Homeಕರ್ನಾಟಕಮುಂದಿನ ವರ್ಷದಿಂದ 'ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್' ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಈ ವರ್ಷ ಪ್ರಾಯೋಗಿಕವಾಗಿ ಆರಂಭಿಸಿದ್ದರೂ, ಮುಂದಿನ ವರ್ಷ ರೈತರೇ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕು ಎಂದು ಕೃಷಿ ಸಚಿವರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ಜಂಟಿಯಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಿದ್ದು, ಆ್ಯಪ್ ಮೂಲಕ ರಾಜ್ಯದಲ್ಲಿ ಬಿತ್ತನೆಯಾಗಿರೋ ಬೆಳೆಗಳ ಕುರಿತು ನಿಖರ ಮಾಹಿತಿ ಕಲೆಹಾಕಲು ನಿರ್ಧರಿಸಲಾಗಿದೆ. ಆದರೆ ಈ ಆ್ಯಪ್‌ ಮೂಲಕ ತಾವು ಹೊಲಗಳಲ್ಲಿ ಬೆಳೆಯುತ್ತಿರುವ ಬೆಳೆ ಬಗ್ಗೆ ರೈತರೇ ಸಂಪೂರ್ಣ ಮಾಹಿತಿ ಒದಗಿಸಬೇಕಾಗುತ್ತದೆ.

ತಮ್ಮ ಹೊಲಗಳಿಗೆ ಹೋಗಿ ಫೋಟೋ ತೆಗೆದು ಆಪ್‌ಲೋಡ್ ಮಾಡುವ ಜೊತೆಗೆ ಆ್ಯಪ್‌‌ನಲ್ಲಿ ಕೇಳಲಾದ ಪ್ರಶ್ನೆಗಳಿಗೂ ಅಲ್ಲಿಯೇ ಉತ್ತರ ನೀಡಬೇಕು. ಏಕೆಂದರೆ, ಜಿಪಿಎಸ್ ಮೂಲಕ ಹೊಲ ಇರುವ ಗ್ರಾಮ, ಹೋಬಳಿ, ಸರ್ವೆ ನಂಬರ್ ಇತ್ಯಾದಿ ವಿವರಗಳನ್ನು ತಾಳೆ ಮಾಡಿ ನೋಡಬೇಕಾದ ಕಾರಣ ಸರ್ವೆ ನಂಬರ್ ನೀಡಿರುವ ಹೊಲದಿಂದಲೇ ಎಲ್ಲ ವಿವರ ತುಂಬಬೇಕು. ಇಲ್ಲದಿದ್ದರೇ ಬೆಳೆ ವಿಮೆಯಾಗಲಿ, ಪರಿಹಾರವಾಗಲಿ ರೈತರಿಗೆ ಸಿಗುವುದಿಲ್ಲ.

ಆದರೆ ವಿವರ ತುಂಬಲು ನೀಡಲಾಗಿದ್ದ ಅವಧಿ ಮುಗಿದು, ದಿನಾಂಕ ವಿಸ್ತರಿಸಿದ್ದರೂ ಶೇಕಡಾ 50 ರಷ್ಟು ರೈತರು ಇದನ್ನು ಬಳಸಿಲ್ಲ. ಕಾರಣಗಳು ಅನೇಕ ಆ್ಯಪ್‌ಗಳನ್ನು ಬಳಸುವಷ್ಟು ತಾಂತ್ರಿಕ ಅರಿವು ರೈತರಿಗೆ ಇಲ್ಲದಿರುವುದು. ಹಳ್ಳಿಗಳಲ್ಲಿ ಸರಿಯಾದ ಇಂಟರ್‌ನೆಟ್ ಸಂಪರ್ಕ ಸಿಗದೇ ಇರುವುದು ದೊಡ್ಡ ಕಾರಣವಾಗಿವೆ.

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಆ್ಯಪ್‌ ಬಳಸಲು ರೈತರಿಗೆ ಕಷ್ಟವಾಗುವಂತಿದೆ. ಕಾರಣ ಇಲ್ಲಿನ ಹಂತಗಳು ಮತ್ತು ಗುಣಮಟ್ಟದ ಇಂಟರ್‌ನೆಟ್‌ ಕಡ್ಡಾಯವಾಗಿರುವುದು. ಆದರೂ ಕೃಷಿ ಸಚಿವರು ಮಾತ್ರ ಇದರಿಂದ ರೈತರಿಗೆ ಲಾಭ ಎನ್ನುತ್ತಲೇ ಇದ್ದಾರೆ.

ಇಂದು ಜಿಕೆವಿಕೆಯಲ್ಲಿ ನಡೆದ  ರಾಜ್ಯದ ಎಲ್ಲ ಜಿಲ್ಲೆಗಳ ಕೃಷಿ ಅಧಿಕಾರಿಗಳ ಪ್ರಗತಿಪರಿಶೀಲನೆ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್‌‌ ಮಾತನಾಡಿ, ಈ ವರ್ಷ ತಂತ್ರಜ್ಞಾನ ಬಳಕೆಯ ತೊಡಕು ಮತ್ತು ಮಳೆಯಿಂದ ತೊಂದರೆ ಆಗಿರಬಹುದು. ಆದರೆ, ಬಹುತೇಕ ಕಡೆಗಳಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ ಎಂದರು.

PC: twitter@Kourava B.C.Patil

ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಈ ವರ್ಷ ಪ್ರಾಯೋಗಿಕವಾಗಿ ಆರಂಭಿಸಿದ್ದರೂ ಮುಂದಿನ ವರ್ಷ ರೈತರು ತಾವೇ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕು ಎಂದು ಕೃಷಿ ಸಚಿವರು ಹೇಳಿದ್ದಾರೆ.

ಸರ್ಕಾರದ ಸೌಲಭ್ಯಗಳನ್ನು ಪಡೆಯಲು ರೈತರು ಆ್ಯಪ್‌ ಮೂಲಕ ತಪ್ಪದೇ ಬೆಳೆ ಸಮೀಕ್ಷೆ ನಡೆಸಬೇಕು. ರೈತರೇ ಸ್ವಯಂ ಬೆಳೆ ಸಮೀಕ್ಷೆ ನಡೆಸುವುದಕ್ಕೆ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕು. ಹೆಚ್ಚು ಹೆಚ್ಚು ರೈತರು ಬೆಳೆ ಸಮೀಕ್ಷೆ ನಡೆಸಲು ಅಧಿಕಾರಿಗಳು ಆಸಕ್ತಿ ವಹಿಸಿ ಕೆಲಸ ಮಾಡಬೇಕು ಎಂದರು.

ಇನ್ನು ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ನಿಜಕ್ಕೂ ಯೂರಿಯಾ, ರಸಗೊಬ್ಬರದ ಕೊರತೆಯಿಲ್ಲ. ಸರಬರಾಜು ಹಂಚಿಕೆಯಲ್ಲಿ ಎಲ್ಲೋ‌ ಒಂದೆರಡು ಕಡೆ ವಿಳಂಬವಾಗಿರಬಹುದು. ಆದರೆ ಕೊರತೆಯಿಲ್ಲ. ಕಾಳಸಂತೆಕೋರರು ಮತ್ತು ಸುಳ್ಳು ಸುದ್ದಿಹಬ್ಬಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕೆಲ ದಿನಗಳ ಹಿಂದಷ್ಟೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯೂರಿಯಾ ಕೊರತೆ ನೀಗಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...