Homeಕರ್ನಾಟಕಮುಂದಿನ ವರ್ಷದಿಂದ 'ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್' ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಈ ವರ್ಷ ಪ್ರಾಯೋಗಿಕವಾಗಿ ಆರಂಭಿಸಿದ್ದರೂ, ಮುಂದಿನ ವರ್ಷ ರೈತರೇ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕು ಎಂದು ಕೃಷಿ ಸಚಿವರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ಜಂಟಿಯಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಿದ್ದು, ಆ್ಯಪ್ ಮೂಲಕ ರಾಜ್ಯದಲ್ಲಿ ಬಿತ್ತನೆಯಾಗಿರೋ ಬೆಳೆಗಳ ಕುರಿತು ನಿಖರ ಮಾಹಿತಿ ಕಲೆಹಾಕಲು ನಿರ್ಧರಿಸಲಾಗಿದೆ. ಆದರೆ ಈ ಆ್ಯಪ್‌ ಮೂಲಕ ತಾವು ಹೊಲಗಳಲ್ಲಿ ಬೆಳೆಯುತ್ತಿರುವ ಬೆಳೆ ಬಗ್ಗೆ ರೈತರೇ ಸಂಪೂರ್ಣ ಮಾಹಿತಿ ಒದಗಿಸಬೇಕಾಗುತ್ತದೆ.

ತಮ್ಮ ಹೊಲಗಳಿಗೆ ಹೋಗಿ ಫೋಟೋ ತೆಗೆದು ಆಪ್‌ಲೋಡ್ ಮಾಡುವ ಜೊತೆಗೆ ಆ್ಯಪ್‌‌ನಲ್ಲಿ ಕೇಳಲಾದ ಪ್ರಶ್ನೆಗಳಿಗೂ ಅಲ್ಲಿಯೇ ಉತ್ತರ ನೀಡಬೇಕು. ಏಕೆಂದರೆ, ಜಿಪಿಎಸ್ ಮೂಲಕ ಹೊಲ ಇರುವ ಗ್ರಾಮ, ಹೋಬಳಿ, ಸರ್ವೆ ನಂಬರ್ ಇತ್ಯಾದಿ ವಿವರಗಳನ್ನು ತಾಳೆ ಮಾಡಿ ನೋಡಬೇಕಾದ ಕಾರಣ ಸರ್ವೆ ನಂಬರ್ ನೀಡಿರುವ ಹೊಲದಿಂದಲೇ ಎಲ್ಲ ವಿವರ ತುಂಬಬೇಕು. ಇಲ್ಲದಿದ್ದರೇ ಬೆಳೆ ವಿಮೆಯಾಗಲಿ, ಪರಿಹಾರವಾಗಲಿ ರೈತರಿಗೆ ಸಿಗುವುದಿಲ್ಲ.

ಆದರೆ ವಿವರ ತುಂಬಲು ನೀಡಲಾಗಿದ್ದ ಅವಧಿ ಮುಗಿದು, ದಿನಾಂಕ ವಿಸ್ತರಿಸಿದ್ದರೂ ಶೇಕಡಾ 50 ರಷ್ಟು ರೈತರು ಇದನ್ನು ಬಳಸಿಲ್ಲ. ಕಾರಣಗಳು ಅನೇಕ ಆ್ಯಪ್‌ಗಳನ್ನು ಬಳಸುವಷ್ಟು ತಾಂತ್ರಿಕ ಅರಿವು ರೈತರಿಗೆ ಇಲ್ಲದಿರುವುದು. ಹಳ್ಳಿಗಳಲ್ಲಿ ಸರಿಯಾದ ಇಂಟರ್‌ನೆಟ್ ಸಂಪರ್ಕ ಸಿಗದೇ ಇರುವುದು ದೊಡ್ಡ ಕಾರಣವಾಗಿವೆ.

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಆ್ಯಪ್‌ ಬಳಸಲು ರೈತರಿಗೆ ಕಷ್ಟವಾಗುವಂತಿದೆ. ಕಾರಣ ಇಲ್ಲಿನ ಹಂತಗಳು ಮತ್ತು ಗುಣಮಟ್ಟದ ಇಂಟರ್‌ನೆಟ್‌ ಕಡ್ಡಾಯವಾಗಿರುವುದು. ಆದರೂ ಕೃಷಿ ಸಚಿವರು ಮಾತ್ರ ಇದರಿಂದ ರೈತರಿಗೆ ಲಾಭ ಎನ್ನುತ್ತಲೇ ಇದ್ದಾರೆ.

ಇಂದು ಜಿಕೆವಿಕೆಯಲ್ಲಿ ನಡೆದ  ರಾಜ್ಯದ ಎಲ್ಲ ಜಿಲ್ಲೆಗಳ ಕೃಷಿ ಅಧಿಕಾರಿಗಳ ಪ್ರಗತಿಪರಿಶೀಲನೆ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್‌‌ ಮಾತನಾಡಿ, ಈ ವರ್ಷ ತಂತ್ರಜ್ಞಾನ ಬಳಕೆಯ ತೊಡಕು ಮತ್ತು ಮಳೆಯಿಂದ ತೊಂದರೆ ಆಗಿರಬಹುದು. ಆದರೆ, ಬಹುತೇಕ ಕಡೆಗಳಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ ಎಂದರು.

PC: twitter@Kourava B.C.Patil

ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಈ ವರ್ಷ ಪ್ರಾಯೋಗಿಕವಾಗಿ ಆರಂಭಿಸಿದ್ದರೂ ಮುಂದಿನ ವರ್ಷ ರೈತರು ತಾವೇ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕು ಎಂದು ಕೃಷಿ ಸಚಿವರು ಹೇಳಿದ್ದಾರೆ.

ಸರ್ಕಾರದ ಸೌಲಭ್ಯಗಳನ್ನು ಪಡೆಯಲು ರೈತರು ಆ್ಯಪ್‌ ಮೂಲಕ ತಪ್ಪದೇ ಬೆಳೆ ಸಮೀಕ್ಷೆ ನಡೆಸಬೇಕು. ರೈತರೇ ಸ್ವಯಂ ಬೆಳೆ ಸಮೀಕ್ಷೆ ನಡೆಸುವುದಕ್ಕೆ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕು. ಹೆಚ್ಚು ಹೆಚ್ಚು ರೈತರು ಬೆಳೆ ಸಮೀಕ್ಷೆ ನಡೆಸಲು ಅಧಿಕಾರಿಗಳು ಆಸಕ್ತಿ ವಹಿಸಿ ಕೆಲಸ ಮಾಡಬೇಕು ಎಂದರು.

ಇನ್ನು ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ನಿಜಕ್ಕೂ ಯೂರಿಯಾ, ರಸಗೊಬ್ಬರದ ಕೊರತೆಯಿಲ್ಲ. ಸರಬರಾಜು ಹಂಚಿಕೆಯಲ್ಲಿ ಎಲ್ಲೋ‌ ಒಂದೆರಡು ಕಡೆ ವಿಳಂಬವಾಗಿರಬಹುದು. ಆದರೆ ಕೊರತೆಯಿಲ್ಲ. ಕಾಳಸಂತೆಕೋರರು ಮತ್ತು ಸುಳ್ಳು ಸುದ್ದಿಹಬ್ಬಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕೆಲ ದಿನಗಳ ಹಿಂದಷ್ಟೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯೂರಿಯಾ ಕೊರತೆ ನೀಗಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....