Homeಮುಖಪುಟಮೋದಿ ಸರ್ಕಾರಕ್ಕೆ ಬಂಡವಾಳಶಾಹಿಗಳೇ ಆಪ್ತ ಸ್ನೇಹಿತರು: ರಾಹುಲ್ ಗಾಂಧಿ

ಮೋದಿ ಸರ್ಕಾರಕ್ಕೆ ಬಂಡವಾಳಶಾಹಿಗಳೇ ಆಪ್ತ ಸ್ನೇಹಿತರು: ರಾಹುಲ್ ಗಾಂಧಿ

ಚುನಾವಣೆಗೆ ಹಣಕಾಸು ಒದಗಿಸುವವರ ಕೈಬಿಟ್ಟು, ಅನ್ನದಾತರ ಕೈಗಳನ್ನು ಹಿಡಿದುಕೊಳ್ಳಿ, ಅವರ ಕಣ್ಣೀರನ್ನು ಒರೆಸಿ, ಕ್ಷಮೆಯಾಚಿಸಿ, ಮೂರು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಿ.

- Advertisement -
- Advertisement -

ಕೃಷಿ ಮಸೂದೆಗಳ ರದ್ದತಿಗೆ ಆಗ್ರಹಿಸಿ ದೆಹಲಿ ಗಡಿಗಳಲ್ಲಿ ರೈತರು ಉಪವಾಸ ಸತ್ಯಾಗ್ರಹ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ರೈತರು, ವಿದ್ಯಾರ್ಥಿಗಳು ಎಲ್ಲಾ ಇವರ ವಿರೋಧಿಗಳು. ಮೋದಿ ಸರ್ಕಾರಕ್ಕೆ ಬಂಡವಾಳಶಾಹಿಗಳು ಮಾತ್ರ ಆಪ್ತ ಸ್ನೇಹಿತರು ಎಂದಿದ್ದಾರೆ.

ಇಂದು ಟ್ವಿಟರ್‌ನಲ್ಲಿ ಕಿಡಿಕಾರಿರುವ ರಾಹುಲ್ ಗಾಂಧಿ, ಮೋದಿ ಸರ್ಕಾರವನ್ನು ವಿರೋಧಿಸಿ ಧ್ವನಿ ಎತ್ತುವವರೆಲ್ಲರೂ ಶತ್ರುಗಳೆಂದು ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ. ಆದರೆ ಬಂಡವಾಳಶಾಹಿಗಳು ಮಾತ್ರ ಉತ್ತಮ ಸ್ನೇಹಿತರು ಎಂದು ಹೇಳಿದ್ದಾರೆ.

ನಿನ್ನೆಯ ರೈತರ ದಿನವಿಡೀ ಉಪವಾಸ ಸತ್ಯಾಗ್ರಹದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದೆ. ಹೊಸ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ಸರ್ಕಾರ ಚುನಾವಣೆಗೆ ಹಣಕಾಸು ಪೂರೈಸುವವರನ್ನು ತೊರೆದು, ದೇಶದ ಆಹಾರ ಪೂರೈಕೆದಾರರ ಕೈ ಹಿಡಿಯಬೇಕು ಎಂದು ಹೇಳಿತ್ತು.

ಇದನ್ನೂ ಓದಿ: ಕರ್ನಾಟಕದ ಸುಮಾರು 50% ರಷ್ಟು ಯುವತಿಯರಿಗೆ ರಕ್ತಹೀನತೆ- NFHS ವರದಿ

ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಮೋದಿ ಸರ್ಕಾರಕ್ಕೆ: ಭಿನ್ನಾಭಿಪ್ರಾಯ ಹೊಂದಿರುವ ವಿದ್ಯಾರ್ಥಿಗಳು ರಾಷ್ಟ್ರ ವಿರೋಧಿಗಳು. ಸಮಾಜದ ಬಗ್ಗೆ ಕಳವಳ ವ್ಯಕ್ತಪಡಿಸಿ, ಧ್ವನಿಯೆತ್ತುವ ನಾಗರಿಕರು ನಗರ ನಕ್ಸಲರು. ವಲಸೆ ಕಾರ್ಮಿಕರು ಕೊರೊನಾ ಸೋಂಕು ಹರಡುವ ವಾಹಕಗಳು. ಅತ್ಯಾಚಾರಕ್ಕೊಳಗಾದವರು ಇವರಿಗೆ ಯಾರೂ ಅಲ್ಲ. ಪ್ರತಿಭಟನಾ ನಿರತ ರೈತರು ಖಲಿಸ್ತಾನಿಗಳು. ಆದರೆ, ಆಪ್ತ ಬಂಡವಾಳಶಾಹಿಗಳು ಉತ್ತಮ ಸ್ನೇಹಿತರು” ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಸುಮಾರು 32 ರೈತ ಸಂಘಗಳ ಮುಖಂಡರು ದೆಹಲಿಯ ಸಿಂಘು ಗಡಿಯಲ್ಲಿ ಸೋಮವಾರ ಉಪವಾಸ ಸತ್ಯಾಗ್ರಹವನ್ನು ಆಚರಿಸಿದರು. ರೈತರನ್ನು ಬೆಂಬಲಿಸಿ ದೇಶಾದ್ಯಂತ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹ, ಪ್ರತಿಭಟನೆಗಳು ನಡೆದಿವೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ

PC: ANI

ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೆವಾಲಾ, “73 ವರ್ಷಗಳಲ್ಲಿ ಮೊದಲ ಬಾರಿಗೆ ರಾಷ್ಟ್ರವನ್ನು ಪೋಷಿಸುವ ರೈತರು ದೇಶಾದ್ಯಂತ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಇನ್ನೂ ಎಷ್ಟು ‘ಅಚ್ಚೆ ದಿನ್’  ತರುತ್ತೀರಿ ಮೋದಿಯವರೇ?” ಎಂದು ಪ್ರಶ್ನಿಸಿದ್ದರು.

“ಚುನಾವಣೆಗೆ ಹಣಕಾಸು ಒದಗಿಸುವವರ ಕೈಬಿಟ್ಟು, ಅನ್ನದಾತರ ಕೈಗಳನ್ನು ಹಿಡಿದುಕೊಳ್ಳಿ, ಅವರ ಕಣ್ಣೀರನ್ನು ಒರೆಸಿ, ಕ್ಷಮೆಯಾಚಿಸಿ, ಮೂರು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಿ” ಎಂದು ಸುರ್ಜೆವಾಲಾ ಆಗ್ರಹಿಸಿದ್ದರು.


ಇದನ್ನೂ ಓದಿ: ರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...