Homeಕರ್ನಾಟಕಮುಂದಿನ ವರ್ಷದಿಂದ 'ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್' ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಈ ವರ್ಷ ಪ್ರಾಯೋಗಿಕವಾಗಿ ಆರಂಭಿಸಿದ್ದರೂ, ಮುಂದಿನ ವರ್ಷ ರೈತರೇ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕು ಎಂದು ಕೃಷಿ ಸಚಿವರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ಜಂಟಿಯಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಿದ್ದು, ಆ್ಯಪ್ ಮೂಲಕ ರಾಜ್ಯದಲ್ಲಿ ಬಿತ್ತನೆಯಾಗಿರೋ ಬೆಳೆಗಳ ಕುರಿತು ನಿಖರ ಮಾಹಿತಿ ಕಲೆಹಾಕಲು ನಿರ್ಧರಿಸಲಾಗಿದೆ. ಆದರೆ ಈ ಆ್ಯಪ್‌ ಮೂಲಕ ತಾವು ಹೊಲಗಳಲ್ಲಿ ಬೆಳೆಯುತ್ತಿರುವ ಬೆಳೆ ಬಗ್ಗೆ ರೈತರೇ ಸಂಪೂರ್ಣ ಮಾಹಿತಿ ಒದಗಿಸಬೇಕಾಗುತ್ತದೆ.

ತಮ್ಮ ಹೊಲಗಳಿಗೆ ಹೋಗಿ ಫೋಟೋ ತೆಗೆದು ಆಪ್‌ಲೋಡ್ ಮಾಡುವ ಜೊತೆಗೆ ಆ್ಯಪ್‌‌ನಲ್ಲಿ ಕೇಳಲಾದ ಪ್ರಶ್ನೆಗಳಿಗೂ ಅಲ್ಲಿಯೇ ಉತ್ತರ ನೀಡಬೇಕು. ಏಕೆಂದರೆ, ಜಿಪಿಎಸ್ ಮೂಲಕ ಹೊಲ ಇರುವ ಗ್ರಾಮ, ಹೋಬಳಿ, ಸರ್ವೆ ನಂಬರ್ ಇತ್ಯಾದಿ ವಿವರಗಳನ್ನು ತಾಳೆ ಮಾಡಿ ನೋಡಬೇಕಾದ ಕಾರಣ ಸರ್ವೆ ನಂಬರ್ ನೀಡಿರುವ ಹೊಲದಿಂದಲೇ ಎಲ್ಲ ವಿವರ ತುಂಬಬೇಕು. ಇಲ್ಲದಿದ್ದರೇ ಬೆಳೆ ವಿಮೆಯಾಗಲಿ, ಪರಿಹಾರವಾಗಲಿ ರೈತರಿಗೆ ಸಿಗುವುದಿಲ್ಲ.

ಆದರೆ ವಿವರ ತುಂಬಲು ನೀಡಲಾಗಿದ್ದ ಅವಧಿ ಮುಗಿದು, ದಿನಾಂಕ ವಿಸ್ತರಿಸಿದ್ದರೂ ಶೇಕಡಾ 50 ರಷ್ಟು ರೈತರು ಇದನ್ನು ಬಳಸಿಲ್ಲ. ಕಾರಣಗಳು ಅನೇಕ ಆ್ಯಪ್‌ಗಳನ್ನು ಬಳಸುವಷ್ಟು ತಾಂತ್ರಿಕ ಅರಿವು ರೈತರಿಗೆ ಇಲ್ಲದಿರುವುದು. ಹಳ್ಳಿಗಳಲ್ಲಿ ಸರಿಯಾದ ಇಂಟರ್‌ನೆಟ್ ಸಂಪರ್ಕ ಸಿಗದೇ ಇರುವುದು ದೊಡ್ಡ ಕಾರಣವಾಗಿವೆ.

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಆ್ಯಪ್‌ ಬಳಸಲು ರೈತರಿಗೆ ಕಷ್ಟವಾಗುವಂತಿದೆ. ಕಾರಣ ಇಲ್ಲಿನ ಹಂತಗಳು ಮತ್ತು ಗುಣಮಟ್ಟದ ಇಂಟರ್‌ನೆಟ್‌ ಕಡ್ಡಾಯವಾಗಿರುವುದು. ಆದರೂ ಕೃಷಿ ಸಚಿವರು ಮಾತ್ರ ಇದರಿಂದ ರೈತರಿಗೆ ಲಾಭ ಎನ್ನುತ್ತಲೇ ಇದ್ದಾರೆ.

ಇಂದು ಜಿಕೆವಿಕೆಯಲ್ಲಿ ನಡೆದ  ರಾಜ್ಯದ ಎಲ್ಲ ಜಿಲ್ಲೆಗಳ ಕೃಷಿ ಅಧಿಕಾರಿಗಳ ಪ್ರಗತಿಪರಿಶೀಲನೆ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್‌‌ ಮಾತನಾಡಿ, ಈ ವರ್ಷ ತಂತ್ರಜ್ಞಾನ ಬಳಕೆಯ ತೊಡಕು ಮತ್ತು ಮಳೆಯಿಂದ ತೊಂದರೆ ಆಗಿರಬಹುದು. ಆದರೆ, ಬಹುತೇಕ ಕಡೆಗಳಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ ಎಂದರು.

PC: twitter@Kourava B.C.Patil

ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಈ ವರ್ಷ ಪ್ರಾಯೋಗಿಕವಾಗಿ ಆರಂಭಿಸಿದ್ದರೂ ಮುಂದಿನ ವರ್ಷ ರೈತರು ತಾವೇ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕು ಎಂದು ಕೃಷಿ ಸಚಿವರು ಹೇಳಿದ್ದಾರೆ.

ಸರ್ಕಾರದ ಸೌಲಭ್ಯಗಳನ್ನು ಪಡೆಯಲು ರೈತರು ಆ್ಯಪ್‌ ಮೂಲಕ ತಪ್ಪದೇ ಬೆಳೆ ಸಮೀಕ್ಷೆ ನಡೆಸಬೇಕು. ರೈತರೇ ಸ್ವಯಂ ಬೆಳೆ ಸಮೀಕ್ಷೆ ನಡೆಸುವುದಕ್ಕೆ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕು. ಹೆಚ್ಚು ಹೆಚ್ಚು ರೈತರು ಬೆಳೆ ಸಮೀಕ್ಷೆ ನಡೆಸಲು ಅಧಿಕಾರಿಗಳು ಆಸಕ್ತಿ ವಹಿಸಿ ಕೆಲಸ ಮಾಡಬೇಕು ಎಂದರು.

ಇನ್ನು ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ನಿಜಕ್ಕೂ ಯೂರಿಯಾ, ರಸಗೊಬ್ಬರದ ಕೊರತೆಯಿಲ್ಲ. ಸರಬರಾಜು ಹಂಚಿಕೆಯಲ್ಲಿ ಎಲ್ಲೋ‌ ಒಂದೆರಡು ಕಡೆ ವಿಳಂಬವಾಗಿರಬಹುದು. ಆದರೆ ಕೊರತೆಯಿಲ್ಲ. ಕಾಳಸಂತೆಕೋರರು ಮತ್ತು ಸುಳ್ಳು ಸುದ್ದಿಹಬ್ಬಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕೆಲ ದಿನಗಳ ಹಿಂದಷ್ಟೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯೂರಿಯಾ ಕೊರತೆ ನೀಗಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...