Homeಮುಖಪುಟಸೆಂಟ್ರಲ್ ವಿಸ್ತಾ ಯೋಜನೆಗೆ ವ್ಯಾಪಕ ವಿರೋಧ: ಪೋಟೋ, ವಿಡಿಯೊ ನಿಷೇಧಿಸಿದ ಸರ್ಕಾರ

ಸೆಂಟ್ರಲ್ ವಿಸ್ತಾ ಯೋಜನೆಗೆ ವ್ಯಾಪಕ ವಿರೋಧ: ಪೋಟೋ, ವಿಡಿಯೊ ನಿಷೇಧಿಸಿದ ಸರ್ಕಾರ

- Advertisement -
- Advertisement -

ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಯ ಬಗ್ಗೆ ಸಾರ್ವಜನಿಕರು, ಪ್ರತಿಪಕ್ಷಗಳಿಂದ ವ್ಯಾಪಕ ವಿರೋಧ, ಟೀಕೆಗಳು ವ್ಯಕ್ತವಾದ ಹಿನ್ನೆಲೆ, ಕೇಂದ್ರ ಲೋಕೋಪಯೋಗಿ ಇಲಾಖೆ ಇಂಡಿಯಾ ಗೇಟ್ ಬಳಿಯ ನಿರ್ಮಾಣ ಸ್ಥಳದಲ್ಲಿ ಛಾಯಾಗ್ರಹಣ ಮತ್ತು ವಿಡಿಯೊ ರೆಕಾರ್ಡಿಂಗ್ ನಿಷೇಧಿಸಿದೆ.

ಸೆಂಟ್ರಲ್ ವಿಸ್ತಾದ ಕಾಮಗಾರಿ ಸ್ಥಳದಲ್ಲಿ ‘ಫೋಟೋಗ್ರಫಿ ಮಾಡುವಂತಿಲ್ಲ, ‘ವಿಡಿಯೊ ರೆಕಾರ್ಡಿಂಗ್ ನಿಷೇಧಿಸಲಾಗಿದೆ’ ಎಂಬ ಸೂಚನ ಫಲಕಗಳನ್ನು ಅಳವಡಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ.

ದೇಶದಲ್ಲಿ ಸಾವಿನ ಕೇಕೆ ಹಾಕಿಸುತ್ತಿರುವ ಕೊರೊನಾ ಸಾಂಕ್ರಾಮಿಕದ ಮಧ್ಯೆ ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಯನ್ನು ಕಾರ್ಯಗತಗೊಳಿಸಿದ್ದಕ್ಕಾಗಿ ಸರ್ಕಾರವು ಪ್ರತಿಪಕ್ಷಗಳಿಂದ, ಸಾರ್ವಜನಿಕ ವಲಯದಿಂದ ಭಾರಿ ಟೀಕೆಗಳನ್ನು ಎದುರಿಸುತ್ತಿದೆ.

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಏರಿಕೆ ಹಿನ್ನೆಲೆಯಲ್ಲಿ ಭಾರತದಾದ್ಯಂತ ಹಲವಾರು ಜನಪರ ಸಂಘಟನೆಗಳು, ಸಿವಿಲ್ ಸೊಸೈಟಿ ಗ್ರೂಪ್ಸ್ ಮತ್ತು ಪರಿಸರ ಸಂಸ್ಥೆಗಳು ಕೇಂದ್ರದ ಮಹತ್ವಾಕಾಂಕ್ಷೆಯ ಈ ಯೋಜನೆಯನ್ನು ಮನವಿ ಮಾಡಿವೆ.

ಸುಮಾರು 20 ಸಾವಿರ ಕೋಟಿ ರೂ.ಗಳ ಯೋಜನೆಯನ್ನು ಸ್ಥಗಿತಗೊಳಿಸಿ ಮತ್ತು ಲಭ್ಯವಿರುವ ಎಲ್ಲ ಸಂಪನ್ಮೂಲಗಳನ್ನು ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಬಳಸಬೇಕೆಂದು 65 ಸಂಸ್ಥೆಗಳು ಹೊರಡಿಸಿದ ಹೇಳಿಕೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ.

“ಅದ್ದೂರಿ ಸೆಂಟ್ರಲ್ ವಿಸ್ತಾ ನಿರ್ಮಾಣ ಸೇರಿದಂತೆ ಎಲ್ಲಾ ಅನಗತ್ಯ ಖರ್ಚುಗಳನ್ನು ನಿಲ್ಲಿಸಬೇಕು ಮತ್ತು ಲಭ್ಯವಿರುವ ಎಲ್ಲ ಸಂಪನ್ಮೂಲಗಳನ್ನು ತುರ್ತು ಕೊರೊನಾ ಪ್ರತಿಕ್ರಿಯೆಗೆ ಬಳಸಬೇಕು” ಎಂದು ಸಾಮಾಜಿಕ ಸಂಸ್ಥೆಗಳಲ್ಲಿ ಒಂದಾದ ವಿಕಾಲ್ಪ್ ಸಂಗಮ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ವಾರ, ಯೋಜನೆಯ ಬಗ್ಗೆ ಸರ್ಕಾರವನ್ನು ಟೀಕಿಸಿರುವ ಕಾಂಗ್ರೆಸ್ ಮೇಲೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಕಿಡಿಕಾರಿದ್ದಾರೆ. ಯುಪಿಎ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ನಾಯಕರು ಈ ವಿಚಾರವನ್ನು ಬೆಂಬಲಿಸಿ, ಈಗ ವಿರೋಧಿಸುತ್ತಿರುವ ಅವರ ವರ್ತನೆ ವಿಲಕ್ಷಣವಾಗಿದೆ ಎಂದು ಹೇಳಿದ್ದಾರೆ.

ತ್ರಿಕೋನ ಆಕಾರದಲ್ಲಿ ನಿರ್ಮಾಣವಾಗುತ್ತಿರುವ ಸಂಸತ್ ಭವನದ ಜತೆಗೆ ಕೇಂದ್ರೀಯ ಸಚಿವಾಲಯಗಳ ಮತ್ತು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ 3 ಕಿ.ಮೀ ಉದ್ದದ ರಾಜ್‌ಪತ್‌ ಮಾರ್ಗವನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಜೊತೆಗೆ ಪ್ರಧಾನ ಮಂತ್ರಿಗಳ ಹೊಸ ನಿವಾಸ ಮತ್ತು ಕಚೇರಿ ಕೂಡ ನಿರ್ಮಾಣವಾಗಲಿವೆ.

ಕೊರೊನಾ ಹೆಚ್ಚಾಗಿ ಆಕ್ಸಿಜನ್, ಬೆಡ್, ಆಸ್ಪತ್ರೆಗಳಲ್ಲಿ ಮೂಲಸೌಲಭ್ಯಗಳಿಲ್ಲದೇ ದೇಶದ ಜನರು ಪರದಾಡುತ್ತಿರುವಾಗಲೂ ಈ ಯೋಜನೆಯನ್ನು ನಿಲ್ಲಿಸದೇ ಕಾಮಗಾರಿ ನಡೆಸುತ್ತಿರುವುದರ ಕುರಿತು ಜನ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದರು. ಸದ್ಯ ಈ ಯೋಜನೆಯ ಫೋಟೋ ಮತ್ತು ವಿಡಿಯೊ ರೆಕಾರ್ಡಿಂಗ್ ಮಾಡದಂತೆ ಸರ್ಕಾರ ತಡೆಯೊಡ್ಡಿದೆ.


ಇದನ್ನೂ ಓದಿ: ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮಾತನಾಡಬೇಕು , ನಮಗೆ ಸ್ವಾತಂತ್ರವಾಗಿರುವ ಅಭಿವ್ಯಕ್ತಿ ಸ್ವಾತಂತ್ರ ಉಳಿಸಬೇಕು. ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ಕೇವಲ ಸ್ವಪ್ರತಿಷ್ಠೆ ಬಗ್ಗೆ ಯೋಚಿಸದೆ ಸಾರ್ವಜನಿಕ ಹಿತಾಸಕ್ತಿ ಯ ಬಗ್ಗೆ ಯೋಚಿಸ ಬೇಕು.

  2. This government never retreats respecting people’s demond since it is fascist in nature. It never stop new task work. Adoment government. No one Democrate in this party?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...