Homeಮುಖಪುಟ'ಲಕ್ಷ್ಮಣ ರೇಖೆ ದಾಟಿದೆ': ಮೋದಿ ಸರ್ಕಾರವನ್ನು ಹೊಗಳಿದ ಶಶಿ ತರೂರ್ ನಿಲುವಿಗೆ ಕಾಂಗ್ರೆಸ್‌ ನಾಯಕರಲ್ಲಿ ಅಸಮಾಧಾನ

‘ಲಕ್ಷ್ಮಣ ರೇಖೆ ದಾಟಿದೆ’: ಮೋದಿ ಸರ್ಕಾರವನ್ನು ಹೊಗಳಿದ ಶಶಿ ತರೂರ್ ನಿಲುವಿಗೆ ಕಾಂಗ್ರೆಸ್‌ ನಾಯಕರಲ್ಲಿ ಅಸಮಾಧಾನ

- Advertisement -
- Advertisement -

‘ಆಪರೇಷನ್ ಸಿಂಧೂರ’ ಮತ್ತು ಅದರ ನಂತರದ ಬೆಳವಣಿಗೆಗಳಿಗೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಹೊಗಳಿದ ಸಂಸದ ಶಶಿ ತರೂರ್ ನಿಲುವಿಗೆ ಕಾಂಗ್ರೆಸ್‌ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಭಾರತ-ಪಾಕ್ ಸಂಘರ್ಷದ ಕುರಿತ ಪಕ್ಷದ ಅಧಿಕೃತ ಹೇಳಿಕೆಗಿಂತ ಭಿನ್ನವಾಗಿ ಪದೇ ಪದೇ ಶಶಿ ತರೂರ್ ಹೇಳಿಕೆ ನೀಡುತ್ತಿರುವುದು. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರನ್ನು ಹೊಗಳುತ್ತಿರುವುದಕ್ಕೆ ಕಾಂಗ್ರೆಸ್‌ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆ, ಆ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆ ಕುರಿತು ಚರ್ಚಿಸಲು ಗುರುವಾರ ಕಾಂಗ್ರೆಸ್‌ನ ಹಿರಿಯ ನಾಯಕರ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ, ‘ಶಶಿ ತರೂರ್ ಲಕ್ಷಣ ರೇಖೆ ದಾಟಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಹೇಳಿದ್ದಾಗಿ ವರದಿಯಾಗಿದೆ.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜೈರಾಮ್ ರಮೇಶ್, “ಶಶಿ ತರೂರ್ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ, ಪಕ್ಷದ ಅಧಿಕೃತ ನಿಲುವಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ, ಆ ಬಳಿಕದ ಭಾರತ-ಪಾಕಿಸ್ತಾನ ಸಂಘರ್ಷ, ಕದನ ವಿರಾಮ ಘೋಷಣೆ, ಅದಕ್ಕೆ ನಾವು ಮಧ್ಯಸ್ಥಿಕೆ ವಹಿಸಿದ್ದೇವೆ ಎಂಬ ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿಕೆ, ಇವೆಲ್ಲವೂ ಮೋದಿ ಸರ್ಕಾರದ ವೈಫಲ್ಯ ಎಂಬುವುದು ಕಾಂಗ್ರೆಸ್‌ ಪಕ್ಷದ ಅಭಿಪ್ರಾಯವಾಗಿದೆ. ಈ ಸಂಬಂಧ ಪ್ರತಿದಿನ ಹಲವು ಪ್ರಶ್ನೆಗಳನ್ನು ಕಾಂಗ್ರೆಸ್‌ ಸರ್ಕಾರಕ್ಕೆ ಕೇಳುತ್ತಿದೆ. ಈ ನಡುವೆ ಸಂಸದ ಶಶಿ ತರೂರ್ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಪರ ಬ್ಯಾಟ್ ಬೀಸುತ್ತಿರುವುದು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

“ಮೋದಿ ಸರ್ಕಾರದ ವಿದೇಶಾಂಗ ನೀತಿ ಸಂಪೂರ್ಣ ವಿಫಲವಾಗಿದ್ದು, ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಿಂದ ಅದನ್ನು ಎತ್ತಿ ತೋರಿಸುವುದು ಪ್ರತಿಯೊಬ್ಬ ಭಾರತೀಯ ನಾಯಕನ ಕರ್ತವ್ಯ” ಎಂದು ಕಾಂಗ್ರೆಸ್ ನಾಯಕ ಪ್ರವೀಣ್ ಚಕ್ರವರ್ತಿ ಹೇಳಿದ್ದಾರೆ.

“ತಿರುವನಂತಪುರಂ, ತಿರುಚಿರಾಪಳ್ಳಿ ಅಥವಾ ಥಾಣೆ ಯಾವುದೇ ಕ್ಷೇತ್ರದ ಸಂಸದರಾಗಿರಲಿ, ಇಂಗ್ಲಿಷ್, ತಮಿಳು ಅಥವಾ ಮರಾಠಿ ಯಾವುದೇ ಭಾಷೆಯಲ್ಲಿ ಏನೇ ಹೇಳಲಿ, ಸತ್ಯಗಳು ಮಾತ್ರ ನಿರ್ವಿವಾದ. ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತ ಮತ್ತು ಪಾಕಿಸ್ತಾನ ಸಮಾನರು ಎಂದು ಹೇಳಿದ್ದಾರೆ. ಕಾಶ್ಮೀರ ಅಂತಾರಾಷ್ಟ್ರೀಯ ವಿಷಯವಾಗಿದೆ, ಅಮೆರಿಕವು ಭಾರತವನ್ನು ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಒತ್ತಾಯಿಸಿತು ಎಂದು ಹೇಳಿದ್ದಾರೆ” ಎಂದು ಚಕ್ರವರ್ತಿ ತಿಳಿಸಿದ್ದಾರೆ.

ತನ್ನ ನಿಲುವಿಗೆ ಪಕ್ಷದ ನಾಯಕರು ಅಸಮಾಧಾನಗೊಂಡ ಬಗ್ಗೆ ಪ್ರತಿಕ್ರಿಯಿಸಿರುವ ತರೂರ್, “ನನ್ನ ಅಭಿಪ್ರಾಯಗಳು ವೈಯಕ್ತಿವಾಗಿದ್ದು, ಪಕ್ಷದ ಅಧಿಕೃತ ನಿಲುವಲ್ಲ” ಎಂದಿದ್ದಾರೆ.

” ನಾನೊಬ್ಬ ಹೆಮ್ಮೆಯ ಭಾರತೀಯ ನಾಗರಿಕನಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ಅದು ನನ್ನ ವೈಯಕ್ತಿಕ ಅಭಿಪ್ರಾಯ. ನಾನು ಪಕ್ಷದ ವಕ್ತಾರನಲ್ಲ, ನನ್ನ ಹೇಳಿಕೆ ಪಕ್ಷದ ಅಧಿಕೃತ ಹೇಳಿಕೆಯಲ್ಲ. ನಾನು ಹೇಳಿದ್ದನ್ನು ನೀವು ಒಪ್ಪಬಹುದು ಅಥವಾ ತಿರಸ್ಕರಿಸಬಹುದು. ಆ ಕಾರಣಕ್ಕೆ ನನ್ನ ಹೊಗಳಬಹುದು, ತೆಗಳಬಹುದು, ಅದು ನಿಮ್ಮಿಷ್ಟ” ಎಂದು ತರೂರ್ ಹೇಳಿದ್ದಾರೆ.

ತನ್ನ ನಿಲುವಿನ ಕುರಿತು “ಲಕ್ಷಣ ರೇಖೆ ದಾಟಿದ್ದಾರೆ” ಎಂಬ ಅಭಿಪ್ರಾಯ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ವ್ಯಕ್ತವಾಗಿದೆ ಎಂಬುವುದನ್ನು ಶಶಿತರೂರ್ ತಳ್ಳಿ ಹಾಕಿದ್ದಾರೆ.

ಬುಡಕಟ್ಟು ಜನಾಂಗದ ನಿರ್ಲಕ್ಷ್ಯಕ್ಕೆ ಬಿಜೆಪಿ ವಿರುದ್ಧ ವಾಗ್ದಾಳಿ; ಟಿಎಂಸಿ ಸೇರಿದ ಮಾಜಿ ಕೇಂದ್ರ ಸಚಿವ ಜಾನ್ ಬಾರ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...