Homeಕರ್ನಾಟಕಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣ: ಚೈತ್ರಾ ಸೇರಿ ಇಬ್ಬರಿಗೆ ಜಾಮೀನು

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣ: ಚೈತ್ರಾ ಸೇರಿ ಇಬ್ಬರಿಗೆ ಜಾಮೀನು

- Advertisement -
- Advertisement -

ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟ್ಯಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಚೈತ್ರಾ ಸೇರಿ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ ಎ2 ಆರೋಪಿಯಾಗಿರುವ ಶ್ರೀಕಾಂತ್‍ಗೆ 3ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇಂದು ಪರಪ್ಪನ ಅಗ್ರಹಾರ ಕಾರಾಗೃಹದಿಂದ ಈ ಇಬ್ಬರು ಬಿಡುಗಡೆಯಾಗಲಿದ್ದಾರೆ. ಈ ಮೊದಲು ಹಾಲಶ್ರೀ ಸ್ವಾಮೀಜಿಗೆ ಜಾಮೀನು ನೀಡಲಾಗಿತ್ತು. ಇದೀಗ ಪ್ರಕರಣದಲ್ಲಿ ಮೂವರಿಗೆ ಜಾಮೀನು ಸಿಕ್ಕಿದಂತಾಗಿದೆ.

ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಮತ್ತು ಗ್ಯಾಂಗ್‌ 5 ಕೋಟಿ ರೂ.ಹಣ ಪಡೆದಿದ್ದರು. ಕೇಂದ್ರದ ನಾಯಕರು ಹಾಗೂ ಆರೆಸ್ಸೆಸ್ ಮುಖಂಡರ ಹೆಸರಲ್ಲಿ ಚೈತ್ರಾ ಹಾಗೂ ಅವರ ಸಂಗಡಿಗರು ಈ ಮೋಸ ಮಾಡಿದ್ದು, ಆಕೆ ಹಾಗೂ ಆಕೆಯ ನಾಲ್ಕೈದು ಜನರ ತಂಡವು ಆರೆಸ್ಸೆಸ್‌ ಮತ್ತು ಕೇಂದ್ರದ ನಾಯಕರ ಪಾತ್ರವನ್ನು ನಿಭಾಯಿಸಿತ್ತು.

ಚುನಾವಣೆಯಲ್ಲಿ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್​ ಸಿಕ್ಕಿರಲಿಲ್ಲ. ಬಳಿಕ ಗೋವಿಂದ ಬಾಬು ಕೊಟ್ಟ ಹಣವನ್ನು ಮರಳಿ ನೀಡುವಂತೆ ಕೇಳಿದ್ದಾರೆ. ಆದರೆ ಚೈತ್ರಾ  ಹಣ ನೀಡದೆ ಹೈಡ್ರಾಮವನ್ನು ಮಾಡಿದ್ದರು.

ಬಂಧಿತರಾಗಿರುವ ಚೈತ್ರಾ ಕುಂದಾಪುರ, ಗಗನ್‌ ಕಡೂರು ಹಾಗೂ ಶ್ರೀಕಾಂತ್ ಎಂಬವರನ್ನು ಹಣದ ವಿಚಾರವಾಗಿ ಮಾತನಾಡಲು ಕಳೆದ ಏ. 24ರಂದು ವಂಚನೆಗೊಳಗಾದ ಉದ್ಯಮಿ ಪೂಜಾರಿ ಅವರು ತಮ್ಮ ಕಚೇರಿಗೆ ಕರೆಯಿಸಿಕೊಂಡಿದ್ದರು. ಈ ವೇಳೆ,‌ ಆರೋಪಿ ಗಗನ್‌ ಕಡೂರು ವಿಷ‌ ಕುಡಿದು ಸಾಯುವೆ ಅಂತ ಹೇಳಿ ಹೈಡ್ರಾಮ ಸೃಷ್ಟಿ ಮಾಡಿದ್ದಾನೆ.‌ ಪಕ್ಕದಲ್ಲೇ‌ ಕುಳಿತಿದ್ದ ಚೈತ್ರಾ ಕುಂದಾಪುರ ಹಾಗೂ ಇನ್ನಿತರರು ಆತನನ್ನು ತಡೆದಿದ್ದಾರೆ. ಆರೋಪಿ ಗಗನ್ ವಿಷ ಸೇವನೆ‌ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಮೋಸಕ್ಕೆ ಒಳಗಾದ ಉದ್ಯಮಿ ಸೆ.8 ರಂದು ಚೈತ್ರಾ ಕುಂದಾಪುರ ವಿರುದ್ಧ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು,  ಈ ಪ್ರಕರಣ ಸಿಸಿಬಿಗೆ ವರ್ಗಾವಣೆ ಆಗಿತ್ತು. ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ  ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಹೆಚ್ಚಿನ ತನಿಖೆಯ ಹಂತದಲ್ಲಿ ಗಗನ್ ಕಡೂರು, ಹಾಲಶ್ರೀ ಸ್ವಾಮೀಜಿ, ಧನರಾಜ್, ಚನ್ನನಾಯ್ಕ್, ಪ್ರಜ್ವಲ್, ಶ್ರೀಕಾಂತ್ ಸೇರಿದಂತೆ 9 ಮಂದಿಯನ್ನು ಬಂಧಿಸಲಾಗಿತ್ತು. ತನಿಖೆ ಪೂರ್ಣಗೊಳಿಸಿ ಇತ್ತೀಚೆಗೆ ಈ 9 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಸಿಸಿಬಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....