Homeಮುಖಪುಟಮೋದಿ ಸರ್ಕಾರಕ್ಕೆ ಬಂಡವಾಳಶಾಹಿಗಳೇ ಆಪ್ತ ಸ್ನೇಹಿತರು: ರಾಹುಲ್ ಗಾಂಧಿ

ಮೋದಿ ಸರ್ಕಾರಕ್ಕೆ ಬಂಡವಾಳಶಾಹಿಗಳೇ ಆಪ್ತ ಸ್ನೇಹಿತರು: ರಾಹುಲ್ ಗಾಂಧಿ

ಚುನಾವಣೆಗೆ ಹಣಕಾಸು ಒದಗಿಸುವವರ ಕೈಬಿಟ್ಟು, ಅನ್ನದಾತರ ಕೈಗಳನ್ನು ಹಿಡಿದುಕೊಳ್ಳಿ, ಅವರ ಕಣ್ಣೀರನ್ನು ಒರೆಸಿ, ಕ್ಷಮೆಯಾಚಿಸಿ, ಮೂರು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಿ.

- Advertisement -
- Advertisement -

ಕೃಷಿ ಮಸೂದೆಗಳ ರದ್ದತಿಗೆ ಆಗ್ರಹಿಸಿ ದೆಹಲಿ ಗಡಿಗಳಲ್ಲಿ ರೈತರು ಉಪವಾಸ ಸತ್ಯಾಗ್ರಹ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ರೈತರು, ವಿದ್ಯಾರ್ಥಿಗಳು ಎಲ್ಲಾ ಇವರ ವಿರೋಧಿಗಳು. ಮೋದಿ ಸರ್ಕಾರಕ್ಕೆ ಬಂಡವಾಳಶಾಹಿಗಳು ಮಾತ್ರ ಆಪ್ತ ಸ್ನೇಹಿತರು ಎಂದಿದ್ದಾರೆ.

ಇಂದು ಟ್ವಿಟರ್‌ನಲ್ಲಿ ಕಿಡಿಕಾರಿರುವ ರಾಹುಲ್ ಗಾಂಧಿ, ಮೋದಿ ಸರ್ಕಾರವನ್ನು ವಿರೋಧಿಸಿ ಧ್ವನಿ ಎತ್ತುವವರೆಲ್ಲರೂ ಶತ್ರುಗಳೆಂದು ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ. ಆದರೆ ಬಂಡವಾಳಶಾಹಿಗಳು ಮಾತ್ರ ಉತ್ತಮ ಸ್ನೇಹಿತರು ಎಂದು ಹೇಳಿದ್ದಾರೆ.

ನಿನ್ನೆಯ ರೈತರ ದಿನವಿಡೀ ಉಪವಾಸ ಸತ್ಯಾಗ್ರಹದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದೆ. ಹೊಸ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ಸರ್ಕಾರ ಚುನಾವಣೆಗೆ ಹಣಕಾಸು ಪೂರೈಸುವವರನ್ನು ತೊರೆದು, ದೇಶದ ಆಹಾರ ಪೂರೈಕೆದಾರರ ಕೈ ಹಿಡಿಯಬೇಕು ಎಂದು ಹೇಳಿತ್ತು.

ಇದನ್ನೂ ಓದಿ: ಕರ್ನಾಟಕದ ಸುಮಾರು 50% ರಷ್ಟು ಯುವತಿಯರಿಗೆ ರಕ್ತಹೀನತೆ- NFHS ವರದಿ

ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಮೋದಿ ಸರ್ಕಾರಕ್ಕೆ: ಭಿನ್ನಾಭಿಪ್ರಾಯ ಹೊಂದಿರುವ ವಿದ್ಯಾರ್ಥಿಗಳು ರಾಷ್ಟ್ರ ವಿರೋಧಿಗಳು. ಸಮಾಜದ ಬಗ್ಗೆ ಕಳವಳ ವ್ಯಕ್ತಪಡಿಸಿ, ಧ್ವನಿಯೆತ್ತುವ ನಾಗರಿಕರು ನಗರ ನಕ್ಸಲರು. ವಲಸೆ ಕಾರ್ಮಿಕರು ಕೊರೊನಾ ಸೋಂಕು ಹರಡುವ ವಾಹಕಗಳು. ಅತ್ಯಾಚಾರಕ್ಕೊಳಗಾದವರು ಇವರಿಗೆ ಯಾರೂ ಅಲ್ಲ. ಪ್ರತಿಭಟನಾ ನಿರತ ರೈತರು ಖಲಿಸ್ತಾನಿಗಳು. ಆದರೆ, ಆಪ್ತ ಬಂಡವಾಳಶಾಹಿಗಳು ಉತ್ತಮ ಸ್ನೇಹಿತರು” ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಸುಮಾರು 32 ರೈತ ಸಂಘಗಳ ಮುಖಂಡರು ದೆಹಲಿಯ ಸಿಂಘು ಗಡಿಯಲ್ಲಿ ಸೋಮವಾರ ಉಪವಾಸ ಸತ್ಯಾಗ್ರಹವನ್ನು ಆಚರಿಸಿದರು. ರೈತರನ್ನು ಬೆಂಬಲಿಸಿ ದೇಶಾದ್ಯಂತ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹ, ಪ್ರತಿಭಟನೆಗಳು ನಡೆದಿವೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ

PC: ANI

ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೆವಾಲಾ, “73 ವರ್ಷಗಳಲ್ಲಿ ಮೊದಲ ಬಾರಿಗೆ ರಾಷ್ಟ್ರವನ್ನು ಪೋಷಿಸುವ ರೈತರು ದೇಶಾದ್ಯಂತ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಇನ್ನೂ ಎಷ್ಟು ‘ಅಚ್ಚೆ ದಿನ್’  ತರುತ್ತೀರಿ ಮೋದಿಯವರೇ?” ಎಂದು ಪ್ರಶ್ನಿಸಿದ್ದರು.

“ಚುನಾವಣೆಗೆ ಹಣಕಾಸು ಒದಗಿಸುವವರ ಕೈಬಿಟ್ಟು, ಅನ್ನದಾತರ ಕೈಗಳನ್ನು ಹಿಡಿದುಕೊಳ್ಳಿ, ಅವರ ಕಣ್ಣೀರನ್ನು ಒರೆಸಿ, ಕ್ಷಮೆಯಾಚಿಸಿ, ಮೂರು ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಿ” ಎಂದು ಸುರ್ಜೆವಾಲಾ ಆಗ್ರಹಿಸಿದ್ದರು.


ಇದನ್ನೂ ಓದಿ: ರೈತರ ಪ್ರತಿಭಟನೆಗೆ ಹೋಗುವವರಿಗೆ 100 ಲೀ.ಪೆಟ್ರೋಲ್ ಉಚಿತ- ಹರಿಯಾಣ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...