Homeಮುಖಪುಟವಿಮರ್ಶಾತ್ಮಕ ಯೋಚನೆಯ ಜೊತೆಗೆ ಸೃಜನಾತ್ಮಕ ಲಹರಿ ಇದ್ದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಖಚಿತ

ವಿಮರ್ಶಾತ್ಮಕ ಯೋಚನೆಯ ಜೊತೆಗೆ ಸೃಜನಾತ್ಮಕ ಲಹರಿ ಇದ್ದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಖಚಿತ

- Advertisement -
- Advertisement -

| ಜಿ. ಆರ್. ವಿದ್ಯಾರಣ್ಯ |

ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಲು ನಮಗೆ ಎರಡು ವಿಧವಾದ ಯೋಚನಾಲಹರಿಯ ಅವಶ್ಯಕತೆ ಇರುತ್ತದೆ. ಮೊದಲನೆಯದು ವಿಮರ್ಶಾತ್ಮಕ ಯೋಚನೆ (ಕ್ರಿಟಿಕಲ್ ಥಿಂಕಿಂಗ್), ಎರಡನೆಯದು ಸೃಜನಾತ್ಮಕ ಯೋಚನೆ (ಕ್ರಿಯೇಟಿವ್ ಥಿಂಕಿಂಗ್). ವಿಮರ್ಶಾತ್ಮಕ ಯೋಚನೆ ನಮ್ಮ ಬುದ್ಧಿಮಟ್ಟ, ತರಬೇತಿ, ಕಟ್ಟುಪಾಡು, ಪರಂಪರೆ ಇವುಗಳನ್ನು ಅವಲಂಬಿಸಿದ್ದು, ಮುಖ್ಯವಾಗಿ ಒಂದೇ ರೀತಿಯಲ್ಲಿ,ಹಾಕಿದ ಹಾದಿಯಲ್ಲೇಸಾಗುತ್ತದೆ. ದಿನನಿತ್ಯದ ಕೆಲಸಕ್ಕೆ ನಾವು ಇದನ್ನು ಬಳಸುತ್ತೇವೆ. ಸರಿಯಾಗಿ ಮಾಡುತ್ತಿರುವ ಕೆಲಸವನ್ನೇ ಇನ್ನೊಂದು ವಿಧವಾಗಿ ಮಾಡಬಹುದೇ ಎಂದು ಯೋಚಿಸಲೂ ಸಹ ನಾವು ಹೆಚ್ಚಾಗಿ ಪ್ರಯತ್ನ ಪಡುವುದಿಲ್ಲ. ಅನಿರೀಕ್ಷಿತ ಸಮಸ್ಯೆಯೊಂದು ಉದ್ಭವಿಸಿದಾಗ ಅದರ ಪರಿಹಾರಕ್ಕೂನಮ್ಮ ಸಾಧಾರಣ ವಿಮರ್ಶಾತ್ಮಕ ಯೋಚನೆಯನ್ನೇ ಬಳಸುತ್ತೇವೆಯೇ ಹೊರತು, ಇದನ್ನು ವಿಭಿನ್ನವಾಗಿ ಯೋಚಿಸಿ ಪರಿಹರಿಸಬಹುದೇ ಎಂದು ಚಿಂತಿಸುವುದಿಲ್ಲ.

ಹಾಗಾದರೆ ನಾವು ಸೃಜನಾತ್ಮಕವಾಗಿ ಯೋಚಿಸುವುದು ಯಾವಾಗ? ಹೆಚ್ಚಾಗಿ ಸೃಜನಾತ್ಮಕ ಯೋಚನೆಗಳು ನಾವು ಸಮಸ್ಯೆಯ ಬಗ್ಗೆ ಯೋಚಿಸದೇ ಇರುವಂತಹ ಸಮಯದಲ್ಲಿ ದಿಢೀರನೇ ಹೊಳೆದವುಗಳಾಗಿರುತ್ತವೆ. ಇದನ್ನು ಮೆದುಳಿನ ಬಲಬದಿಯ ಯೋಚನೆ ಎಂದೂ ಹೇಳುತ್ತಾರೆ. ಈ ಮಿಂಚಿನಂತಹ ಉಪಯುಕ್ತ ಯೋಚನೆಗಳು ತಾವಾಗಿಯೇ ಬರಬೇಕೇ ಅಥವಾ ಅವನ್ನು ನಮಗೆ ಬೇಕಾದ ಸಮಯದಲ್ಲಿ ಹೊಳೆಯುವಂತೆ ಮಾಡಬಹುದೇ? ನಮ್ಮ ಎಲ್ಲಾ ಯೋಚನೆಗಳು ವಿಮರ್ಶಾತ್ಮಕವಾಗಿರುವುದಿಲ್ಲ ಎಂದ ಮಾತ್ರಕ್ಕೆ ಅವು ಸೃಜನಾತ್ಮಕವಾಗಿರುತ್ತವೆ ಎಂದೂ ಇಲ್ಲ. ತಲೆಯ ಗಾಲಿಗಳು ಅವಿರತವಾಗಿ ಸುತ್ತುತ್ತಿರುವಾಗ ಕೆಲವು ಮೂರ್ಖತನದ ಯೋಚನೆಗಳಾದರೆ, ಕೆಲವು ವಿಮರ್ಶಾತ್ಮಕ ಮತ್ತು ಒಂದೋ-ಎರಡೋ ಸೃಜನಾತ್ಮಕವಾಗಿರಬಹುದು. ಇದಕ್ಕೆ ಮುಖ್ಯ ಕಾರಣ ನಾವು ಕೇವಲ ಸಮಸ್ಯೆಯನ್ನು ಎರಡೇ ಆಯಾಮದ ಚೌಕಟ್ಟಿನಲ್ಲಿ ನೋಡುತ್ತಿರುತ್ತೇವೆ. ಹಾಗಾದರೆ ನಾವು ತ್ರಿ-ಪರಿಮಾಣ (3-ಡೈಮೆನ್ಷನ್) ನಲ್ಲಿ ಯೋಚಿಸಲು ಸಾಧ್ಯವೇ?

ಮೇಲಿನ ಚಿತ್ರ ನೋಡಿ. ಇದರಲ್ಲಿ ಮೂರು ಬೆಂಕಿಕಡ್ದಿಗಳನ್ನು ಜೋಡಿಸಿ ಒಂದು ತ್ರಿಕೋನ (ತ್ರಿಭುಜ) ನಿರ್ಮಿಸಲಾಗಿದೆ. ಬದಿಯಲ್ಲಿರುವ ಮೂರು ಕಡ್ಡಿಗಳನ್ನು ಈ ತ್ರಿಕೋನಕ್ಕೆ ಸೇರಿಸಿ ಒಟ್ಟು ನಾಲ್ಕು ಸಮಭುಜ ತ್ರಿಕೋನ ನಿರ್ಮಿಸಲು ಸಾಧ್ಯವೇ, ಯೋಚಿಸಿ.

ಮೊದಲೇ ತಿಳಿಸಿದಂತೆ ನಮ್ಮ ಸಾಮಾನ್ಯ ವಿಮರ್ಶಾತ್ಮಕ ಯೋಚನಾಲಹರಿ ನಮ್ಮ ಬುದ್ಧಿಮಟ್ಟ, ತರಬೇತಿ, ಕಟ್ಟುಪಾಡು, ಪರಂಪರೆ ಇವುಗಳ ಚೌಕಟ್ಟಿನಲ್ಲಿ ಬಂಧಿತಗೊಂಡು,ಚೌಕಟ್ಟಿನ ಹೊರಗೆ (ಔಟ್ ಆಫ್ ದಿ ಬಾಕ್ಸ್) ಸೃಜನಾತ್ಮಕವಾಗಿ ಥಟ್ಟನೆ ಯೋಚಿಸಲು ಬಿಡುವುದಿಲ್ಲ.

ಕೆಳಗೆ ಚಿತ್ರದಲ್ಲಿ ಇರುವ ಬಣ್ಣ-ಬಣ್ಣದ ಇಟ್ಟಿಗೆಗಳ ಬಣ್ಣವನ್ನು ಮೇಲಿಂದ ಕೆಳಗೆ ಗಟ್ಟಿಯಾಗಿ ಹೇಳುತ್ತಾ ಹೋಗಿ.

ಸುಲಭವಾಗಿ ಓದಿದಿರಿ, ಅಲ್ಲವೇ?

 

ಈಗ ಕೆಳಗೆ ಚಿತ್ರ-3 ರಲ್ಲಿರುವ ಬಣ್ಣಗಳ ಹೆಸರು ಹೇಳಿ (ಬಣ್ಣದ ಹೆಸರು, ಏನು ಬರೆದಿದೆ ಅದಲ್ಲ – ಮೊದಲನೆಯದು ತಿಳಿನೀಲಿ, ಕೆಂಪು ಅಲ್ಲ).

ನೋಡಿದಿರಾ, ನಮ್ಮ ಬುದ್ಧಿ ನಮಗೆ ಹೇಗೆ ಮೋಸ ಮಾಡುತ್ತದೆ ಎಂದು. ಈ ರೀತಿಯ ಬುದ್ಧಿ ವರ್ಧಕ ವ್ಯಾಯಾಮಗಳಿಂದ ನಮ್ಮ ಯೋಚನಾಲಹರಿಯನ್ನು ಬೇಕೆಂದಾಗ ಸೃಜನಾತ್ಮಕವಾಗಿ ಬಳಸಿಕೊಳ್ಳಲು ಸಾಧ್ಯವಿದೆ. ಇದಕ್ಕೆ ಸಾಕಷ್ಟು ಪರಿಶ್ರಮ ಬೇಕು. ಒಂದೇ ದಿನದಲ್ಲಿ ಆಗುವ ಕೆಲಸವಲ್ಲ.

ಈಗ ಮತ್ತೆ ಬೆಂಕಿ ಕಡ್ಡಿಯ ಸಮಸ್ಯೆಗೆ ಬರೋಣ. ನಿಮ್ಮ ಯೋಚನಾಲಹರಿ ವಿಮರ್ಶಾತ್ಮಕವಾಗಿದ್ದಲ್ಲಿ ನಿಮ್ಮ ಉತ್ತರ ಬಹುಶಃ ಕೆಳಕಂಡ ಚಿತ್ರ-4 ರಂತೆ ಇರಬಹುದು.

ಆದರೆ ಉತ್ತರ ತಪ್ಪು ಏಕೆಂದರೆ ಕಡ್ಡಿಗಳು ಒಂದೇ ಉದ್ದವಾಗಿರುವುದರಿಂದ ತ್ರಿಕೋನಗಳು ಸರಿಯಾಗಿ  ಸಮಭುಜ ತ್ರಿಕೋನವಾಗಿರುವುದಿಲ್ಲ.

ಆದರೆ ನಿಮ್ಮ ಯೋಚನಾಲಹರಿ ತ್ರಿಪರಿಣಾಮ (3-ಡೈಮೆನ್ಷನಲ್) ಆಗಿದ್ದಲ್ಲಿ ನಿಮ್ಮ ಉತ್ತರ ಬಹುಶಃ ಚಿತ್ರ-5 ರಂತೆ ಕಾಣಬಹುದು. ಇದು ಸರಿಯಾದ  ಉತ್ತರ.

ಸೃಜನಾತ್ಮಕ ಯೋಚನೆ ಪ್ರತಿ ಬಾರಿ ಸರಿಯಾಗಿರಲೇಬೇಕು ಎಂದೇನಿಲ್ಲ, ಹಾಗಾಗಿ ಉತ್ತರ ಚಿತ್ರ-6 ರಂತೆಯೂ ಇರಬಹುದು.ಉತ್ತರ ಸರಿ ಎಂದು ಎಲ್ಲರಿಗೂ ಅನಿಸದಿದ್ದರೂಸಹ ಇದು ಸಮರ್ಪಕ ಉತ್ತರ.

ಇಂತಹ ಉತ್ತರಕ್ಕೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ದೊರೆಯುತ್ತದೆ. ಸೃಜನಾತ್ಮಕ ಯೋಚನಾಲಹರಿಯನ್ನು ಹೊಂದಿರುವ ಯುವಕರಿಗೆ ಕೆಲಸ ನೀಡಲು ಕಂಪನಿಗಳು ಹಾತೊರೆಯುತ್ತಿರುತ್ತವೆ. ನಮಗೆ ವಿಮರ್ಶಾತ್ಮಕ ಯೋಚನೆಯೂ ಬೇಕು ಆದರೆ ಸೃಜನಾತ್ಮಕ ಲಹರಿಯೂ ಇರಬೇಕು. ಎರಡನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಸುಲಭವಾಗುತ್ತದೆ.

ನೀವೂ ಸಹ ಹೀಗೆ ಬೇಕೆಂದಾಗ ಸೃಜನಾತ್ಮಕವಾಗಿ ಯೋಚಿಸಲು ಕಲಿತಲ್ಲಿ, ನಿಮಗೆ ಕೆಲಸದ ಸಮಸ್ಯೆಯಾಗಲೀ, ನಿಮ್ಮ ಕಂಪನಿಯಲ್ಲಿ ಒಳ್ಳೆಯ ಸ್ಥಾನಮಾನಕ್ಕಾಗಲೀ ಎಂದೂ ತೊಂದರೆ ಇರುವುದಿಲ್ಲ. ಪ್ರಯತ್ನಿಸುತ್ತೀರಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...