Homeಕರ್ನಾಟಕ'ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ' - ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಗರಂ ಆಗಿದ್ದ ಸಚಿವ ಮಾಧುಸ್ವಾಮಿ, ‘ಕೇಂದ್ರ ಸರ್ಕಾರದಿಂದ ಸರ್ವಾಧಿಕಾರಿ ಧೋರಣೆ ಆರಂಭವಾಗಿದೆ’ ಎಂದು ಹೇಳಿಕೆ ನೀಡಿದ್ದರು. ಈಗ ಉಲ್ಟಾ ಹೊಡೆದಿರುವ ಮಾಧುಸ್ವಾಮಿ, ತನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

ಈ ಹೇಳಿಕೆಗಳು ರಾಜ್ಯ ರಾಜಕೀಯ ವಲಯದಲ್ಲಿ ಸಂಚಲವನ್ನುಂಟುಮಾಡಿತ್ತು. ಬಿಜೆಪಿಯೇತರರು ಮಾಧುಸ್ವಾಮಿಯನ್ನು ಅಭಿನಂಧಿಸಿದರೆ, ಬಿಜೆಪಿ ನಾಯಕರು ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದರು.

ಈಗ ತುಮಕೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, “ನಾನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ಮಾತನಾಡಿಲ್ಲ. ವಿಚಾರ ಸಂಕಿರಣದಲ್ಲಿ ಮಾತನಾಡಿದ್ದನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ” ಎಂದು ಹೇಳಿದ್ದಾರೆ.

“ಅಲ್ಲಿ ಮಾತನಾಡಿದ ವಿಷಯ ವಿಚಾರ ಸಂಕಿರಣಕ್ಕಷ್ಟೇ ಸೀಮಿತ. ಪ್ರಾದೇಶಿಕ ಭಾವನೆ, ಒಕ್ಕೂಟ ವ್ಯವಸ್ಥೆ ಬಗ್ಗೆ ಹೇಳುವಾಗ ಕಳೆದ 70 ವರ್ಷಗಳ ಕೇಂದ್ರದ ಸರ್ವಾಧಿಕಾರಿ ಧೋರಣೆ, ಕಾಲಕಾಲಕ್ಕೆ ಸರ್ಕಾರಗಳು ತೆಗೆದುಕೊಳ್ಳುವ ನಿರ್ಣಯಗಳು ಪ್ರಾದೇಶಿಕ ಭಾವನೆ ಹೆಚ್ಚಾಗಲು ಕಾರಣ ಎಂದು ಹೇಳಿದ್ದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಅದನ್ನು ತಪ್ಪಾಗಿ ಗ್ರಹಿಸಿ ‘ಮಾಧುಸ್ವಾಮಿ ರಾಜ್ಯದ ಜನರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಅದಕ್ಕೆ ಅಭಿನಂದನೆಗಳು’ ಎಂದು ಹೇಳಿದ್ದಾರೆ. ನಾನು ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ? ವಿಚಾರ ಸಂಕಿರಣದಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯವನ್ನು ದೊಡ್ಡದಾಗಿ ಬಿಂಬಿಸುವ ಅಗತ್ಯವಿಲ್ಲ. ನಾನು ಹೇಳಿದ್ದು ಮೋದಿ ಸರ್ಕಾರದ ಬಗ್ಗೆ ಅಲ್ಲ, ಹಿಂದಿನ ಸರ್ಕಾರಗಳ ಬಗ್ಗೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಕೇಂದ್ರದ ಸರ್ವಾಧಿಕಾರಿ ಧೋರಣೆ ಹೇಳಿಕೆ: ಮಾಧುಸ್ವಾಮಿ ಅಭಿನಂದಿಸಿದ ಕಾಂಗ್ರೆಸ್ – ತೇಜಸ್ವಿ ಸೂರ್ಯ ಆಕ್ಷೇಪ

ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಮಾಧುಸ್ವಾಮಿ, “ಕೇಂದ್ರ ಸರ್ಕಾರದಲ್ಲಿ ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದ್ದು, ಒಕ್ಕೂಟಕ್ಕೆ ಬಹಳ ದೊಡ್ಡ ಆತಂಕ ಎದುರಾಗಿದೆ. ಬೆಳೆದಂತೆ ಉದಾರವಾದಿಗಳಾಗಬೇಕಾಗಿದ್ದ ನಾವು ಪ್ರಸ್ತುತ ಕೇಂದ್ರೀಕರಣ ಆಗುತ್ತಿದ್ದೇವೆ. ನೀಟ್ ಪರೀಕ್ಷಗೂ, ಕರ್ನಾಟಕಕ್ಕೂ ಏನ್‌ ಸಂಬಂಧವಿದೆ?” ಎಂದು ಹೇಳಿದ ಅವರು, ಪಕ್ಕದಲ್ಲೇ ಕೂತಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ನೀವಿದನ್ನು ಸಂಸತ್ತಿನಲ್ಲಿ ಕೇಳಬೇಕು ಎಂದು ಎಚ್ಚರಿಸಿದ್ದರು.

“ಕರ್ನಾಟಕದಲ್ಲಿ ಇರುವ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಅವಕಾಶ ಇಲ್ಲ. ತುಮಕೂರಿನಲ್ಲಿ ಪ್ರಧಾನಿ ಉದ್ಘಾಟನೆ ಮಾಡಿದ ಫುಡ್ ಪಾರ್ಕ್, ಬೆಂಗಳೂರಿನಲ್ಲಿರುವ ಕಂಪನಿಗಳು. ಹೀಗೆ ಎಲ್ಲಿಯೂ ಕನ್ನಡಿಗರಿಗೆ ಆದ್ಯತೆ ಇಲ್ಲ. ಜಾಗ, ಸೌಲಭ್ಯ ಎಲ್ಲವೂ ನಮ್ಮದಾದರೂ ಉದ್ಯೋಗ ಮಾತ್ರ ಬೇರೆಯವರಿಗೆ ಸೇರಿದೆ” ಎಂದು ಅವರು ಹೇಳಿದ್ದಾಗಿ ಆಂದೋಲನ ಪತ್ರಿಕೆ ವರದಿ ಮಾಡಿದೆ.

“ಈ ಅನ್ಯಾಯದ ವಿರುದ್ಧ ತಮಿಳುನಾಡಿನಂತಹ ರಾಜ್ಯಗಳು ಹೋರಾಟ ಮಾಡಿ ತಮ್ಮ ರಾಜ್ಯದವರಿಗೆ ಅನುಕೂಲವಾಗುವಂತೆ ಮಾಡಿವೆ. ಆದರೆ ಕರ್ನಾಟಕದ ಜನರು ಹೋರಾಟ ಮಾಡುವುದಿಲ್ಲ, ಯಾಕೆಂದರೆ ನಾವು ರಾಷ್ಟ್ರೀಯವಾದಿಗಳು” ಎಂದು ಮಾಧುಸ್ವಾಮಿ ವ್ಯಂಗ್ಯವಾಡಿದ್ದಾಗಿ ಪತ್ರಿಕೆ ವರದಿ ಮಾಡಿದೆ.


ಇದನ್ನೂ ಓದಿ: ಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...