Homeಕರ್ನಾಟಕಮುಂದಿನ ವರ್ಷದಿಂದ 'ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್' ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಈ ವರ್ಷ ಪ್ರಾಯೋಗಿಕವಾಗಿ ಆರಂಭಿಸಿದ್ದರೂ, ಮುಂದಿನ ವರ್ಷ ರೈತರೇ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕು ಎಂದು ಕೃಷಿ ಸಚಿವರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ಜಂಟಿಯಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಿದ್ದು, ಆ್ಯಪ್ ಮೂಲಕ ರಾಜ್ಯದಲ್ಲಿ ಬಿತ್ತನೆಯಾಗಿರೋ ಬೆಳೆಗಳ ಕುರಿತು ನಿಖರ ಮಾಹಿತಿ ಕಲೆಹಾಕಲು ನಿರ್ಧರಿಸಲಾಗಿದೆ. ಆದರೆ ಈ ಆ್ಯಪ್‌ ಮೂಲಕ ತಾವು ಹೊಲಗಳಲ್ಲಿ ಬೆಳೆಯುತ್ತಿರುವ ಬೆಳೆ ಬಗ್ಗೆ ರೈತರೇ ಸಂಪೂರ್ಣ ಮಾಹಿತಿ ಒದಗಿಸಬೇಕಾಗುತ್ತದೆ.

ತಮ್ಮ ಹೊಲಗಳಿಗೆ ಹೋಗಿ ಫೋಟೋ ತೆಗೆದು ಆಪ್‌ಲೋಡ್ ಮಾಡುವ ಜೊತೆಗೆ ಆ್ಯಪ್‌‌ನಲ್ಲಿ ಕೇಳಲಾದ ಪ್ರಶ್ನೆಗಳಿಗೂ ಅಲ್ಲಿಯೇ ಉತ್ತರ ನೀಡಬೇಕು. ಏಕೆಂದರೆ, ಜಿಪಿಎಸ್ ಮೂಲಕ ಹೊಲ ಇರುವ ಗ್ರಾಮ, ಹೋಬಳಿ, ಸರ್ವೆ ನಂಬರ್ ಇತ್ಯಾದಿ ವಿವರಗಳನ್ನು ತಾಳೆ ಮಾಡಿ ನೋಡಬೇಕಾದ ಕಾರಣ ಸರ್ವೆ ನಂಬರ್ ನೀಡಿರುವ ಹೊಲದಿಂದಲೇ ಎಲ್ಲ ವಿವರ ತುಂಬಬೇಕು. ಇಲ್ಲದಿದ್ದರೇ ಬೆಳೆ ವಿಮೆಯಾಗಲಿ, ಪರಿಹಾರವಾಗಲಿ ರೈತರಿಗೆ ಸಿಗುವುದಿಲ್ಲ.

ಆದರೆ ವಿವರ ತುಂಬಲು ನೀಡಲಾಗಿದ್ದ ಅವಧಿ ಮುಗಿದು, ದಿನಾಂಕ ವಿಸ್ತರಿಸಿದ್ದರೂ ಶೇಕಡಾ 50 ರಷ್ಟು ರೈತರು ಇದನ್ನು ಬಳಸಿಲ್ಲ. ಕಾರಣಗಳು ಅನೇಕ ಆ್ಯಪ್‌ಗಳನ್ನು ಬಳಸುವಷ್ಟು ತಾಂತ್ರಿಕ ಅರಿವು ರೈತರಿಗೆ ಇಲ್ಲದಿರುವುದು. ಹಳ್ಳಿಗಳಲ್ಲಿ ಸರಿಯಾದ ಇಂಟರ್‌ನೆಟ್ ಸಂಪರ್ಕ ಸಿಗದೇ ಇರುವುದು ದೊಡ್ಡ ಕಾರಣವಾಗಿವೆ.

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಆ್ಯಪ್‌ ಬಳಸಲು ರೈತರಿಗೆ ಕಷ್ಟವಾಗುವಂತಿದೆ. ಕಾರಣ ಇಲ್ಲಿನ ಹಂತಗಳು ಮತ್ತು ಗುಣಮಟ್ಟದ ಇಂಟರ್‌ನೆಟ್‌ ಕಡ್ಡಾಯವಾಗಿರುವುದು. ಆದರೂ ಕೃಷಿ ಸಚಿವರು ಮಾತ್ರ ಇದರಿಂದ ರೈತರಿಗೆ ಲಾಭ ಎನ್ನುತ್ತಲೇ ಇದ್ದಾರೆ.

ಇಂದು ಜಿಕೆವಿಕೆಯಲ್ಲಿ ನಡೆದ  ರಾಜ್ಯದ ಎಲ್ಲ ಜಿಲ್ಲೆಗಳ ಕೃಷಿ ಅಧಿಕಾರಿಗಳ ಪ್ರಗತಿಪರಿಶೀಲನೆ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್‌‌ ಮಾತನಾಡಿ, ಈ ವರ್ಷ ತಂತ್ರಜ್ಞಾನ ಬಳಕೆಯ ತೊಡಕು ಮತ್ತು ಮಳೆಯಿಂದ ತೊಂದರೆ ಆಗಿರಬಹುದು. ಆದರೆ, ಬಹುತೇಕ ಕಡೆಗಳಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ ಎಂದರು.

PC: twitter@Kourava B.C.Patil

ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಈ ವರ್ಷ ಪ್ರಾಯೋಗಿಕವಾಗಿ ಆರಂಭಿಸಿದ್ದರೂ ಮುಂದಿನ ವರ್ಷ ರೈತರು ತಾವೇ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕು ಎಂದು ಕೃಷಿ ಸಚಿವರು ಹೇಳಿದ್ದಾರೆ.

ಸರ್ಕಾರದ ಸೌಲಭ್ಯಗಳನ್ನು ಪಡೆಯಲು ರೈತರು ಆ್ಯಪ್‌ ಮೂಲಕ ತಪ್ಪದೇ ಬೆಳೆ ಸಮೀಕ್ಷೆ ನಡೆಸಬೇಕು. ರೈತರೇ ಸ್ವಯಂ ಬೆಳೆ ಸಮೀಕ್ಷೆ ನಡೆಸುವುದಕ್ಕೆ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕು. ಹೆಚ್ಚು ಹೆಚ್ಚು ರೈತರು ಬೆಳೆ ಸಮೀಕ್ಷೆ ನಡೆಸಲು ಅಧಿಕಾರಿಗಳು ಆಸಕ್ತಿ ವಹಿಸಿ ಕೆಲಸ ಮಾಡಬೇಕು ಎಂದರು.

ಇನ್ನು ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ನಿಜಕ್ಕೂ ಯೂರಿಯಾ, ರಸಗೊಬ್ಬರದ ಕೊರತೆಯಿಲ್ಲ. ಸರಬರಾಜು ಹಂಚಿಕೆಯಲ್ಲಿ ಎಲ್ಲೋ‌ ಒಂದೆರಡು ಕಡೆ ವಿಳಂಬವಾಗಿರಬಹುದು. ಆದರೆ ಕೊರತೆಯಿಲ್ಲ. ಕಾಳಸಂತೆಕೋರರು ಮತ್ತು ಸುಳ್ಳು ಸುದ್ದಿಹಬ್ಬಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕೆಲ ದಿನಗಳ ಹಿಂದಷ್ಟೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯೂರಿಯಾ ಕೊರತೆ ನೀಗಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...