Homeಮುಖಪುಟಸೆಂಟ್ರಲ್ ವಿಸ್ತಾ ಯೋಜನೆಗೆ ವ್ಯಾಪಕ ವಿರೋಧ: ಪೋಟೋ, ವಿಡಿಯೊ ನಿಷೇಧಿಸಿದ ಸರ್ಕಾರ

ಸೆಂಟ್ರಲ್ ವಿಸ್ತಾ ಯೋಜನೆಗೆ ವ್ಯಾಪಕ ವಿರೋಧ: ಪೋಟೋ, ವಿಡಿಯೊ ನಿಷೇಧಿಸಿದ ಸರ್ಕಾರ

- Advertisement -
- Advertisement -

ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಯ ಬಗ್ಗೆ ಸಾರ್ವಜನಿಕರು, ಪ್ರತಿಪಕ್ಷಗಳಿಂದ ವ್ಯಾಪಕ ವಿರೋಧ, ಟೀಕೆಗಳು ವ್ಯಕ್ತವಾದ ಹಿನ್ನೆಲೆ, ಕೇಂದ್ರ ಲೋಕೋಪಯೋಗಿ ಇಲಾಖೆ ಇಂಡಿಯಾ ಗೇಟ್ ಬಳಿಯ ನಿರ್ಮಾಣ ಸ್ಥಳದಲ್ಲಿ ಛಾಯಾಗ್ರಹಣ ಮತ್ತು ವಿಡಿಯೊ ರೆಕಾರ್ಡಿಂಗ್ ನಿಷೇಧಿಸಿದೆ.

ಸೆಂಟ್ರಲ್ ವಿಸ್ತಾದ ಕಾಮಗಾರಿ ಸ್ಥಳದಲ್ಲಿ ‘ಫೋಟೋಗ್ರಫಿ ಮಾಡುವಂತಿಲ್ಲ, ‘ವಿಡಿಯೊ ರೆಕಾರ್ಡಿಂಗ್ ನಿಷೇಧಿಸಲಾಗಿದೆ’ ಎಂಬ ಸೂಚನ ಫಲಕಗಳನ್ನು ಅಳವಡಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ.

ದೇಶದಲ್ಲಿ ಸಾವಿನ ಕೇಕೆ ಹಾಕಿಸುತ್ತಿರುವ ಕೊರೊನಾ ಸಾಂಕ್ರಾಮಿಕದ ಮಧ್ಯೆ ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಯನ್ನು ಕಾರ್ಯಗತಗೊಳಿಸಿದ್ದಕ್ಕಾಗಿ ಸರ್ಕಾರವು ಪ್ರತಿಪಕ್ಷಗಳಿಂದ, ಸಾರ್ವಜನಿಕ ವಲಯದಿಂದ ಭಾರಿ ಟೀಕೆಗಳನ್ನು ಎದುರಿಸುತ್ತಿದೆ.

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಏರಿಕೆ ಹಿನ್ನೆಲೆಯಲ್ಲಿ ಭಾರತದಾದ್ಯಂತ ಹಲವಾರು ಜನಪರ ಸಂಘಟನೆಗಳು, ಸಿವಿಲ್ ಸೊಸೈಟಿ ಗ್ರೂಪ್ಸ್ ಮತ್ತು ಪರಿಸರ ಸಂಸ್ಥೆಗಳು ಕೇಂದ್ರದ ಮಹತ್ವಾಕಾಂಕ್ಷೆಯ ಈ ಯೋಜನೆಯನ್ನು ಮನವಿ ಮಾಡಿವೆ.

ಸುಮಾರು 20 ಸಾವಿರ ಕೋಟಿ ರೂ.ಗಳ ಯೋಜನೆಯನ್ನು ಸ್ಥಗಿತಗೊಳಿಸಿ ಮತ್ತು ಲಭ್ಯವಿರುವ ಎಲ್ಲ ಸಂಪನ್ಮೂಲಗಳನ್ನು ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಬಳಸಬೇಕೆಂದು 65 ಸಂಸ್ಥೆಗಳು ಹೊರಡಿಸಿದ ಹೇಳಿಕೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ.

“ಅದ್ದೂರಿ ಸೆಂಟ್ರಲ್ ವಿಸ್ತಾ ನಿರ್ಮಾಣ ಸೇರಿದಂತೆ ಎಲ್ಲಾ ಅನಗತ್ಯ ಖರ್ಚುಗಳನ್ನು ನಿಲ್ಲಿಸಬೇಕು ಮತ್ತು ಲಭ್ಯವಿರುವ ಎಲ್ಲ ಸಂಪನ್ಮೂಲಗಳನ್ನು ತುರ್ತು ಕೊರೊನಾ ಪ್ರತಿಕ್ರಿಯೆಗೆ ಬಳಸಬೇಕು” ಎಂದು ಸಾಮಾಜಿಕ ಸಂಸ್ಥೆಗಳಲ್ಲಿ ಒಂದಾದ ವಿಕಾಲ್ಪ್ ಸಂಗಮ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ವಾರ, ಯೋಜನೆಯ ಬಗ್ಗೆ ಸರ್ಕಾರವನ್ನು ಟೀಕಿಸಿರುವ ಕಾಂಗ್ರೆಸ್ ಮೇಲೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಕಿಡಿಕಾರಿದ್ದಾರೆ. ಯುಪಿಎ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ನಾಯಕರು ಈ ವಿಚಾರವನ್ನು ಬೆಂಬಲಿಸಿ, ಈಗ ವಿರೋಧಿಸುತ್ತಿರುವ ಅವರ ವರ್ತನೆ ವಿಲಕ್ಷಣವಾಗಿದೆ ಎಂದು ಹೇಳಿದ್ದಾರೆ.

ತ್ರಿಕೋನ ಆಕಾರದಲ್ಲಿ ನಿರ್ಮಾಣವಾಗುತ್ತಿರುವ ಸಂಸತ್ ಭವನದ ಜತೆಗೆ ಕೇಂದ್ರೀಯ ಸಚಿವಾಲಯಗಳ ಮತ್ತು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ 3 ಕಿ.ಮೀ ಉದ್ದದ ರಾಜ್‌ಪತ್‌ ಮಾರ್ಗವನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಜೊತೆಗೆ ಪ್ರಧಾನ ಮಂತ್ರಿಗಳ ಹೊಸ ನಿವಾಸ ಮತ್ತು ಕಚೇರಿ ಕೂಡ ನಿರ್ಮಾಣವಾಗಲಿವೆ.

ಕೊರೊನಾ ಹೆಚ್ಚಾಗಿ ಆಕ್ಸಿಜನ್, ಬೆಡ್, ಆಸ್ಪತ್ರೆಗಳಲ್ಲಿ ಮೂಲಸೌಲಭ್ಯಗಳಿಲ್ಲದೇ ದೇಶದ ಜನರು ಪರದಾಡುತ್ತಿರುವಾಗಲೂ ಈ ಯೋಜನೆಯನ್ನು ನಿಲ್ಲಿಸದೇ ಕಾಮಗಾರಿ ನಡೆಸುತ್ತಿರುವುದರ ಕುರಿತು ಜನ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದರು. ಸದ್ಯ ಈ ಯೋಜನೆಯ ಫೋಟೋ ಮತ್ತು ವಿಡಿಯೊ ರೆಕಾರ್ಡಿಂಗ್ ಮಾಡದಂತೆ ಸರ್ಕಾರ ತಡೆಯೊಡ್ಡಿದೆ.


ಇದನ್ನೂ ಓದಿ: ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮಾತನಾಡಬೇಕು , ನಮಗೆ ಸ್ವಾತಂತ್ರವಾಗಿರುವ ಅಭಿವ್ಯಕ್ತಿ ಸ್ವಾತಂತ್ರ ಉಳಿಸಬೇಕು. ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ಕೇವಲ ಸ್ವಪ್ರತಿಷ್ಠೆ ಬಗ್ಗೆ ಯೋಚಿಸದೆ ಸಾರ್ವಜನಿಕ ಹಿತಾಸಕ್ತಿ ಯ ಬಗ್ಗೆ ಯೋಚಿಸ ಬೇಕು.

  2. This government never retreats respecting people’s demond since it is fascist in nature. It never stop new task work. Adoment government. No one Democrate in this party?

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...