Homeಮುಖಪುಟವಿಮರ್ಶಾತ್ಮಕ ಯೋಚನೆಯ ಜೊತೆಗೆ ಸೃಜನಾತ್ಮಕ ಲಹರಿ ಇದ್ದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಖಚಿತ

ವಿಮರ್ಶಾತ್ಮಕ ಯೋಚನೆಯ ಜೊತೆಗೆ ಸೃಜನಾತ್ಮಕ ಲಹರಿ ಇದ್ದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಖಚಿತ

- Advertisement -
- Advertisement -

| ಜಿ. ಆರ್. ವಿದ್ಯಾರಣ್ಯ |

ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಲು ನಮಗೆ ಎರಡು ವಿಧವಾದ ಯೋಚನಾಲಹರಿಯ ಅವಶ್ಯಕತೆ ಇರುತ್ತದೆ. ಮೊದಲನೆಯದು ವಿಮರ್ಶಾತ್ಮಕ ಯೋಚನೆ (ಕ್ರಿಟಿಕಲ್ ಥಿಂಕಿಂಗ್), ಎರಡನೆಯದು ಸೃಜನಾತ್ಮಕ ಯೋಚನೆ (ಕ್ರಿಯೇಟಿವ್ ಥಿಂಕಿಂಗ್). ವಿಮರ್ಶಾತ್ಮಕ ಯೋಚನೆ ನಮ್ಮ ಬುದ್ಧಿಮಟ್ಟ, ತರಬೇತಿ, ಕಟ್ಟುಪಾಡು, ಪರಂಪರೆ ಇವುಗಳನ್ನು ಅವಲಂಬಿಸಿದ್ದು, ಮುಖ್ಯವಾಗಿ ಒಂದೇ ರೀತಿಯಲ್ಲಿ,ಹಾಕಿದ ಹಾದಿಯಲ್ಲೇಸಾಗುತ್ತದೆ. ದಿನನಿತ್ಯದ ಕೆಲಸಕ್ಕೆ ನಾವು ಇದನ್ನು ಬಳಸುತ್ತೇವೆ. ಸರಿಯಾಗಿ ಮಾಡುತ್ತಿರುವ ಕೆಲಸವನ್ನೇ ಇನ್ನೊಂದು ವಿಧವಾಗಿ ಮಾಡಬಹುದೇ ಎಂದು ಯೋಚಿಸಲೂ ಸಹ ನಾವು ಹೆಚ್ಚಾಗಿ ಪ್ರಯತ್ನ ಪಡುವುದಿಲ್ಲ. ಅನಿರೀಕ್ಷಿತ ಸಮಸ್ಯೆಯೊಂದು ಉದ್ಭವಿಸಿದಾಗ ಅದರ ಪರಿಹಾರಕ್ಕೂನಮ್ಮ ಸಾಧಾರಣ ವಿಮರ್ಶಾತ್ಮಕ ಯೋಚನೆಯನ್ನೇ ಬಳಸುತ್ತೇವೆಯೇ ಹೊರತು, ಇದನ್ನು ವಿಭಿನ್ನವಾಗಿ ಯೋಚಿಸಿ ಪರಿಹರಿಸಬಹುದೇ ಎಂದು ಚಿಂತಿಸುವುದಿಲ್ಲ.

ಹಾಗಾದರೆ ನಾವು ಸೃಜನಾತ್ಮಕವಾಗಿ ಯೋಚಿಸುವುದು ಯಾವಾಗ? ಹೆಚ್ಚಾಗಿ ಸೃಜನಾತ್ಮಕ ಯೋಚನೆಗಳು ನಾವು ಸಮಸ್ಯೆಯ ಬಗ್ಗೆ ಯೋಚಿಸದೇ ಇರುವಂತಹ ಸಮಯದಲ್ಲಿ ದಿಢೀರನೇ ಹೊಳೆದವುಗಳಾಗಿರುತ್ತವೆ. ಇದನ್ನು ಮೆದುಳಿನ ಬಲಬದಿಯ ಯೋಚನೆ ಎಂದೂ ಹೇಳುತ್ತಾರೆ. ಈ ಮಿಂಚಿನಂತಹ ಉಪಯುಕ್ತ ಯೋಚನೆಗಳು ತಾವಾಗಿಯೇ ಬರಬೇಕೇ ಅಥವಾ ಅವನ್ನು ನಮಗೆ ಬೇಕಾದ ಸಮಯದಲ್ಲಿ ಹೊಳೆಯುವಂತೆ ಮಾಡಬಹುದೇ? ನಮ್ಮ ಎಲ್ಲಾ ಯೋಚನೆಗಳು ವಿಮರ್ಶಾತ್ಮಕವಾಗಿರುವುದಿಲ್ಲ ಎಂದ ಮಾತ್ರಕ್ಕೆ ಅವು ಸೃಜನಾತ್ಮಕವಾಗಿರುತ್ತವೆ ಎಂದೂ ಇಲ್ಲ. ತಲೆಯ ಗಾಲಿಗಳು ಅವಿರತವಾಗಿ ಸುತ್ತುತ್ತಿರುವಾಗ ಕೆಲವು ಮೂರ್ಖತನದ ಯೋಚನೆಗಳಾದರೆ, ಕೆಲವು ವಿಮರ್ಶಾತ್ಮಕ ಮತ್ತು ಒಂದೋ-ಎರಡೋ ಸೃಜನಾತ್ಮಕವಾಗಿರಬಹುದು. ಇದಕ್ಕೆ ಮುಖ್ಯ ಕಾರಣ ನಾವು ಕೇವಲ ಸಮಸ್ಯೆಯನ್ನು ಎರಡೇ ಆಯಾಮದ ಚೌಕಟ್ಟಿನಲ್ಲಿ ನೋಡುತ್ತಿರುತ್ತೇವೆ. ಹಾಗಾದರೆ ನಾವು ತ್ರಿ-ಪರಿಮಾಣ (3-ಡೈಮೆನ್ಷನ್) ನಲ್ಲಿ ಯೋಚಿಸಲು ಸಾಧ್ಯವೇ?

ಮೇಲಿನ ಚಿತ್ರ ನೋಡಿ. ಇದರಲ್ಲಿ ಮೂರು ಬೆಂಕಿಕಡ್ದಿಗಳನ್ನು ಜೋಡಿಸಿ ಒಂದು ತ್ರಿಕೋನ (ತ್ರಿಭುಜ) ನಿರ್ಮಿಸಲಾಗಿದೆ. ಬದಿಯಲ್ಲಿರುವ ಮೂರು ಕಡ್ಡಿಗಳನ್ನು ಈ ತ್ರಿಕೋನಕ್ಕೆ ಸೇರಿಸಿ ಒಟ್ಟು ನಾಲ್ಕು ಸಮಭುಜ ತ್ರಿಕೋನ ನಿರ್ಮಿಸಲು ಸಾಧ್ಯವೇ, ಯೋಚಿಸಿ.

ಮೊದಲೇ ತಿಳಿಸಿದಂತೆ ನಮ್ಮ ಸಾಮಾನ್ಯ ವಿಮರ್ಶಾತ್ಮಕ ಯೋಚನಾಲಹರಿ ನಮ್ಮ ಬುದ್ಧಿಮಟ್ಟ, ತರಬೇತಿ, ಕಟ್ಟುಪಾಡು, ಪರಂಪರೆ ಇವುಗಳ ಚೌಕಟ್ಟಿನಲ್ಲಿ ಬಂಧಿತಗೊಂಡು,ಚೌಕಟ್ಟಿನ ಹೊರಗೆ (ಔಟ್ ಆಫ್ ದಿ ಬಾಕ್ಸ್) ಸೃಜನಾತ್ಮಕವಾಗಿ ಥಟ್ಟನೆ ಯೋಚಿಸಲು ಬಿಡುವುದಿಲ್ಲ.

ಕೆಳಗೆ ಚಿತ್ರದಲ್ಲಿ ಇರುವ ಬಣ್ಣ-ಬಣ್ಣದ ಇಟ್ಟಿಗೆಗಳ ಬಣ್ಣವನ್ನು ಮೇಲಿಂದ ಕೆಳಗೆ ಗಟ್ಟಿಯಾಗಿ ಹೇಳುತ್ತಾ ಹೋಗಿ.

ಸುಲಭವಾಗಿ ಓದಿದಿರಿ, ಅಲ್ಲವೇ?

 

ಈಗ ಕೆಳಗೆ ಚಿತ್ರ-3 ರಲ್ಲಿರುವ ಬಣ್ಣಗಳ ಹೆಸರು ಹೇಳಿ (ಬಣ್ಣದ ಹೆಸರು, ಏನು ಬರೆದಿದೆ ಅದಲ್ಲ – ಮೊದಲನೆಯದು ತಿಳಿನೀಲಿ, ಕೆಂಪು ಅಲ್ಲ).

ನೋಡಿದಿರಾ, ನಮ್ಮ ಬುದ್ಧಿ ನಮಗೆ ಹೇಗೆ ಮೋಸ ಮಾಡುತ್ತದೆ ಎಂದು. ಈ ರೀತಿಯ ಬುದ್ಧಿ ವರ್ಧಕ ವ್ಯಾಯಾಮಗಳಿಂದ ನಮ್ಮ ಯೋಚನಾಲಹರಿಯನ್ನು ಬೇಕೆಂದಾಗ ಸೃಜನಾತ್ಮಕವಾಗಿ ಬಳಸಿಕೊಳ್ಳಲು ಸಾಧ್ಯವಿದೆ. ಇದಕ್ಕೆ ಸಾಕಷ್ಟು ಪರಿಶ್ರಮ ಬೇಕು. ಒಂದೇ ದಿನದಲ್ಲಿ ಆಗುವ ಕೆಲಸವಲ್ಲ.

ಈಗ ಮತ್ತೆ ಬೆಂಕಿ ಕಡ್ಡಿಯ ಸಮಸ್ಯೆಗೆ ಬರೋಣ. ನಿಮ್ಮ ಯೋಚನಾಲಹರಿ ವಿಮರ್ಶಾತ್ಮಕವಾಗಿದ್ದಲ್ಲಿ ನಿಮ್ಮ ಉತ್ತರ ಬಹುಶಃ ಕೆಳಕಂಡ ಚಿತ್ರ-4 ರಂತೆ ಇರಬಹುದು.

ಆದರೆ ಉತ್ತರ ತಪ್ಪು ಏಕೆಂದರೆ ಕಡ್ಡಿಗಳು ಒಂದೇ ಉದ್ದವಾಗಿರುವುದರಿಂದ ತ್ರಿಕೋನಗಳು ಸರಿಯಾಗಿ  ಸಮಭುಜ ತ್ರಿಕೋನವಾಗಿರುವುದಿಲ್ಲ.

ಆದರೆ ನಿಮ್ಮ ಯೋಚನಾಲಹರಿ ತ್ರಿಪರಿಣಾಮ (3-ಡೈಮೆನ್ಷನಲ್) ಆಗಿದ್ದಲ್ಲಿ ನಿಮ್ಮ ಉತ್ತರ ಬಹುಶಃ ಚಿತ್ರ-5 ರಂತೆ ಕಾಣಬಹುದು. ಇದು ಸರಿಯಾದ  ಉತ್ತರ.

ಸೃಜನಾತ್ಮಕ ಯೋಚನೆ ಪ್ರತಿ ಬಾರಿ ಸರಿಯಾಗಿರಲೇಬೇಕು ಎಂದೇನಿಲ್ಲ, ಹಾಗಾಗಿ ಉತ್ತರ ಚಿತ್ರ-6 ರಂತೆಯೂ ಇರಬಹುದು.ಉತ್ತರ ಸರಿ ಎಂದು ಎಲ್ಲರಿಗೂ ಅನಿಸದಿದ್ದರೂಸಹ ಇದು ಸಮರ್ಪಕ ಉತ್ತರ.

ಇಂತಹ ಉತ್ತರಕ್ಕೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ದೊರೆಯುತ್ತದೆ. ಸೃಜನಾತ್ಮಕ ಯೋಚನಾಲಹರಿಯನ್ನು ಹೊಂದಿರುವ ಯುವಕರಿಗೆ ಕೆಲಸ ನೀಡಲು ಕಂಪನಿಗಳು ಹಾತೊರೆಯುತ್ತಿರುತ್ತವೆ. ನಮಗೆ ವಿಮರ್ಶಾತ್ಮಕ ಯೋಚನೆಯೂ ಬೇಕು ಆದರೆ ಸೃಜನಾತ್ಮಕ ಲಹರಿಯೂ ಇರಬೇಕು. ಎರಡನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಸುಲಭವಾಗುತ್ತದೆ.

ನೀವೂ ಸಹ ಹೀಗೆ ಬೇಕೆಂದಾಗ ಸೃಜನಾತ್ಮಕವಾಗಿ ಯೋಚಿಸಲು ಕಲಿತಲ್ಲಿ, ನಿಮಗೆ ಕೆಲಸದ ಸಮಸ್ಯೆಯಾಗಲೀ, ನಿಮ್ಮ ಕಂಪನಿಯಲ್ಲಿ ಒಳ್ಳೆಯ ಸ್ಥಾನಮಾನಕ್ಕಾಗಲೀ ಎಂದೂ ತೊಂದರೆ ಇರುವುದಿಲ್ಲ. ಪ್ರಯತ್ನಿಸುತ್ತೀರಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....