Homeಮುಖಪುಟವಿಮರ್ಶಾತ್ಮಕ ಯೋಚನೆಯ ಜೊತೆಗೆ ಸೃಜನಾತ್ಮಕ ಲಹರಿ ಇದ್ದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಖಚಿತ

ವಿಮರ್ಶಾತ್ಮಕ ಯೋಚನೆಯ ಜೊತೆಗೆ ಸೃಜನಾತ್ಮಕ ಲಹರಿ ಇದ್ದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಖಚಿತ

- Advertisement -
- Advertisement -

| ಜಿ. ಆರ್. ವಿದ್ಯಾರಣ್ಯ |

ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಲು ನಮಗೆ ಎರಡು ವಿಧವಾದ ಯೋಚನಾಲಹರಿಯ ಅವಶ್ಯಕತೆ ಇರುತ್ತದೆ. ಮೊದಲನೆಯದು ವಿಮರ್ಶಾತ್ಮಕ ಯೋಚನೆ (ಕ್ರಿಟಿಕಲ್ ಥಿಂಕಿಂಗ್), ಎರಡನೆಯದು ಸೃಜನಾತ್ಮಕ ಯೋಚನೆ (ಕ್ರಿಯೇಟಿವ್ ಥಿಂಕಿಂಗ್). ವಿಮರ್ಶಾತ್ಮಕ ಯೋಚನೆ ನಮ್ಮ ಬುದ್ಧಿಮಟ್ಟ, ತರಬೇತಿ, ಕಟ್ಟುಪಾಡು, ಪರಂಪರೆ ಇವುಗಳನ್ನು ಅವಲಂಬಿಸಿದ್ದು, ಮುಖ್ಯವಾಗಿ ಒಂದೇ ರೀತಿಯಲ್ಲಿ,ಹಾಕಿದ ಹಾದಿಯಲ್ಲೇಸಾಗುತ್ತದೆ. ದಿನನಿತ್ಯದ ಕೆಲಸಕ್ಕೆ ನಾವು ಇದನ್ನು ಬಳಸುತ್ತೇವೆ. ಸರಿಯಾಗಿ ಮಾಡುತ್ತಿರುವ ಕೆಲಸವನ್ನೇ ಇನ್ನೊಂದು ವಿಧವಾಗಿ ಮಾಡಬಹುದೇ ಎಂದು ಯೋಚಿಸಲೂ ಸಹ ನಾವು ಹೆಚ್ಚಾಗಿ ಪ್ರಯತ್ನ ಪಡುವುದಿಲ್ಲ. ಅನಿರೀಕ್ಷಿತ ಸಮಸ್ಯೆಯೊಂದು ಉದ್ಭವಿಸಿದಾಗ ಅದರ ಪರಿಹಾರಕ್ಕೂನಮ್ಮ ಸಾಧಾರಣ ವಿಮರ್ಶಾತ್ಮಕ ಯೋಚನೆಯನ್ನೇ ಬಳಸುತ್ತೇವೆಯೇ ಹೊರತು, ಇದನ್ನು ವಿಭಿನ್ನವಾಗಿ ಯೋಚಿಸಿ ಪರಿಹರಿಸಬಹುದೇ ಎಂದು ಚಿಂತಿಸುವುದಿಲ್ಲ.

ಹಾಗಾದರೆ ನಾವು ಸೃಜನಾತ್ಮಕವಾಗಿ ಯೋಚಿಸುವುದು ಯಾವಾಗ? ಹೆಚ್ಚಾಗಿ ಸೃಜನಾತ್ಮಕ ಯೋಚನೆಗಳು ನಾವು ಸಮಸ್ಯೆಯ ಬಗ್ಗೆ ಯೋಚಿಸದೇ ಇರುವಂತಹ ಸಮಯದಲ್ಲಿ ದಿಢೀರನೇ ಹೊಳೆದವುಗಳಾಗಿರುತ್ತವೆ. ಇದನ್ನು ಮೆದುಳಿನ ಬಲಬದಿಯ ಯೋಚನೆ ಎಂದೂ ಹೇಳುತ್ತಾರೆ. ಈ ಮಿಂಚಿನಂತಹ ಉಪಯುಕ್ತ ಯೋಚನೆಗಳು ತಾವಾಗಿಯೇ ಬರಬೇಕೇ ಅಥವಾ ಅವನ್ನು ನಮಗೆ ಬೇಕಾದ ಸಮಯದಲ್ಲಿ ಹೊಳೆಯುವಂತೆ ಮಾಡಬಹುದೇ? ನಮ್ಮ ಎಲ್ಲಾ ಯೋಚನೆಗಳು ವಿಮರ್ಶಾತ್ಮಕವಾಗಿರುವುದಿಲ್ಲ ಎಂದ ಮಾತ್ರಕ್ಕೆ ಅವು ಸೃಜನಾತ್ಮಕವಾಗಿರುತ್ತವೆ ಎಂದೂ ಇಲ್ಲ. ತಲೆಯ ಗಾಲಿಗಳು ಅವಿರತವಾಗಿ ಸುತ್ತುತ್ತಿರುವಾಗ ಕೆಲವು ಮೂರ್ಖತನದ ಯೋಚನೆಗಳಾದರೆ, ಕೆಲವು ವಿಮರ್ಶಾತ್ಮಕ ಮತ್ತು ಒಂದೋ-ಎರಡೋ ಸೃಜನಾತ್ಮಕವಾಗಿರಬಹುದು. ಇದಕ್ಕೆ ಮುಖ್ಯ ಕಾರಣ ನಾವು ಕೇವಲ ಸಮಸ್ಯೆಯನ್ನು ಎರಡೇ ಆಯಾಮದ ಚೌಕಟ್ಟಿನಲ್ಲಿ ನೋಡುತ್ತಿರುತ್ತೇವೆ. ಹಾಗಾದರೆ ನಾವು ತ್ರಿ-ಪರಿಮಾಣ (3-ಡೈಮೆನ್ಷನ್) ನಲ್ಲಿ ಯೋಚಿಸಲು ಸಾಧ್ಯವೇ?

ಮೇಲಿನ ಚಿತ್ರ ನೋಡಿ. ಇದರಲ್ಲಿ ಮೂರು ಬೆಂಕಿಕಡ್ದಿಗಳನ್ನು ಜೋಡಿಸಿ ಒಂದು ತ್ರಿಕೋನ (ತ್ರಿಭುಜ) ನಿರ್ಮಿಸಲಾಗಿದೆ. ಬದಿಯಲ್ಲಿರುವ ಮೂರು ಕಡ್ಡಿಗಳನ್ನು ಈ ತ್ರಿಕೋನಕ್ಕೆ ಸೇರಿಸಿ ಒಟ್ಟು ನಾಲ್ಕು ಸಮಭುಜ ತ್ರಿಕೋನ ನಿರ್ಮಿಸಲು ಸಾಧ್ಯವೇ, ಯೋಚಿಸಿ.

ಮೊದಲೇ ತಿಳಿಸಿದಂತೆ ನಮ್ಮ ಸಾಮಾನ್ಯ ವಿಮರ್ಶಾತ್ಮಕ ಯೋಚನಾಲಹರಿ ನಮ್ಮ ಬುದ್ಧಿಮಟ್ಟ, ತರಬೇತಿ, ಕಟ್ಟುಪಾಡು, ಪರಂಪರೆ ಇವುಗಳ ಚೌಕಟ್ಟಿನಲ್ಲಿ ಬಂಧಿತಗೊಂಡು,ಚೌಕಟ್ಟಿನ ಹೊರಗೆ (ಔಟ್ ಆಫ್ ದಿ ಬಾಕ್ಸ್) ಸೃಜನಾತ್ಮಕವಾಗಿ ಥಟ್ಟನೆ ಯೋಚಿಸಲು ಬಿಡುವುದಿಲ್ಲ.

ಕೆಳಗೆ ಚಿತ್ರದಲ್ಲಿ ಇರುವ ಬಣ್ಣ-ಬಣ್ಣದ ಇಟ್ಟಿಗೆಗಳ ಬಣ್ಣವನ್ನು ಮೇಲಿಂದ ಕೆಳಗೆ ಗಟ್ಟಿಯಾಗಿ ಹೇಳುತ್ತಾ ಹೋಗಿ.

ಸುಲಭವಾಗಿ ಓದಿದಿರಿ, ಅಲ್ಲವೇ?

 

ಈಗ ಕೆಳಗೆ ಚಿತ್ರ-3 ರಲ್ಲಿರುವ ಬಣ್ಣಗಳ ಹೆಸರು ಹೇಳಿ (ಬಣ್ಣದ ಹೆಸರು, ಏನು ಬರೆದಿದೆ ಅದಲ್ಲ – ಮೊದಲನೆಯದು ತಿಳಿನೀಲಿ, ಕೆಂಪು ಅಲ್ಲ).

ನೋಡಿದಿರಾ, ನಮ್ಮ ಬುದ್ಧಿ ನಮಗೆ ಹೇಗೆ ಮೋಸ ಮಾಡುತ್ತದೆ ಎಂದು. ಈ ರೀತಿಯ ಬುದ್ಧಿ ವರ್ಧಕ ವ್ಯಾಯಾಮಗಳಿಂದ ನಮ್ಮ ಯೋಚನಾಲಹರಿಯನ್ನು ಬೇಕೆಂದಾಗ ಸೃಜನಾತ್ಮಕವಾಗಿ ಬಳಸಿಕೊಳ್ಳಲು ಸಾಧ್ಯವಿದೆ. ಇದಕ್ಕೆ ಸಾಕಷ್ಟು ಪರಿಶ್ರಮ ಬೇಕು. ಒಂದೇ ದಿನದಲ್ಲಿ ಆಗುವ ಕೆಲಸವಲ್ಲ.

ಈಗ ಮತ್ತೆ ಬೆಂಕಿ ಕಡ್ಡಿಯ ಸಮಸ್ಯೆಗೆ ಬರೋಣ. ನಿಮ್ಮ ಯೋಚನಾಲಹರಿ ವಿಮರ್ಶಾತ್ಮಕವಾಗಿದ್ದಲ್ಲಿ ನಿಮ್ಮ ಉತ್ತರ ಬಹುಶಃ ಕೆಳಕಂಡ ಚಿತ್ರ-4 ರಂತೆ ಇರಬಹುದು.

ಆದರೆ ಉತ್ತರ ತಪ್ಪು ಏಕೆಂದರೆ ಕಡ್ಡಿಗಳು ಒಂದೇ ಉದ್ದವಾಗಿರುವುದರಿಂದ ತ್ರಿಕೋನಗಳು ಸರಿಯಾಗಿ  ಸಮಭುಜ ತ್ರಿಕೋನವಾಗಿರುವುದಿಲ್ಲ.

ಆದರೆ ನಿಮ್ಮ ಯೋಚನಾಲಹರಿ ತ್ರಿಪರಿಣಾಮ (3-ಡೈಮೆನ್ಷನಲ್) ಆಗಿದ್ದಲ್ಲಿ ನಿಮ್ಮ ಉತ್ತರ ಬಹುಶಃ ಚಿತ್ರ-5 ರಂತೆ ಕಾಣಬಹುದು. ಇದು ಸರಿಯಾದ  ಉತ್ತರ.

ಸೃಜನಾತ್ಮಕ ಯೋಚನೆ ಪ್ರತಿ ಬಾರಿ ಸರಿಯಾಗಿರಲೇಬೇಕು ಎಂದೇನಿಲ್ಲ, ಹಾಗಾಗಿ ಉತ್ತರ ಚಿತ್ರ-6 ರಂತೆಯೂ ಇರಬಹುದು.ಉತ್ತರ ಸರಿ ಎಂದು ಎಲ್ಲರಿಗೂ ಅನಿಸದಿದ್ದರೂಸಹ ಇದು ಸಮರ್ಪಕ ಉತ್ತರ.

ಇಂತಹ ಉತ್ತರಕ್ಕೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ದೊರೆಯುತ್ತದೆ. ಸೃಜನಾತ್ಮಕ ಯೋಚನಾಲಹರಿಯನ್ನು ಹೊಂದಿರುವ ಯುವಕರಿಗೆ ಕೆಲಸ ನೀಡಲು ಕಂಪನಿಗಳು ಹಾತೊರೆಯುತ್ತಿರುತ್ತವೆ. ನಮಗೆ ವಿಮರ್ಶಾತ್ಮಕ ಯೋಚನೆಯೂ ಬೇಕು ಆದರೆ ಸೃಜನಾತ್ಮಕ ಲಹರಿಯೂ ಇರಬೇಕು. ಎರಡನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಸುಲಭವಾಗುತ್ತದೆ.

ನೀವೂ ಸಹ ಹೀಗೆ ಬೇಕೆಂದಾಗ ಸೃಜನಾತ್ಮಕವಾಗಿ ಯೋಚಿಸಲು ಕಲಿತಲ್ಲಿ, ನಿಮಗೆ ಕೆಲಸದ ಸಮಸ್ಯೆಯಾಗಲೀ, ನಿಮ್ಮ ಕಂಪನಿಯಲ್ಲಿ ಒಳ್ಳೆಯ ಸ್ಥಾನಮಾನಕ್ಕಾಗಲೀ ಎಂದೂ ತೊಂದರೆ ಇರುವುದಿಲ್ಲ. ಪ್ರಯತ್ನಿಸುತ್ತೀರಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...