HomeUncategorizedಪಾಕ್ ಮಹಿಳೆಯ ವಿವಾಹವಾಗಿ ಮುಚ್ಚಿಟ್ಟಿದ್ದ CRPF ಕಾನ್‌ಸ್ಟೆಬಲ್ ವಜಾ

ಪಾಕ್ ಮಹಿಳೆಯ ವಿವಾಹವಾಗಿ ಮುಚ್ಚಿಟ್ಟಿದ್ದ CRPF ಕಾನ್‌ಸ್ಟೆಬಲ್ ವಜಾ

- Advertisement -
- Advertisement -

ನವದೆಹಲಿ: ಕಡ್ಡಾಯ ಇಲಾಖಾ ಅನುಮತಿಯನ್ನು ಪಡೆಯದೆ ಪಾಕಿಸ್ತಾನಿ ಮಹಿಳೆಯನ್ನು ಮದುವೆಯಾಗುವ ಮೂಲಕ ಶಿಷ್ಟಾಚಾರಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಾನ್‌ಸ್ಟೆಬಲ್ ಒಬ್ಬರನ್ನು ವಜಾಗೊಳಿಸಿದೆ.

41ನೇ ಬೆಟಾಲಿಯನ್‌ನಲ್ಲಿ ನಿಯೋಜಿತರಾಗಿರುವ ಕಾನ್‌ಸ್ಟೆಬಲ್ ಮುನೀರ್ ಅಹ್ಮದ್, ಪಾಕಿಸ್ತಾನಿ ಮಹಿಳೆಯೊಂದಿಗಿನ ತನ್ನ ವಿವಾಹವನ್ನು ಮರೆಮಾಡಿದ್ದಾರೆ ಮತ್ತು ವೀಸಾದ ಮಾನ್ಯತೆಯನ್ನು ಮೀರಿ ಅವರಿಗೆ ಆಶ್ರಯ ನೀಡಿದ್ದಾರೆ ಎಂದು CRPF ತಿಳಿಸಿದೆ. ಅವರ ಈ ನಡೆ ಸೇವಾ ನಡವಳಿಕೆಯ ಉಲ್ಲಂಘನೆ ಮತ್ತು ರಾಷ್ಟ್ರೀಯ ಭದ್ರತೆಗೆ ಹಾನಿಕಾರಕವಾಗಿದೆ ಎಂದು ಕಂಡುಬಂದಿದೆ ಎಂದು ಅದು ಹೇಳಿದೆ.

ಕಾನ್‌ಸ್ಟೆಬಲ್ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನಿವಾಸಿಯಾದ ತನ್ನ ಸೋದರ ಸಂಬಂಧಿ ಮೆನಾಲ್ ಖಾನ್ ಅವರನ್ನು ಮದುವೆಯಾಗಲು ಅರ್ಜಿಯನ್ನು ಸಲ್ಲಿಸಿದ್ದರು. ಆದಾಗ್ಯೂ, CRPF ಔಪಚಾರಿಕ ಪ್ರತಿಕ್ರಿಯೆಯನ್ನು ನೀಡುವ ಅಥವಾ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡುವ ಮೊದಲು ವಿವಾಹವನ್ನು ನೆರವೇರಿಸಲಾಯಿತು ಎಂದು ವರದಿಯಾಗಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಅವರ ಕ್ರಮಗಳ ಬಗ್ಗೆ ಅಧಿಕಾರಿಗಳು ಕಠೋರ ನಿಲುವನ್ನು ತೆಗೆದುಕೊಂಡಿದ್ದಾರೆ. ಭಾರತವು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿತ್ತು ಮತ್ತು ಎಲ್ಲಾ ನಾಗರಿಕರು ಅವರ ವೀಸಾ ಅವಧಿ ಮುಗಿಯುವ ಮೊದಲು ದೇಶವನ್ನು ತೊರೆಯುವಂತೆ ನಿರ್ದೇಶಿಸಿತ್ತು.

ರಾಷ್ಟ್ರೀಯ ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ ಸಿಆರ್‌ಪಿಎಫ್‌ನ ಜಮ್ಮು ಮತ್ತು ಕಾಶ್ಮೀರ ವಲಯವು ಕಾನ್‌ಸ್ಟೆಬಲ್‌ಗೆ ಅನುಮತಿ ನೀಡುವುದನ್ನು ವಿರೋಧಿಸಿತ್ತು ಎಂದು ಮೂಲಗಳು ತಿಳಿಸಿವೆ. ಗಡಿಯಾಚೆಗಿನ ವೈವಾಹಿಕ ಪ್ರಕರಣಗಳ ಸೂಕ್ಷ್ಮ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ಸ್ಪಷ್ಟ ನಿರ್ಧಾರಕ್ಕಾಗಿ ಈ ವಿಷಯವನ್ನು ಉನ್ನತ ಅಧಿಕಾರಿಗಳಿಗೆ ರವಾನಿಸಲಾಗಿತ್ತು.

ನಂತರ ಆಂತರಿಕ ಪರಿಶೀಲನೆಯನ್ನು ಕೈಗೊಳ್ಳಲಾಯಿತು, ಇದರಲ್ಲಿ ಕಾನ್‌ಸ್ಟೆಬಲ್ ಮದುವೆಯಾಗಬೇಕಿದ್ದ ಮಹಿಳೆಯು ತನ್ನ ಪ್ರವಾಸಿ ವೀಸಾದ ಮಾನ್ಯತೆಯನ್ನು ಮೀರಿ ಭಾರತದಲ್ಲಿಯೇ ಉಳಿದಿದ್ದಾರೆ ಎಂದು ಇಲಾಖೆಗೆ ತಿಳಿಸಲು ವಿಫಲವಾದುದನ್ನೂ ಒಳಗೊಂಡಂತೆ ಹಲವಾರು ಕಾರ್ಯವಿಧಾನದ ಲೋಪಗಳನ್ನು ಹಿರಿಯ ಅಧಿಕಾರಿಗಳು ಗುರುತಿಸಿದರು.

ಕಾನ್‌ಸ್ಟೆಬಲ್ ದೀರ್ಘಾವಧಿಯ ವೀಸಾ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಹೇಳಿಕೊಂಡರೂ, ಅವರು ಈ ಬೆಳವಣಿಗೆಯ ಬಗ್ಗೆ ಇಲಾಖೆಗೆ ಔಪಚಾರಿಕವಾಗಿ ತಿಳಿಸಿರಲಿಲ್ಲ. ಕಾನ್‌ಸ್ಟೆಬಲ್‌ನ ನಡವಳಿಕೆಯು ವಿದೇಶಿ ಪ್ರಜೆಗಳೊಂದಿಗಿನ ವೈಯಕ್ತಿಕ ಸಂಬಂಧಗಳನ್ನು ನಿಯಂತ್ರಿಸುವ ಮತ್ತು ಪೂರ್ವಾನುಮತಿ ಅಗತ್ಯವಿರುವ 1964ರ ಕೇಂದ್ರ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳ 21(3) ರ ಉಲ್ಲಂಘನೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರ ಪಾಕಿಸ್ತಾನಿ ಪ್ರಜೆಗಳನ್ನು ನಿರ್ಗಮಿಸಲು ಆದೇಶಿಸಿದ ನಂತರ, ಕಾನ್‌ಸ್ಟೆಬಲ್‌ನ ಸಂಗಾತಿಯನ್ನು ಗಡಿಪಾರು ಮಾಡಲು ಅಟ್ಟಾರಿ ಗಡಿಗೆ ಕರೆದೊಯ್ಯಲಾಯಿತು. ಅವರು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಅನ್ನು ಸಂಪರ್ಕಿಸಿದರು, ಅದು ಏಪ್ರಿಲ್ 29ರಂದು ಅವರ ಗಡಿಪಾರು ಪ್ರಕ್ರಿಯೆಗೆ 10 ದಿನಗಳ ತಡೆಯಾಜ್ಞೆ ನೀಡಿತು, ಮುಂದಿನ ಕಾನೂನು ಕ್ರಮಗಳು ಬಾಕಿ ಉಳಿದಿವೆ.

ಹೈಕೋರ್ಟ್ ಮುಂದೆ ಮಹಿಳೆಯನ್ನು ಪ್ರತಿನಿಧಿಸಿದ ವಕೀಲ ಅಂಕುರ್ ಶರ್ಮಾ ಅವರು, ಗೃಹ ಸಚಿವಾಲಯದ ಪಾಕ್ ಪ್ರಜೆಗಳು “ಭಾರತ ಬಿಟ್ಟು ತೊಲಗಿ” ಆದೇಶವು ರಾಜತಾಂತ್ರಿಕ ವೀಸಾಗಳು ಅಥವಾ ದೀರ್ಘಾವಧಿಯ ವೀಸಾಗಳನ್ನು (LTVs) ಹೊಂದಿರುವ ಪಾಕಿಸ್ತಾನಿ ಪ್ರಜೆಗಳಿಗೆ ಮಾತ್ರ ವಿನಾಯಿತಿ ನೀಡಿದೆ ಎಂದು ಹೇಳಿದರು. ಮಿನಾಲ್ ದೀರ್ಘಾವಧಿಯ ವೀಸಾಗೆ ಅರ್ಜಿ ಸಲ್ಲಿಸಿದ್ದಾರೆ ಮತ್ತು ಸಂದರ್ಶನ ನಡೆಸಲಾಗಿದೆ ಎಂದು ಅವರು ಹೇಳಿದರು. ಸಕಾರಾತ್ಮಕ ಶಿಫಾರಸು ಗೃಹ ಸಚಿವಾಲಯಕ್ಕೆ ಹೋಗಿದೆ ಎಂದು ವರದಿಯಾಗಿದೆ ಎಂದು ಅವರು ಹೇಳಿದರು.

ನ್ಯಾಯಾಲಯವು ಮಧ್ಯಂತರ ಆದೇಶವನ್ನು ನೀಡಿದ ನಂತರ ಅವರನ್ನು ವಾಪಸ್ ಕಳುಹಿಸಲಾಗಿದೆ ಎಂದು ಅವರು ಹೇಳಿದರು, ಅವರ ಗಡೀಪಾರು ಸ್ಥಿತಿಯು ಅವರ ವೀಸಾ ಅರ್ಜಿಯ ಫಲಿತಾಂಶವನ್ನು ಅವಲಂಬಿಸಿರುತ್ತದೆ ಎಂದು ಅವರು ಹೇಳಿದರು.

ಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...