Homeಮುಖಪುಟಕೃಷಿ ತ್ಯಾಜ್ಯ ಸುಡುವ ರೈತರಿಗೆ ದಂಡ ದ್ವಿಗುಣಗೊಳಿಸಿದ ಕೇಂದ್ರ ಸರ್ಕಾರ

ಕೃಷಿ ತ್ಯಾಜ್ಯ ಸುಡುವ ರೈತರಿಗೆ ದಂಡ ದ್ವಿಗುಣಗೊಳಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ರಾಜಧಾನಿ ದೆಹಲಿಯಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟದ ಹಿನ್ನಲೆ, ಕೃಷಿ ತ್ಯಾಜ್ಯಗಳನ್ನು ಸುಡುವ ರೈತರಿಗೆ ವಿಧಿಸುವ ದಂಡವನ್ನು ಕೇಂದ್ರ ಸರ್ಕಾರ ಗುರುವಾರ ದ್ವಿಗುಣಗೊಳಿಸಿದೆ. “ಐದು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವ ರೈತರು 30,000 ರೂ. ದಂಡವನ್ನು ಪಾವತಿಸಬೇಕಾಗುತ್ತದೆ” ಎಂದು ಬುಧವಾರ ಕೇಂದ್ರ ಸರ್ಕಾರ ಪ್ರಕಟಿಸಿದ ಅಧಿಸೂಚನೆ ಹೇಳಿದೆ. ಕೃಷಿ ತ್ಯಾಜ್ಯ

ಅಧಿಸೂಚಣೆಯಲ್ಲಿ, ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು 5,000 ರೂಪಾಯಿಗಳ ಪರಿಸರ ಪರಿಹಾರವನ್ನು ಪಾವತಿಸಬೇಕಾಗುತ್ತದೆ. ಈ ಹಿಂದೆ ಈ ವರ್ಗದ ರೈತರು 2500 ರೂ. ದಂಡ ಪಾವತಿಸಬೇಕಾಗಿತ್ತು. ಎರಡರಿಂದ ಐದು ಎಕರೆ ಜಮೀನು ಹೊಂದಿರುವ ರೈತರು ಹಿಂದೆ 5 ಸಾವಿರ ದಂಡ ಪಾವತಿಸಬೇಕಾಗಿತ್ತು, ಆದರೆ ಇಂದಿನಿಂದ ಅದರ ದಂಡ 10 ಸಾವಿರ ರೂ.ಗಳಿಗೆ ಏರಿಸಲಾಗಿದೆ. ಕೃಷಿ ತ್ಯಾಜ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಂಜಾಬ್ ಮತ್ತು ಹರಿಯಾಣದಲ್ಲಿ ಕೃಷಿ ತ್ಯಾಜ್ಯಗಳನ್ನು ಸುಡುವ ಘಟನೆಗಳ ಸಂಖ್ಯೆಯು ಹೆಚ್ಚಾದರೆ ನವೆಂಬರ್ 1 ರಿಂದ 15 ರವರೆಗೆ ದೆಹಲಿಯು ಗರಿಷ್ಠ ಮಟ್ಟದ ಮಾಲಿನ್ಯವನ್ನು ಅನುಭವಿಸುತ್ತದೆ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ (DPCC) ವಿಶ್ಲೇಷಣೆ ಹೇಳಿದೆ.

ಭತ್ತ-ಗೋಧಿ ಬೆಳೆ ಪದ್ಧತಿ, ದೀರ್ಘಾವಧಿಯ ಭತ್ತದ ತಳಿಗಳ ಬೇಸಾಯ, ಯಾಂತ್ರೀಕೃತ ಕೊಯ್ಲು, ಹೊಲದಲ್ಲಿ ಬೆಳೆದಿರುವ ಕೊಯ್ಲು, ಕಾರ್ಮಿಕರ ಕೊರತೆ, ಮತ್ತು ಕೃಷಿ ತ್ಯಾಜ್ಯಕ್ಕೆ ಮಾರುಕಟ್ಟೆಯ ಕೊರತೆ ಮುಂತಾದ ಸಮಸ್ಯೆಗಳ ಕಾರಣಕ್ಕೆ ಅದನ್ನು ಸುಡುಡಕಲಾಗುತ್ತದೆ ಎನ್ನಲಾಗಿದೆ.

ಈ ಅವಶೇಷಗಳನ್ನು ಹೆಚ್ಚಾಗಿ ಸುಡುವ ಅವಧಿಯಲ್ಲಿ, ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗುವ ವಾಯು ಮಾಲಿನ್ಯಕ್ಕೆ 30% ದಷ್ಟು ಕೊಡುಗೆ ನೀಡುತ್ತದೆ ಎಂದು ಅಧ್ಯಯನಗಳು ಅಂದಾಜಿಸಿವೆ.

ಅದಾಗ್ಯೂ ಈ ವಾದವನ್ನು ಪರಿಸರ ತಜ್ಞರು ಅಲ್ಲಗೆಳೆದಿದ್ದು, ಹಿರಿಯ ಪರಿಸರವಾದಿ ಸುನೀತಾ ನಾರಾಯಣ್ ಅವರು, “ಚಳಿಗಾಲದ ಸಮಯ ರೈತರು ಕೃಷಿ ತ್ಯಾಜ್ಯವನ್ನು ವ್ಯಾಪಕವಾಗಿ ಸುಡುವುದಕ್ಕೆ ಮಾತ್ರ ದೆಹಲಿಯಲ್ಲಿ ವಾಯು ಮಾಲಿನ್ಯ ಆಗುತ್ತಿಲ್ಲ. ಬದಲಾಗಿ, ದೆಹಲಿಯ ಸಾರಿಗೆ ಮತ್ತು ಕೈಗಾರಿಕೆಗಳು ಸೇರಿದಂತೆ ನಗರದೊಳಗಿನ ನಿರಂತರ ಮಾಲಿನ್ಯದ ಕಾರಣಕ್ಕೆ ಇದು ನಡೆಯುತ್ತದೆ” ಎಂದು ಹೇಳುತ್ತಾರೆ.

ಇದನ್ನೂ ಓದಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...