Homeಕರ್ನಾಟಕಮುಂದಿನ ವರ್ಷದಿಂದ 'ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್' ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಈ ವರ್ಷ ಪ್ರಾಯೋಗಿಕವಾಗಿ ಆರಂಭಿಸಿದ್ದರೂ, ಮುಂದಿನ ವರ್ಷ ರೈತರೇ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕು ಎಂದು ಕೃಷಿ ಸಚಿವರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ಜಂಟಿಯಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಿದ್ದು, ಆ್ಯಪ್ ಮೂಲಕ ರಾಜ್ಯದಲ್ಲಿ ಬಿತ್ತನೆಯಾಗಿರೋ ಬೆಳೆಗಳ ಕುರಿತು ನಿಖರ ಮಾಹಿತಿ ಕಲೆಹಾಕಲು ನಿರ್ಧರಿಸಲಾಗಿದೆ. ಆದರೆ ಈ ಆ್ಯಪ್‌ ಮೂಲಕ ತಾವು ಹೊಲಗಳಲ್ಲಿ ಬೆಳೆಯುತ್ತಿರುವ ಬೆಳೆ ಬಗ್ಗೆ ರೈತರೇ ಸಂಪೂರ್ಣ ಮಾಹಿತಿ ಒದಗಿಸಬೇಕಾಗುತ್ತದೆ.

ತಮ್ಮ ಹೊಲಗಳಿಗೆ ಹೋಗಿ ಫೋಟೋ ತೆಗೆದು ಆಪ್‌ಲೋಡ್ ಮಾಡುವ ಜೊತೆಗೆ ಆ್ಯಪ್‌‌ನಲ್ಲಿ ಕೇಳಲಾದ ಪ್ರಶ್ನೆಗಳಿಗೂ ಅಲ್ಲಿಯೇ ಉತ್ತರ ನೀಡಬೇಕು. ಏಕೆಂದರೆ, ಜಿಪಿಎಸ್ ಮೂಲಕ ಹೊಲ ಇರುವ ಗ್ರಾಮ, ಹೋಬಳಿ, ಸರ್ವೆ ನಂಬರ್ ಇತ್ಯಾದಿ ವಿವರಗಳನ್ನು ತಾಳೆ ಮಾಡಿ ನೋಡಬೇಕಾದ ಕಾರಣ ಸರ್ವೆ ನಂಬರ್ ನೀಡಿರುವ ಹೊಲದಿಂದಲೇ ಎಲ್ಲ ವಿವರ ತುಂಬಬೇಕು. ಇಲ್ಲದಿದ್ದರೇ ಬೆಳೆ ವಿಮೆಯಾಗಲಿ, ಪರಿಹಾರವಾಗಲಿ ರೈತರಿಗೆ ಸಿಗುವುದಿಲ್ಲ.

ಆದರೆ ವಿವರ ತುಂಬಲು ನೀಡಲಾಗಿದ್ದ ಅವಧಿ ಮುಗಿದು, ದಿನಾಂಕ ವಿಸ್ತರಿಸಿದ್ದರೂ ಶೇಕಡಾ 50 ರಷ್ಟು ರೈತರು ಇದನ್ನು ಬಳಸಿಲ್ಲ. ಕಾರಣಗಳು ಅನೇಕ ಆ್ಯಪ್‌ಗಳನ್ನು ಬಳಸುವಷ್ಟು ತಾಂತ್ರಿಕ ಅರಿವು ರೈತರಿಗೆ ಇಲ್ಲದಿರುವುದು. ಹಳ್ಳಿಗಳಲ್ಲಿ ಸರಿಯಾದ ಇಂಟರ್‌ನೆಟ್ ಸಂಪರ್ಕ ಸಿಗದೇ ಇರುವುದು ದೊಡ್ಡ ಕಾರಣವಾಗಿವೆ.

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಆ್ಯಪ್‌ ಬಳಸಲು ರೈತರಿಗೆ ಕಷ್ಟವಾಗುವಂತಿದೆ. ಕಾರಣ ಇಲ್ಲಿನ ಹಂತಗಳು ಮತ್ತು ಗುಣಮಟ್ಟದ ಇಂಟರ್‌ನೆಟ್‌ ಕಡ್ಡಾಯವಾಗಿರುವುದು. ಆದರೂ ಕೃಷಿ ಸಚಿವರು ಮಾತ್ರ ಇದರಿಂದ ರೈತರಿಗೆ ಲಾಭ ಎನ್ನುತ್ತಲೇ ಇದ್ದಾರೆ.

ಇಂದು ಜಿಕೆವಿಕೆಯಲ್ಲಿ ನಡೆದ  ರಾಜ್ಯದ ಎಲ್ಲ ಜಿಲ್ಲೆಗಳ ಕೃಷಿ ಅಧಿಕಾರಿಗಳ ಪ್ರಗತಿಪರಿಶೀಲನೆ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್‌‌ ಮಾತನಾಡಿ, ಈ ವರ್ಷ ತಂತ್ರಜ್ಞಾನ ಬಳಕೆಯ ತೊಡಕು ಮತ್ತು ಮಳೆಯಿಂದ ತೊಂದರೆ ಆಗಿರಬಹುದು. ಆದರೆ, ಬಹುತೇಕ ಕಡೆಗಳಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ ಎಂದರು.

PC: twitter@Kourava B.C.Patil

ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಈ ವರ್ಷ ಪ್ರಾಯೋಗಿಕವಾಗಿ ಆರಂಭಿಸಿದ್ದರೂ ಮುಂದಿನ ವರ್ಷ ರೈತರು ತಾವೇ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕು ಎಂದು ಕೃಷಿ ಸಚಿವರು ಹೇಳಿದ್ದಾರೆ.

ಸರ್ಕಾರದ ಸೌಲಭ್ಯಗಳನ್ನು ಪಡೆಯಲು ರೈತರು ಆ್ಯಪ್‌ ಮೂಲಕ ತಪ್ಪದೇ ಬೆಳೆ ಸಮೀಕ್ಷೆ ನಡೆಸಬೇಕು. ರೈತರೇ ಸ್ವಯಂ ಬೆಳೆ ಸಮೀಕ್ಷೆ ನಡೆಸುವುದಕ್ಕೆ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕು. ಹೆಚ್ಚು ಹೆಚ್ಚು ರೈತರು ಬೆಳೆ ಸಮೀಕ್ಷೆ ನಡೆಸಲು ಅಧಿಕಾರಿಗಳು ಆಸಕ್ತಿ ವಹಿಸಿ ಕೆಲಸ ಮಾಡಬೇಕು ಎಂದರು.

ಇನ್ನು ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ನಿಜಕ್ಕೂ ಯೂರಿಯಾ, ರಸಗೊಬ್ಬರದ ಕೊರತೆಯಿಲ್ಲ. ಸರಬರಾಜು ಹಂಚಿಕೆಯಲ್ಲಿ ಎಲ್ಲೋ‌ ಒಂದೆರಡು ಕಡೆ ವಿಳಂಬವಾಗಿರಬಹುದು. ಆದರೆ ಕೊರತೆಯಿಲ್ಲ. ಕಾಳಸಂತೆಕೋರರು ಮತ್ತು ಸುಳ್ಳು ಸುದ್ದಿಹಬ್ಬಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕೆಲ ದಿನಗಳ ಹಿಂದಷ್ಟೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯೂರಿಯಾ ಕೊರತೆ ನೀಗಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...