Homeಮುಖಪುಟವಿಮರ್ಶಾತ್ಮಕ ಯೋಚನೆಯ ಜೊತೆಗೆ ಸೃಜನಾತ್ಮಕ ಲಹರಿ ಇದ್ದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಖಚಿತ

ವಿಮರ್ಶಾತ್ಮಕ ಯೋಚನೆಯ ಜೊತೆಗೆ ಸೃಜನಾತ್ಮಕ ಲಹರಿ ಇದ್ದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಖಚಿತ

- Advertisement -
- Advertisement -

| ಜಿ. ಆರ್. ವಿದ್ಯಾರಣ್ಯ |

ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಲು ನಮಗೆ ಎರಡು ವಿಧವಾದ ಯೋಚನಾಲಹರಿಯ ಅವಶ್ಯಕತೆ ಇರುತ್ತದೆ. ಮೊದಲನೆಯದು ವಿಮರ್ಶಾತ್ಮಕ ಯೋಚನೆ (ಕ್ರಿಟಿಕಲ್ ಥಿಂಕಿಂಗ್), ಎರಡನೆಯದು ಸೃಜನಾತ್ಮಕ ಯೋಚನೆ (ಕ್ರಿಯೇಟಿವ್ ಥಿಂಕಿಂಗ್). ವಿಮರ್ಶಾತ್ಮಕ ಯೋಚನೆ ನಮ್ಮ ಬುದ್ಧಿಮಟ್ಟ, ತರಬೇತಿ, ಕಟ್ಟುಪಾಡು, ಪರಂಪರೆ ಇವುಗಳನ್ನು ಅವಲಂಬಿಸಿದ್ದು, ಮುಖ್ಯವಾಗಿ ಒಂದೇ ರೀತಿಯಲ್ಲಿ,ಹಾಕಿದ ಹಾದಿಯಲ್ಲೇಸಾಗುತ್ತದೆ. ದಿನನಿತ್ಯದ ಕೆಲಸಕ್ಕೆ ನಾವು ಇದನ್ನು ಬಳಸುತ್ತೇವೆ. ಸರಿಯಾಗಿ ಮಾಡುತ್ತಿರುವ ಕೆಲಸವನ್ನೇ ಇನ್ನೊಂದು ವಿಧವಾಗಿ ಮಾಡಬಹುದೇ ಎಂದು ಯೋಚಿಸಲೂ ಸಹ ನಾವು ಹೆಚ್ಚಾಗಿ ಪ್ರಯತ್ನ ಪಡುವುದಿಲ್ಲ. ಅನಿರೀಕ್ಷಿತ ಸಮಸ್ಯೆಯೊಂದು ಉದ್ಭವಿಸಿದಾಗ ಅದರ ಪರಿಹಾರಕ್ಕೂನಮ್ಮ ಸಾಧಾರಣ ವಿಮರ್ಶಾತ್ಮಕ ಯೋಚನೆಯನ್ನೇ ಬಳಸುತ್ತೇವೆಯೇ ಹೊರತು, ಇದನ್ನು ವಿಭಿನ್ನವಾಗಿ ಯೋಚಿಸಿ ಪರಿಹರಿಸಬಹುದೇ ಎಂದು ಚಿಂತಿಸುವುದಿಲ್ಲ.

ಹಾಗಾದರೆ ನಾವು ಸೃಜನಾತ್ಮಕವಾಗಿ ಯೋಚಿಸುವುದು ಯಾವಾಗ? ಹೆಚ್ಚಾಗಿ ಸೃಜನಾತ್ಮಕ ಯೋಚನೆಗಳು ನಾವು ಸಮಸ್ಯೆಯ ಬಗ್ಗೆ ಯೋಚಿಸದೇ ಇರುವಂತಹ ಸಮಯದಲ್ಲಿ ದಿಢೀರನೇ ಹೊಳೆದವುಗಳಾಗಿರುತ್ತವೆ. ಇದನ್ನು ಮೆದುಳಿನ ಬಲಬದಿಯ ಯೋಚನೆ ಎಂದೂ ಹೇಳುತ್ತಾರೆ. ಈ ಮಿಂಚಿನಂತಹ ಉಪಯುಕ್ತ ಯೋಚನೆಗಳು ತಾವಾಗಿಯೇ ಬರಬೇಕೇ ಅಥವಾ ಅವನ್ನು ನಮಗೆ ಬೇಕಾದ ಸಮಯದಲ್ಲಿ ಹೊಳೆಯುವಂತೆ ಮಾಡಬಹುದೇ? ನಮ್ಮ ಎಲ್ಲಾ ಯೋಚನೆಗಳು ವಿಮರ್ಶಾತ್ಮಕವಾಗಿರುವುದಿಲ್ಲ ಎಂದ ಮಾತ್ರಕ್ಕೆ ಅವು ಸೃಜನಾತ್ಮಕವಾಗಿರುತ್ತವೆ ಎಂದೂ ಇಲ್ಲ. ತಲೆಯ ಗಾಲಿಗಳು ಅವಿರತವಾಗಿ ಸುತ್ತುತ್ತಿರುವಾಗ ಕೆಲವು ಮೂರ್ಖತನದ ಯೋಚನೆಗಳಾದರೆ, ಕೆಲವು ವಿಮರ್ಶಾತ್ಮಕ ಮತ್ತು ಒಂದೋ-ಎರಡೋ ಸೃಜನಾತ್ಮಕವಾಗಿರಬಹುದು. ಇದಕ್ಕೆ ಮುಖ್ಯ ಕಾರಣ ನಾವು ಕೇವಲ ಸಮಸ್ಯೆಯನ್ನು ಎರಡೇ ಆಯಾಮದ ಚೌಕಟ್ಟಿನಲ್ಲಿ ನೋಡುತ್ತಿರುತ್ತೇವೆ. ಹಾಗಾದರೆ ನಾವು ತ್ರಿ-ಪರಿಮಾಣ (3-ಡೈಮೆನ್ಷನ್) ನಲ್ಲಿ ಯೋಚಿಸಲು ಸಾಧ್ಯವೇ?

ಮೇಲಿನ ಚಿತ್ರ ನೋಡಿ. ಇದರಲ್ಲಿ ಮೂರು ಬೆಂಕಿಕಡ್ದಿಗಳನ್ನು ಜೋಡಿಸಿ ಒಂದು ತ್ರಿಕೋನ (ತ್ರಿಭುಜ) ನಿರ್ಮಿಸಲಾಗಿದೆ. ಬದಿಯಲ್ಲಿರುವ ಮೂರು ಕಡ್ಡಿಗಳನ್ನು ಈ ತ್ರಿಕೋನಕ್ಕೆ ಸೇರಿಸಿ ಒಟ್ಟು ನಾಲ್ಕು ಸಮಭುಜ ತ್ರಿಕೋನ ನಿರ್ಮಿಸಲು ಸಾಧ್ಯವೇ, ಯೋಚಿಸಿ.

ಮೊದಲೇ ತಿಳಿಸಿದಂತೆ ನಮ್ಮ ಸಾಮಾನ್ಯ ವಿಮರ್ಶಾತ್ಮಕ ಯೋಚನಾಲಹರಿ ನಮ್ಮ ಬುದ್ಧಿಮಟ್ಟ, ತರಬೇತಿ, ಕಟ್ಟುಪಾಡು, ಪರಂಪರೆ ಇವುಗಳ ಚೌಕಟ್ಟಿನಲ್ಲಿ ಬಂಧಿತಗೊಂಡು,ಚೌಕಟ್ಟಿನ ಹೊರಗೆ (ಔಟ್ ಆಫ್ ದಿ ಬಾಕ್ಸ್) ಸೃಜನಾತ್ಮಕವಾಗಿ ಥಟ್ಟನೆ ಯೋಚಿಸಲು ಬಿಡುವುದಿಲ್ಲ.

ಕೆಳಗೆ ಚಿತ್ರದಲ್ಲಿ ಇರುವ ಬಣ್ಣ-ಬಣ್ಣದ ಇಟ್ಟಿಗೆಗಳ ಬಣ್ಣವನ್ನು ಮೇಲಿಂದ ಕೆಳಗೆ ಗಟ್ಟಿಯಾಗಿ ಹೇಳುತ್ತಾ ಹೋಗಿ.

ಸುಲಭವಾಗಿ ಓದಿದಿರಿ, ಅಲ್ಲವೇ?

 

ಈಗ ಕೆಳಗೆ ಚಿತ್ರ-3 ರಲ್ಲಿರುವ ಬಣ್ಣಗಳ ಹೆಸರು ಹೇಳಿ (ಬಣ್ಣದ ಹೆಸರು, ಏನು ಬರೆದಿದೆ ಅದಲ್ಲ – ಮೊದಲನೆಯದು ತಿಳಿನೀಲಿ, ಕೆಂಪು ಅಲ್ಲ).

ನೋಡಿದಿರಾ, ನಮ್ಮ ಬುದ್ಧಿ ನಮಗೆ ಹೇಗೆ ಮೋಸ ಮಾಡುತ್ತದೆ ಎಂದು. ಈ ರೀತಿಯ ಬುದ್ಧಿ ವರ್ಧಕ ವ್ಯಾಯಾಮಗಳಿಂದ ನಮ್ಮ ಯೋಚನಾಲಹರಿಯನ್ನು ಬೇಕೆಂದಾಗ ಸೃಜನಾತ್ಮಕವಾಗಿ ಬಳಸಿಕೊಳ್ಳಲು ಸಾಧ್ಯವಿದೆ. ಇದಕ್ಕೆ ಸಾಕಷ್ಟು ಪರಿಶ್ರಮ ಬೇಕು. ಒಂದೇ ದಿನದಲ್ಲಿ ಆಗುವ ಕೆಲಸವಲ್ಲ.

ಈಗ ಮತ್ತೆ ಬೆಂಕಿ ಕಡ್ಡಿಯ ಸಮಸ್ಯೆಗೆ ಬರೋಣ. ನಿಮ್ಮ ಯೋಚನಾಲಹರಿ ವಿಮರ್ಶಾತ್ಮಕವಾಗಿದ್ದಲ್ಲಿ ನಿಮ್ಮ ಉತ್ತರ ಬಹುಶಃ ಕೆಳಕಂಡ ಚಿತ್ರ-4 ರಂತೆ ಇರಬಹುದು.

ಆದರೆ ಉತ್ತರ ತಪ್ಪು ಏಕೆಂದರೆ ಕಡ್ಡಿಗಳು ಒಂದೇ ಉದ್ದವಾಗಿರುವುದರಿಂದ ತ್ರಿಕೋನಗಳು ಸರಿಯಾಗಿ  ಸಮಭುಜ ತ್ರಿಕೋನವಾಗಿರುವುದಿಲ್ಲ.

ಆದರೆ ನಿಮ್ಮ ಯೋಚನಾಲಹರಿ ತ್ರಿಪರಿಣಾಮ (3-ಡೈಮೆನ್ಷನಲ್) ಆಗಿದ್ದಲ್ಲಿ ನಿಮ್ಮ ಉತ್ತರ ಬಹುಶಃ ಚಿತ್ರ-5 ರಂತೆ ಕಾಣಬಹುದು. ಇದು ಸರಿಯಾದ  ಉತ್ತರ.

ಸೃಜನಾತ್ಮಕ ಯೋಚನೆ ಪ್ರತಿ ಬಾರಿ ಸರಿಯಾಗಿರಲೇಬೇಕು ಎಂದೇನಿಲ್ಲ, ಹಾಗಾಗಿ ಉತ್ತರ ಚಿತ್ರ-6 ರಂತೆಯೂ ಇರಬಹುದು.ಉತ್ತರ ಸರಿ ಎಂದು ಎಲ್ಲರಿಗೂ ಅನಿಸದಿದ್ದರೂಸಹ ಇದು ಸಮರ್ಪಕ ಉತ್ತರ.

ಇಂತಹ ಉತ್ತರಕ್ಕೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ದೊರೆಯುತ್ತದೆ. ಸೃಜನಾತ್ಮಕ ಯೋಚನಾಲಹರಿಯನ್ನು ಹೊಂದಿರುವ ಯುವಕರಿಗೆ ಕೆಲಸ ನೀಡಲು ಕಂಪನಿಗಳು ಹಾತೊರೆಯುತ್ತಿರುತ್ತವೆ. ನಮಗೆ ವಿಮರ್ಶಾತ್ಮಕ ಯೋಚನೆಯೂ ಬೇಕು ಆದರೆ ಸೃಜನಾತ್ಮಕ ಲಹರಿಯೂ ಇರಬೇಕು. ಎರಡನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಸುಲಭವಾಗುತ್ತದೆ.

ನೀವೂ ಸಹ ಹೀಗೆ ಬೇಕೆಂದಾಗ ಸೃಜನಾತ್ಮಕವಾಗಿ ಯೋಚಿಸಲು ಕಲಿತಲ್ಲಿ, ನಿಮಗೆ ಕೆಲಸದ ಸಮಸ್ಯೆಯಾಗಲೀ, ನಿಮ್ಮ ಕಂಪನಿಯಲ್ಲಿ ಒಳ್ಳೆಯ ಸ್ಥಾನಮಾನಕ್ಕಾಗಲೀ ಎಂದೂ ತೊಂದರೆ ಇರುವುದಿಲ್ಲ. ಪ್ರಯತ್ನಿಸುತ್ತೀರಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...