Homeಮುಖಪುಟಕೃಷಿ ತ್ಯಾಜ್ಯ ಸುಡುವ ರೈತರಿಗೆ ದಂಡ ದ್ವಿಗುಣಗೊಳಿಸಿದ ಕೇಂದ್ರ ಸರ್ಕಾರ

ಕೃಷಿ ತ್ಯಾಜ್ಯ ಸುಡುವ ರೈತರಿಗೆ ದಂಡ ದ್ವಿಗುಣಗೊಳಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ರಾಜಧಾನಿ ದೆಹಲಿಯಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟದ ಹಿನ್ನಲೆ, ಕೃಷಿ ತ್ಯಾಜ್ಯಗಳನ್ನು ಸುಡುವ ರೈತರಿಗೆ ವಿಧಿಸುವ ದಂಡವನ್ನು ಕೇಂದ್ರ ಸರ್ಕಾರ ಗುರುವಾರ ದ್ವಿಗುಣಗೊಳಿಸಿದೆ. “ಐದು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವ ರೈತರು 30,000 ರೂ. ದಂಡವನ್ನು ಪಾವತಿಸಬೇಕಾಗುತ್ತದೆ” ಎಂದು ಬುಧವಾರ ಕೇಂದ್ರ ಸರ್ಕಾರ ಪ್ರಕಟಿಸಿದ ಅಧಿಸೂಚನೆ ಹೇಳಿದೆ. ಕೃಷಿ ತ್ಯಾಜ್ಯ

ಅಧಿಸೂಚಣೆಯಲ್ಲಿ, ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು 5,000 ರೂಪಾಯಿಗಳ ಪರಿಸರ ಪರಿಹಾರವನ್ನು ಪಾವತಿಸಬೇಕಾಗುತ್ತದೆ. ಈ ಹಿಂದೆ ಈ ವರ್ಗದ ರೈತರು 2500 ರೂ. ದಂಡ ಪಾವತಿಸಬೇಕಾಗಿತ್ತು. ಎರಡರಿಂದ ಐದು ಎಕರೆ ಜಮೀನು ಹೊಂದಿರುವ ರೈತರು ಹಿಂದೆ 5 ಸಾವಿರ ದಂಡ ಪಾವತಿಸಬೇಕಾಗಿತ್ತು, ಆದರೆ ಇಂದಿನಿಂದ ಅದರ ದಂಡ 10 ಸಾವಿರ ರೂ.ಗಳಿಗೆ ಏರಿಸಲಾಗಿದೆ. ಕೃಷಿ ತ್ಯಾಜ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಂಜಾಬ್ ಮತ್ತು ಹರಿಯಾಣದಲ್ಲಿ ಕೃಷಿ ತ್ಯಾಜ್ಯಗಳನ್ನು ಸುಡುವ ಘಟನೆಗಳ ಸಂಖ್ಯೆಯು ಹೆಚ್ಚಾದರೆ ನವೆಂಬರ್ 1 ರಿಂದ 15 ರವರೆಗೆ ದೆಹಲಿಯು ಗರಿಷ್ಠ ಮಟ್ಟದ ಮಾಲಿನ್ಯವನ್ನು ಅನುಭವಿಸುತ್ತದೆ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ (DPCC) ವಿಶ್ಲೇಷಣೆ ಹೇಳಿದೆ.

ಭತ್ತ-ಗೋಧಿ ಬೆಳೆ ಪದ್ಧತಿ, ದೀರ್ಘಾವಧಿಯ ಭತ್ತದ ತಳಿಗಳ ಬೇಸಾಯ, ಯಾಂತ್ರೀಕೃತ ಕೊಯ್ಲು, ಹೊಲದಲ್ಲಿ ಬೆಳೆದಿರುವ ಕೊಯ್ಲು, ಕಾರ್ಮಿಕರ ಕೊರತೆ, ಮತ್ತು ಕೃಷಿ ತ್ಯಾಜ್ಯಕ್ಕೆ ಮಾರುಕಟ್ಟೆಯ ಕೊರತೆ ಮುಂತಾದ ಸಮಸ್ಯೆಗಳ ಕಾರಣಕ್ಕೆ ಅದನ್ನು ಸುಡುಡಕಲಾಗುತ್ತದೆ ಎನ್ನಲಾಗಿದೆ.

ಈ ಅವಶೇಷಗಳನ್ನು ಹೆಚ್ಚಾಗಿ ಸುಡುವ ಅವಧಿಯಲ್ಲಿ, ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗುವ ವಾಯು ಮಾಲಿನ್ಯಕ್ಕೆ 30% ದಷ್ಟು ಕೊಡುಗೆ ನೀಡುತ್ತದೆ ಎಂದು ಅಧ್ಯಯನಗಳು ಅಂದಾಜಿಸಿವೆ.

ಅದಾಗ್ಯೂ ಈ ವಾದವನ್ನು ಪರಿಸರ ತಜ್ಞರು ಅಲ್ಲಗೆಳೆದಿದ್ದು, ಹಿರಿಯ ಪರಿಸರವಾದಿ ಸುನೀತಾ ನಾರಾಯಣ್ ಅವರು, “ಚಳಿಗಾಲದ ಸಮಯ ರೈತರು ಕೃಷಿ ತ್ಯಾಜ್ಯವನ್ನು ವ್ಯಾಪಕವಾಗಿ ಸುಡುವುದಕ್ಕೆ ಮಾತ್ರ ದೆಹಲಿಯಲ್ಲಿ ವಾಯು ಮಾಲಿನ್ಯ ಆಗುತ್ತಿಲ್ಲ. ಬದಲಾಗಿ, ದೆಹಲಿಯ ಸಾರಿಗೆ ಮತ್ತು ಕೈಗಾರಿಕೆಗಳು ಸೇರಿದಂತೆ ನಗರದೊಳಗಿನ ನಿರಂತರ ಮಾಲಿನ್ಯದ ಕಾರಣಕ್ಕೆ ಇದು ನಡೆಯುತ್ತದೆ” ಎಂದು ಹೇಳುತ್ತಾರೆ.

ಇದನ್ನೂ ಓದಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....