Homeಅಂತರಾಷ್ಟ್ರೀಯಮಾಸ್ಕೋ: ಸಂಗೀತ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: 60 ಜನರು ಸಾವು, ಹಲವರಿಗೆ ಗಂಭೀರ ಗಾಯ

ಮಾಸ್ಕೋ: ಸಂಗೀತ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: 60 ಜನರು ಸಾವು, ಹಲವರಿಗೆ ಗಂಭೀರ ಗಾಯ

- Advertisement -
- Advertisement -

ಮಾಸ್ಕೋದ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಸಂಗೀತ ಕಚೇರಿ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು, ಈ ವೇಳೆ ಕನಿಷ್ಠ 60 ಜನರು ಮೃತಪಟ್ಟಿದ್ದು, 145ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ರಷ್ಯಾದಲ್ಲಿ ನಡೆದ ಅತಿ ಭೀಕರ ಭಯೋತ್ಪಾದಕ ದಾಳಿ ಎಂದು ಹೇಳಲಾಗಿದೆ.

ಶುಕ್ರವಾರ ರಾತ್ರಿ ನಗರದ ಪಶ್ಚಿಮ ಉಪನಗರದಲ್ಲಿರುವ ಕಿಕ್ಕಿರಿದ ಕನ್ಸರ್ಟ್ ಹಾಲ್‌ಗೆ ಶಸ್ತ್ರಾಸ್ತ್ರಗಳೊಂದಿಗೆ ನುಗ್ಗಿದ ಐವರು ಮುಸುಕುದಾರಿ ಬಂದೂಕುಧಾರಿಗಳು ಸಂಗೀತ ಕಾರ್ಯಕ್ರಮದಲ್ಲಿದ್ದವರ ಮೇಲೆ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಬಳಿಕ ಸ್ಥಳದಲ್ಲಿ ಸ್ಪೋಟ ಸಂಭವಿಸಿದೆ.

ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತನಿಖಾಧಿಕಾರಿಗಳು ತಿಳಿಸಿದ್ದಾರೆ. ಸುಮಾರು 145 ಮಂದಿ ಗಾಯಗೊಂಡಿದ್ದು, ಅವರಲ್ಲಿ 60 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಇರಾಕ್ ಮತ್ತು ಸಿರಿಯಾದ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದ್ದ ISIL ಸಂಗೀತ ಕಾರ್ಯಕ್ರಮದ ಮೇಲಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಅಲ್‌ಜಝೀರಾ ವರದಿ ತಿಳಿಸಿದೆ.

ಮಾಸ್ಕೋದಲ್ಲಿ ಅತ್ಯಂತ ಜನಪ್ರಿಯವಾಗಿರುವ ಕನ್ಸರ್ಟ್ ಹಾಲ್ ಸುಮಾರು 6,200 ಜನರು ಸೇರುವಷ್ಟು ದೊಡ್ಡದಾದ ವ್ಯವಸ್ಥೆ ಅಲ್ಲಿದೆ. ಈ ಬಗ್ಗೆ ಮಾತನಾಡಿದ ಸಂಗೀತ ನಿರ್ಮಾಪಕ ಅಲೆಕ್ಸಿ, ಹಲವಾರು ಮೆಷಿನ್‌ಗನ್‌ಗಳ ಸ್ಫೋಟಗಳು ಸಂಭವಿಸಿದೆ. ಬಹಳಷ್ಟು ಕಿರುಚಾಟಗಳು ಕೇಳಿ ಬಂದಿದ್ದು, ಈ ವೇಳೆ ಸ್ಪೋಟ ಗೊಂಡಿರುವುದು ಮತ್ತು ದಾಳಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ. ಬಾಂಬ್‌ಗಳನ್ನು  ಸಭಾಂಗಣದೊಳಗೆ ಸ್ಫೋಟಿಸಿದ್ದರಿಂದಾಗಿ ಇಡೀ ಸಭಾಂಗಣ ಹಾಗೂ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ವ್ಯಾಪಿಸಿದೆ. ದಟ್ಟವಾದ ಹೊಗೆ ತುಂಬಿದ ಸಭಾಂಗಣದಲ್ಲಿ ಹಲವಾರು ಹೊತ್ತು ಗುಂಡಿನ ದಾಳಿಯ ಸದ್ದು ಕೇಳಿ ಬರುತ್ತಿತ್ತು ಎಂದು ರಷ್ಯಾದ ಸುದ್ದಿ ಸಂಸ್ಥೆ ಆರ್ ಐಎ ನೊವಾಸ್ಟಿ ವರದಿ ಮಾಡಿದೆ.

ಘಟನೆ ವೇಳೆ ಹಾಲ್‌ನಿಂದ ಓಡುಹೋಗಲು ಯತ್ನಿಸಿದಾಗ ತುರ್ತು ನಿರ್ಗಮನದ ಸ್ಥಳದಲ್ಲಿ ನೂಕು ನುಗ್ಗಲು ಉಂಟಾಗಿದೆ. ಗುಂಡಿನ ದಾಳಿಯ ಘಟನೆಯ ನಂತರ ರಷ್ಯಾದ ಕಾನೂನು ಜಾರಿ ಅಧಿಕಾರಿಗಳು ಕ್ರೋಕಸ್ ಸಿಟಿ ಹಾಲ್ ಕನ್ಸರ್ಟ್ ಸ್ಥಳದ ಬಳಿ ರಕ್ಷಣಾ ಪಡೆಗಳನ್ನು ಇರಿಸಿ ಕಟ್ಟೆಚ್ಚರವನ್ನು ವಹಿಸಿದ್ದಾರೆ.

ಘಟನೆ ವೇಳೆ ಸ್ಥಳದಲ್ಲಿದ್ದ ವ್ಯಕ್ತಿಯೋರ್ವರು ರಾಯಿಟರ್ಸ್ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುತ್ತಾ,  ಭಯೋತ್ಪಾದನೆ ದಾಳಿ ನಡೆದಾಗ ಮೊದಲು ಕಾಲ್ತುಳಿತ ಪ್ರಾರಂಭವಾಯಿತು. ಎಲ್ಲರೂ ಕಿರುಚಾಡುತ್ತಾ ಓಡುತ್ತಿದ್ದರು ಎಂದು ಭಯಾನಕತೆಯನ್ನು ವಿವರಿಸಿದ್ದಾರೆ. ಮಾಸ್ಕೋ ಮೇಯರ್ ಸೆರ್ಗೆಯ್ ಸೊಬಯಾನಿನ್ ದಾಳಿಯನ್ನು ದೊಡ್ಡ ದುರಂತ ಎಂದಿದ್ದು, ದಾಳಿ ನಡೆದ ಸ್ಥಳಕ್ಕೆ ಕನಿಷ್ಠ 50 ಆಂಬುಲೆನ್ಸ್‌ಗಳನ್ನು ಕಳುಹಿಸಿ ರಕ್ಷಣಾ ಕಾರ್ಯ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಹಿಮಾಚಲ ಪ್ರದೇಶ: ಸರ್ಕಾರ ಅಸ್ಥಿರಗೊಳಿಸಲು ಮುಂದುವರಿದ ಬಿಜೆಪಿ ಪ್ರಯತ್ನ; ಮೂವರು ಸ್ವತಂತ್ರ ಶಾಸಕರಿಂದ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...