೀಸರು ಗುರುವಾರ (ಫೆ.23) ಬಂಧಿಸಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ಮಟ್ಟಿಲೇರಿತ್ತು. ಆಗ ಸುಪ್ರೀಂ ಕೋರ್ಟ್, ಖೇರಾ ಅವರಿಗೆ ಫೆಬ್ರವರಿ 28ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.

ಅಸ್ಸಾಂ ಪೊಲೀಸರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಲ್ಲಿಕೆಗಳನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಗಮನಿಸಿತು.

ಉತ್ತರ ಪ್ರದೇಶದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಅವರು, ಈ ವಿಚಾರದಲ್ಲಿ ಪ್ರತಿಕ್ರಿಯೆಯನ್ನು ಸಲ್ಲಿಸುವುದಾಗಿ ಹೇಳಿದರು.

ಇದನ್ನೂ ಓದಿ: ಪ್ರಧಾನಿ ವಿರುದ್ಧ ಟೀಕೆ: ಮಧ್ಯಂತರ ಜಾಮೀನಿನ ಮೇಲೆ ಪವನ್ ಖೇರಾ ಬಿಡುಗಡೆಗೆ ಸುಪ್ರೀಂ ಆದೇಶ

ಪೀಠವು ಸಲ್ಲಿಕೆಗಳನ್ನು ಗಮನಿಸಿತು ಮತ್ತು ಫೆಬ್ರವರಿ 23ರಂದು ಅವರಿಗೆ ನೀಡಲಾದ ಮಧ್ಯಂತರ ಜಾಮೀನು ವಿಸ್ತರಣೆ ಮಾಡುವ ಮೂಲಕ ವಿಚಾರಣೆಯನ್ನು ಮಾರ್ಚ್ 3ರವರೆಗೆ ಮುಂದೂಡಿತು.

ಘಟನೆ ಹಿನ್ನೆಲೆ:

ಫೆ.17ರಂದು ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಖೇರಾ ಅವರು, ಪ್ರಧಾನಿಯನ್ನು ನರೇಂದ್ರ ದಾಮೋದರದಾಸ್ ಮೋದಿ ಬದಲಿಗೆ ”ನರೇಂದ್ರ ಗೌತಮ್‌ದಾಸ್ ಮೋದಿ” ಎಂದು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

ಪ್ರಧಾನಿ ವಿರುದ್ಧದ ಹೇಳಿಕೆಗಳಿಗಾಗಿ ಖೇರಾ ಅವರ ವಿರುದ್ಧ ಅಸ್ಸಾಂ, ಲಕ್ನೋ ಮತ್ತು ವಾರಣಾಸಿಯಲ್ಲಿ ಅನೇಕ ಎಫ್‌ಐಆರ್‌ಗಳನ್ನು ಸಲ್ಲಿಸಲಾಗಿದೆ ಆ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಅಸ್ಸಾಂ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು.

ಖೇರಾ ಪರ ವಾದ ಮಂಡಿಸಿದ ಹಿರಿಯ ವಕೀಲ ಎಎಂ ಸಿಂಘ್ವಿ ಅವರು, ಕಾಂಗ್ರೆಸ್ ನಾಯಕ ಖೇರಾ ಅವರು ಪ್ರಧಾನಿಯ ಮೇಲಿನ ಹೇಳಿಕೆಗೆ ಅದೇ ದಿನ ಕ್ಷಮೆಯಾಚಿಸಿದ್ದರು. ಈ ಎಫ್‌ಐಆರ್‌ಗಳಲ್ಲಿ ಅವರ ವಿರುದ್ಧ ಆರೋಪ ಮಾಡಿರುವ ಅಪರಾಧಗಳಿಗೆ ಬಂಧನ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಖೇರಾ ಅವರು ಬಳಸಿದ ಪದಗಳ ಆಯ್ಕೆ ಮತ್ತು ಅವರ ವಿರುದ್ಧ ದಾಖಲಾದ ಪ್ರಕರಣಕ್ಕೂ ಹೊಂದಿಕೆಯಾಗುವುದಿಲ್ಲ. ”ಇದು ವಾಕ್ ಸ್ವಾತಂತ್ರ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ” ಎಂದು ಸಿಂಘ್ವಿ ಹೇಳಿದ್ದರು.

ಅಸ್ಸಾಂ ಪೊಲೀಸರ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು, ಆಪಾದಿತ ಹೇಳಿಕೆಗಳ ಆಡಿಯೋ-ವಿಡಿಯೋ ಕ್ಲಿಪ್‌ಅನ್ನು ನ್ಯಾಯಾಲಯದಲ್ಲಿ ಪ್ಲೇ ಮಾಡಿದ್ದರು ಮತ್ತು ಖೇರಾ ಅವರು ದೇಶದ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಪ್ರಧಾನಿಯ ವಿರುದ್ಧ ಇಂತಹ ”ಅವಹೇಳನಕಾರಿ ಪದಗಳನ್ನು” ಬಳಸುವಂತಿಲ್ಲ ಎಂದಿದ್ದರು.

ಆ ಬಳಿಕ ಪ್ರಕರಣದಲ್ಲಿ ಖೇರಾ ಅವರಿಗೆ ಫೆ.28ರವರೆಗೆ  ಮಧ್ಯಂತರ ಜಾಮೀನು ನೀಡಿತ್ತು. ಇಂದು ಮತ್ತೆ  ಸುಪ್ರೀಂ ಕೋರ್ಟ್, ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಣೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...