Homeಅಂತರಾಷ್ಟ್ರೀಯಮಾಸ್ಕೋ: ಸಂಗೀತ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: 60 ಜನರು ಸಾವು, ಹಲವರಿಗೆ ಗಂಭೀರ ಗಾಯ

ಮಾಸ್ಕೋ: ಸಂಗೀತ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: 60 ಜನರು ಸಾವು, ಹಲವರಿಗೆ ಗಂಭೀರ ಗಾಯ

- Advertisement -
- Advertisement -

ಮಾಸ್ಕೋದ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಸಂಗೀತ ಕಚೇರಿ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು, ಈ ವೇಳೆ ಕನಿಷ್ಠ 60 ಜನರು ಮೃತಪಟ್ಟಿದ್ದು, 145ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ರಷ್ಯಾದಲ್ಲಿ ನಡೆದ ಅತಿ ಭೀಕರ ಭಯೋತ್ಪಾದಕ ದಾಳಿ ಎಂದು ಹೇಳಲಾಗಿದೆ.

ಶುಕ್ರವಾರ ರಾತ್ರಿ ನಗರದ ಪಶ್ಚಿಮ ಉಪನಗರದಲ್ಲಿರುವ ಕಿಕ್ಕಿರಿದ ಕನ್ಸರ್ಟ್ ಹಾಲ್‌ಗೆ ಶಸ್ತ್ರಾಸ್ತ್ರಗಳೊಂದಿಗೆ ನುಗ್ಗಿದ ಐವರು ಮುಸುಕುದಾರಿ ಬಂದೂಕುಧಾರಿಗಳು ಸಂಗೀತ ಕಾರ್ಯಕ್ರಮದಲ್ಲಿದ್ದವರ ಮೇಲೆ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಬಳಿಕ ಸ್ಥಳದಲ್ಲಿ ಸ್ಪೋಟ ಸಂಭವಿಸಿದೆ.

ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತನಿಖಾಧಿಕಾರಿಗಳು ತಿಳಿಸಿದ್ದಾರೆ. ಸುಮಾರು 145 ಮಂದಿ ಗಾಯಗೊಂಡಿದ್ದು, ಅವರಲ್ಲಿ 60 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಇರಾಕ್ ಮತ್ತು ಸಿರಿಯಾದ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದ್ದ ISIL ಸಂಗೀತ ಕಾರ್ಯಕ್ರಮದ ಮೇಲಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಅಲ್‌ಜಝೀರಾ ವರದಿ ತಿಳಿಸಿದೆ.

ಮಾಸ್ಕೋದಲ್ಲಿ ಅತ್ಯಂತ ಜನಪ್ರಿಯವಾಗಿರುವ ಕನ್ಸರ್ಟ್ ಹಾಲ್ ಸುಮಾರು 6,200 ಜನರು ಸೇರುವಷ್ಟು ದೊಡ್ಡದಾದ ವ್ಯವಸ್ಥೆ ಅಲ್ಲಿದೆ. ಈ ಬಗ್ಗೆ ಮಾತನಾಡಿದ ಸಂಗೀತ ನಿರ್ಮಾಪಕ ಅಲೆಕ್ಸಿ, ಹಲವಾರು ಮೆಷಿನ್‌ಗನ್‌ಗಳ ಸ್ಫೋಟಗಳು ಸಂಭವಿಸಿದೆ. ಬಹಳಷ್ಟು ಕಿರುಚಾಟಗಳು ಕೇಳಿ ಬಂದಿದ್ದು, ಈ ವೇಳೆ ಸ್ಪೋಟ ಗೊಂಡಿರುವುದು ಮತ್ತು ದಾಳಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ. ಬಾಂಬ್‌ಗಳನ್ನು  ಸಭಾಂಗಣದೊಳಗೆ ಸ್ಫೋಟಿಸಿದ್ದರಿಂದಾಗಿ ಇಡೀ ಸಭಾಂಗಣ ಹಾಗೂ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ವ್ಯಾಪಿಸಿದೆ. ದಟ್ಟವಾದ ಹೊಗೆ ತುಂಬಿದ ಸಭಾಂಗಣದಲ್ಲಿ ಹಲವಾರು ಹೊತ್ತು ಗುಂಡಿನ ದಾಳಿಯ ಸದ್ದು ಕೇಳಿ ಬರುತ್ತಿತ್ತು ಎಂದು ರಷ್ಯಾದ ಸುದ್ದಿ ಸಂಸ್ಥೆ ಆರ್ ಐಎ ನೊವಾಸ್ಟಿ ವರದಿ ಮಾಡಿದೆ.

ಘಟನೆ ವೇಳೆ ಹಾಲ್‌ನಿಂದ ಓಡುಹೋಗಲು ಯತ್ನಿಸಿದಾಗ ತುರ್ತು ನಿರ್ಗಮನದ ಸ್ಥಳದಲ್ಲಿ ನೂಕು ನುಗ್ಗಲು ಉಂಟಾಗಿದೆ. ಗುಂಡಿನ ದಾಳಿಯ ಘಟನೆಯ ನಂತರ ರಷ್ಯಾದ ಕಾನೂನು ಜಾರಿ ಅಧಿಕಾರಿಗಳು ಕ್ರೋಕಸ್ ಸಿಟಿ ಹಾಲ್ ಕನ್ಸರ್ಟ್ ಸ್ಥಳದ ಬಳಿ ರಕ್ಷಣಾ ಪಡೆಗಳನ್ನು ಇರಿಸಿ ಕಟ್ಟೆಚ್ಚರವನ್ನು ವಹಿಸಿದ್ದಾರೆ.

ಘಟನೆ ವೇಳೆ ಸ್ಥಳದಲ್ಲಿದ್ದ ವ್ಯಕ್ತಿಯೋರ್ವರು ರಾಯಿಟರ್ಸ್ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುತ್ತಾ,  ಭಯೋತ್ಪಾದನೆ ದಾಳಿ ನಡೆದಾಗ ಮೊದಲು ಕಾಲ್ತುಳಿತ ಪ್ರಾರಂಭವಾಯಿತು. ಎಲ್ಲರೂ ಕಿರುಚಾಡುತ್ತಾ ಓಡುತ್ತಿದ್ದರು ಎಂದು ಭಯಾನಕತೆಯನ್ನು ವಿವರಿಸಿದ್ದಾರೆ. ಮಾಸ್ಕೋ ಮೇಯರ್ ಸೆರ್ಗೆಯ್ ಸೊಬಯಾನಿನ್ ದಾಳಿಯನ್ನು ದೊಡ್ಡ ದುರಂತ ಎಂದಿದ್ದು, ದಾಳಿ ನಡೆದ ಸ್ಥಳಕ್ಕೆ ಕನಿಷ್ಠ 50 ಆಂಬುಲೆನ್ಸ್‌ಗಳನ್ನು ಕಳುಹಿಸಿ ರಕ್ಷಣಾ ಕಾರ್ಯ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಹಿಮಾಚಲ ಪ್ರದೇಶ: ಸರ್ಕಾರ ಅಸ್ಥಿರಗೊಳಿಸಲು ಮುಂದುವರಿದ ಬಿಜೆಪಿ ಪ್ರಯತ್ನ; ಮೂವರು ಸ್ವತಂತ್ರ ಶಾಸಕರಿಂದ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...