Homeಮುಖಪುಟವಿಮರ್ಶಾತ್ಮಕ ಯೋಚನೆಯ ಜೊತೆಗೆ ಸೃಜನಾತ್ಮಕ ಲಹರಿ ಇದ್ದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಖಚಿತ

ವಿಮರ್ಶಾತ್ಮಕ ಯೋಚನೆಯ ಜೊತೆಗೆ ಸೃಜನಾತ್ಮಕ ಲಹರಿ ಇದ್ದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಖಚಿತ

- Advertisement -
- Advertisement -

| ಜಿ. ಆರ್. ವಿದ್ಯಾರಣ್ಯ |

ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಲು ನಮಗೆ ಎರಡು ವಿಧವಾದ ಯೋಚನಾಲಹರಿಯ ಅವಶ್ಯಕತೆ ಇರುತ್ತದೆ. ಮೊದಲನೆಯದು ವಿಮರ್ಶಾತ್ಮಕ ಯೋಚನೆ (ಕ್ರಿಟಿಕಲ್ ಥಿಂಕಿಂಗ್), ಎರಡನೆಯದು ಸೃಜನಾತ್ಮಕ ಯೋಚನೆ (ಕ್ರಿಯೇಟಿವ್ ಥಿಂಕಿಂಗ್). ವಿಮರ್ಶಾತ್ಮಕ ಯೋಚನೆ ನಮ್ಮ ಬುದ್ಧಿಮಟ್ಟ, ತರಬೇತಿ, ಕಟ್ಟುಪಾಡು, ಪರಂಪರೆ ಇವುಗಳನ್ನು ಅವಲಂಬಿಸಿದ್ದು, ಮುಖ್ಯವಾಗಿ ಒಂದೇ ರೀತಿಯಲ್ಲಿ,ಹಾಕಿದ ಹಾದಿಯಲ್ಲೇಸಾಗುತ್ತದೆ. ದಿನನಿತ್ಯದ ಕೆಲಸಕ್ಕೆ ನಾವು ಇದನ್ನು ಬಳಸುತ್ತೇವೆ. ಸರಿಯಾಗಿ ಮಾಡುತ್ತಿರುವ ಕೆಲಸವನ್ನೇ ಇನ್ನೊಂದು ವಿಧವಾಗಿ ಮಾಡಬಹುದೇ ಎಂದು ಯೋಚಿಸಲೂ ಸಹ ನಾವು ಹೆಚ್ಚಾಗಿ ಪ್ರಯತ್ನ ಪಡುವುದಿಲ್ಲ. ಅನಿರೀಕ್ಷಿತ ಸಮಸ್ಯೆಯೊಂದು ಉದ್ಭವಿಸಿದಾಗ ಅದರ ಪರಿಹಾರಕ್ಕೂನಮ್ಮ ಸಾಧಾರಣ ವಿಮರ್ಶಾತ್ಮಕ ಯೋಚನೆಯನ್ನೇ ಬಳಸುತ್ತೇವೆಯೇ ಹೊರತು, ಇದನ್ನು ವಿಭಿನ್ನವಾಗಿ ಯೋಚಿಸಿ ಪರಿಹರಿಸಬಹುದೇ ಎಂದು ಚಿಂತಿಸುವುದಿಲ್ಲ.

ಹಾಗಾದರೆ ನಾವು ಸೃಜನಾತ್ಮಕವಾಗಿ ಯೋಚಿಸುವುದು ಯಾವಾಗ? ಹೆಚ್ಚಾಗಿ ಸೃಜನಾತ್ಮಕ ಯೋಚನೆಗಳು ನಾವು ಸಮಸ್ಯೆಯ ಬಗ್ಗೆ ಯೋಚಿಸದೇ ಇರುವಂತಹ ಸಮಯದಲ್ಲಿ ದಿಢೀರನೇ ಹೊಳೆದವುಗಳಾಗಿರುತ್ತವೆ. ಇದನ್ನು ಮೆದುಳಿನ ಬಲಬದಿಯ ಯೋಚನೆ ಎಂದೂ ಹೇಳುತ್ತಾರೆ. ಈ ಮಿಂಚಿನಂತಹ ಉಪಯುಕ್ತ ಯೋಚನೆಗಳು ತಾವಾಗಿಯೇ ಬರಬೇಕೇ ಅಥವಾ ಅವನ್ನು ನಮಗೆ ಬೇಕಾದ ಸಮಯದಲ್ಲಿ ಹೊಳೆಯುವಂತೆ ಮಾಡಬಹುದೇ? ನಮ್ಮ ಎಲ್ಲಾ ಯೋಚನೆಗಳು ವಿಮರ್ಶಾತ್ಮಕವಾಗಿರುವುದಿಲ್ಲ ಎಂದ ಮಾತ್ರಕ್ಕೆ ಅವು ಸೃಜನಾತ್ಮಕವಾಗಿರುತ್ತವೆ ಎಂದೂ ಇಲ್ಲ. ತಲೆಯ ಗಾಲಿಗಳು ಅವಿರತವಾಗಿ ಸುತ್ತುತ್ತಿರುವಾಗ ಕೆಲವು ಮೂರ್ಖತನದ ಯೋಚನೆಗಳಾದರೆ, ಕೆಲವು ವಿಮರ್ಶಾತ್ಮಕ ಮತ್ತು ಒಂದೋ-ಎರಡೋ ಸೃಜನಾತ್ಮಕವಾಗಿರಬಹುದು. ಇದಕ್ಕೆ ಮುಖ್ಯ ಕಾರಣ ನಾವು ಕೇವಲ ಸಮಸ್ಯೆಯನ್ನು ಎರಡೇ ಆಯಾಮದ ಚೌಕಟ್ಟಿನಲ್ಲಿ ನೋಡುತ್ತಿರುತ್ತೇವೆ. ಹಾಗಾದರೆ ನಾವು ತ್ರಿ-ಪರಿಮಾಣ (3-ಡೈಮೆನ್ಷನ್) ನಲ್ಲಿ ಯೋಚಿಸಲು ಸಾಧ್ಯವೇ?

ಮೇಲಿನ ಚಿತ್ರ ನೋಡಿ. ಇದರಲ್ಲಿ ಮೂರು ಬೆಂಕಿಕಡ್ದಿಗಳನ್ನು ಜೋಡಿಸಿ ಒಂದು ತ್ರಿಕೋನ (ತ್ರಿಭುಜ) ನಿರ್ಮಿಸಲಾಗಿದೆ. ಬದಿಯಲ್ಲಿರುವ ಮೂರು ಕಡ್ಡಿಗಳನ್ನು ಈ ತ್ರಿಕೋನಕ್ಕೆ ಸೇರಿಸಿ ಒಟ್ಟು ನಾಲ್ಕು ಸಮಭುಜ ತ್ರಿಕೋನ ನಿರ್ಮಿಸಲು ಸಾಧ್ಯವೇ, ಯೋಚಿಸಿ.

ಮೊದಲೇ ತಿಳಿಸಿದಂತೆ ನಮ್ಮ ಸಾಮಾನ್ಯ ವಿಮರ್ಶಾತ್ಮಕ ಯೋಚನಾಲಹರಿ ನಮ್ಮ ಬುದ್ಧಿಮಟ್ಟ, ತರಬೇತಿ, ಕಟ್ಟುಪಾಡು, ಪರಂಪರೆ ಇವುಗಳ ಚೌಕಟ್ಟಿನಲ್ಲಿ ಬಂಧಿತಗೊಂಡು,ಚೌಕಟ್ಟಿನ ಹೊರಗೆ (ಔಟ್ ಆಫ್ ದಿ ಬಾಕ್ಸ್) ಸೃಜನಾತ್ಮಕವಾಗಿ ಥಟ್ಟನೆ ಯೋಚಿಸಲು ಬಿಡುವುದಿಲ್ಲ.

ಕೆಳಗೆ ಚಿತ್ರದಲ್ಲಿ ಇರುವ ಬಣ್ಣ-ಬಣ್ಣದ ಇಟ್ಟಿಗೆಗಳ ಬಣ್ಣವನ್ನು ಮೇಲಿಂದ ಕೆಳಗೆ ಗಟ್ಟಿಯಾಗಿ ಹೇಳುತ್ತಾ ಹೋಗಿ.

ಸುಲಭವಾಗಿ ಓದಿದಿರಿ, ಅಲ್ಲವೇ?

 

ಈಗ ಕೆಳಗೆ ಚಿತ್ರ-3 ರಲ್ಲಿರುವ ಬಣ್ಣಗಳ ಹೆಸರು ಹೇಳಿ (ಬಣ್ಣದ ಹೆಸರು, ಏನು ಬರೆದಿದೆ ಅದಲ್ಲ – ಮೊದಲನೆಯದು ತಿಳಿನೀಲಿ, ಕೆಂಪು ಅಲ್ಲ).

ನೋಡಿದಿರಾ, ನಮ್ಮ ಬುದ್ಧಿ ನಮಗೆ ಹೇಗೆ ಮೋಸ ಮಾಡುತ್ತದೆ ಎಂದು. ಈ ರೀತಿಯ ಬುದ್ಧಿ ವರ್ಧಕ ವ್ಯಾಯಾಮಗಳಿಂದ ನಮ್ಮ ಯೋಚನಾಲಹರಿಯನ್ನು ಬೇಕೆಂದಾಗ ಸೃಜನಾತ್ಮಕವಾಗಿ ಬಳಸಿಕೊಳ್ಳಲು ಸಾಧ್ಯವಿದೆ. ಇದಕ್ಕೆ ಸಾಕಷ್ಟು ಪರಿಶ್ರಮ ಬೇಕು. ಒಂದೇ ದಿನದಲ್ಲಿ ಆಗುವ ಕೆಲಸವಲ್ಲ.

ಈಗ ಮತ್ತೆ ಬೆಂಕಿ ಕಡ್ಡಿಯ ಸಮಸ್ಯೆಗೆ ಬರೋಣ. ನಿಮ್ಮ ಯೋಚನಾಲಹರಿ ವಿಮರ್ಶಾತ್ಮಕವಾಗಿದ್ದಲ್ಲಿ ನಿಮ್ಮ ಉತ್ತರ ಬಹುಶಃ ಕೆಳಕಂಡ ಚಿತ್ರ-4 ರಂತೆ ಇರಬಹುದು.

ಆದರೆ ಉತ್ತರ ತಪ್ಪು ಏಕೆಂದರೆ ಕಡ್ಡಿಗಳು ಒಂದೇ ಉದ್ದವಾಗಿರುವುದರಿಂದ ತ್ರಿಕೋನಗಳು ಸರಿಯಾಗಿ  ಸಮಭುಜ ತ್ರಿಕೋನವಾಗಿರುವುದಿಲ್ಲ.

ಆದರೆ ನಿಮ್ಮ ಯೋಚನಾಲಹರಿ ತ್ರಿಪರಿಣಾಮ (3-ಡೈಮೆನ್ಷನಲ್) ಆಗಿದ್ದಲ್ಲಿ ನಿಮ್ಮ ಉತ್ತರ ಬಹುಶಃ ಚಿತ್ರ-5 ರಂತೆ ಕಾಣಬಹುದು. ಇದು ಸರಿಯಾದ  ಉತ್ತರ.

ಸೃಜನಾತ್ಮಕ ಯೋಚನೆ ಪ್ರತಿ ಬಾರಿ ಸರಿಯಾಗಿರಲೇಬೇಕು ಎಂದೇನಿಲ್ಲ, ಹಾಗಾಗಿ ಉತ್ತರ ಚಿತ್ರ-6 ರಂತೆಯೂ ಇರಬಹುದು.ಉತ್ತರ ಸರಿ ಎಂದು ಎಲ್ಲರಿಗೂ ಅನಿಸದಿದ್ದರೂಸಹ ಇದು ಸಮರ್ಪಕ ಉತ್ತರ.

ಇಂತಹ ಉತ್ತರಕ್ಕೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ದೊರೆಯುತ್ತದೆ. ಸೃಜನಾತ್ಮಕ ಯೋಚನಾಲಹರಿಯನ್ನು ಹೊಂದಿರುವ ಯುವಕರಿಗೆ ಕೆಲಸ ನೀಡಲು ಕಂಪನಿಗಳು ಹಾತೊರೆಯುತ್ತಿರುತ್ತವೆ. ನಮಗೆ ವಿಮರ್ಶಾತ್ಮಕ ಯೋಚನೆಯೂ ಬೇಕು ಆದರೆ ಸೃಜನಾತ್ಮಕ ಲಹರಿಯೂ ಇರಬೇಕು. ಎರಡನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಸುಲಭವಾಗುತ್ತದೆ.

ನೀವೂ ಸಹ ಹೀಗೆ ಬೇಕೆಂದಾಗ ಸೃಜನಾತ್ಮಕವಾಗಿ ಯೋಚಿಸಲು ಕಲಿತಲ್ಲಿ, ನಿಮಗೆ ಕೆಲಸದ ಸಮಸ್ಯೆಯಾಗಲೀ, ನಿಮ್ಮ ಕಂಪನಿಯಲ್ಲಿ ಒಳ್ಳೆಯ ಸ್ಥಾನಮಾನಕ್ಕಾಗಲೀ ಎಂದೂ ತೊಂದರೆ ಇರುವುದಿಲ್ಲ. ಪ್ರಯತ್ನಿಸುತ್ತೀರಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...