Homeಮುಖಪುಟನಾಗಾರ್ಜುನ ಸಾಗರಕ್ಕಾಗಿ ಆಂಧ್ರ, ತೆಲಂಗಾಣ ಕಿತ್ತಾಟ: ಜಲಾಶಯದ ಬಳಿ ಸಿಆರ್‌ಪಿಎಫ್ ನಿಯೋಜನೆ

ನಾಗಾರ್ಜುನ ಸಾಗರಕ್ಕಾಗಿ ಆಂಧ್ರ, ತೆಲಂಗಾಣ ಕಿತ್ತಾಟ: ಜಲಾಶಯದ ಬಳಿ ಸಿಆರ್‌ಪಿಎಫ್ ನಿಯೋಜನೆ

- Advertisement -
- Advertisement -

ದೇಶದ ಪ್ರಮುಖ ಜಲಾಶಯಗಳಲ್ಲಿ ಒಂದಾದ ನಾಗಾರ್ಜುನ ಸಾಗರ ಅಣೆಕಟ್ಟೆಯ ನೀರಿನ ವಿಚಾರವಾಗಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ನಡುವೆ ಏರ್ಪಟ್ಟಿರುವ ಕಾಳಗ ತಾರಕಕ್ಕೇರಿದ್ದು, ಜಲಾಶಯದ ಬಳಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನೇಮಿಸಲಾಗಿದೆ.

ತೆಲಂಗಾಣ ವಿಧಾನಸಭೆಯ ಮತದಾನದ ಹಿಂದಿನ ದಿನ, ಅಂದರೆ ನವೆಂಬರ್‌ 29ರಂದು ರಾತ್ರಿ ನೀರಿನ ವಿಚಾರವಾಗಿ ಎರಡು ತೆಲುಗು ರಾಜ್ಯಗಳ ನಡುವೆ ಕಿತ್ತಾಟ ಶುರುವಾಗಿದೆ. 2014ರಲ್ಲಿ ತೆಲಂಗಾಣ ಪ್ರತ್ಯೇಖ ರಾಜ್ಯ ರಚನೆಯಾದ ಬಳಿಕ ಶುರುವಾದ ವಿವಾದ ಕಾನೂನಾತ್ಮಕ ಹೋರಾಟಗಳಿಗೆ ಮಾತ್ರ ಸೀಮಿತವಾಗಿ ಬೂದಿ ಮುಚ್ಚಿದ ಕೆಂಡದಂತಿತ್ತು. ಆದರೆ, ಈಗ ನೇರಾನೇರಾ ಜಗಳಕ್ಕೆ ಬಂದು ನಿಂತಿದೆ.

‘ನಮ್ಮ ಪಾಲಿನ ನೀರು ಕೊಡಿ’ ಎಂದು ಆಗಾಗ ತೆಲಂಗಾಣ ಸರ್ಕಾರಕ್ಕೆ ಒತ್ತಡ ಹೇರುತ್ತಿದ್ದ ಆಂಧ್ರ ಪ್ರದೇಶ ಸರ್ಕಾರ, ನವೆಂಬರ್‌ 29ರಂದು ಮಧ್ಯರಾತ್ರಿ ನೀರಾವರಿ ನಿಗಮದ ಅಧಿಕಾರಿಗಳು ಮತ್ತು ಸುಮಾರು 400 ಮಂದಿ ಪೊಲೀಸರನ್ನು ಅಣೆಕಟ್ಟೆಗೆ ನುಗ್ಗಿಸಿತ್ತು. ಪೊಲೀಸ್ ಸರ್ಪಗಾವಲಿನಲ್ಲಿ ಅಣೆಕಟ್ಟೆಯನ್ನು ಭಾಗಶಃ ವಶಕ್ಕೆ ಪಡೆದ ಆಂಧ್ರ ಪ್ರದೇಶದ ಅಧಿಕಾರಿಗಳು, ಜಲಾಶಯದ ಬಲ ಕಾಲುವೆಯ ಮೂಲಕ ತಮ್ಮ ರಾಜ್ಯಕ್ಕೆ ನೀರು ಹರಿಸಿಕೊಂಡಿದ್ದಾರೆ. ಈ ವೇಳೆ ತೆಲಂಗಾಣದ ಪೊಲೀಸರು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದರು. ಕೆಲ ಪೊಲೀಸರು ಮತ್ತು ಅಧಿಕಾರಿಗಳು ಅಣೆಕಟ್ಟೆಯ ಬಳಿ ತೆರಳಿದರೂ, ಭಾರೀ ಸಂಖ್ಯೆಯಲ್ಲಿದ್ದ ಆಂಧ್ರದ ಪಡೆಯನ್ನು ಎದುರಿಸಲು ಅವರಿಗೆ ಸಾಧ್ಯವಾಗಲಿಲ್ಲ. ಹಾಗಾಗಿ, ವಾಪಸ್ ಬಂಧಿದ್ದಾರೆ.

ತೆಲಂಗಾಣ ಸರ್ಕಾರ ಮತ್ತು ಅದರ ಅಧಿಕಾರಿಗಳು ಚುನಾಣೆಯಲ್ಲಿ ಮುಳುಗಿರುವಾಗ, ನವೆಂಬರ್ 30 ರಿಂದ ಡಿಸೆಂಬರ್ 1 (ನಿನ್ನೆ) ಮಧ್ಯಾಹ್ನದವರೆಗೆ ಆಂಧ್ರದ ಅಧಿಕಾರಿಗಳು ತಮಗೆ ಬೇಕಾದಷ್ಟು ನೀರನ್ನು ಜಲಾಶಯದಿಂದ ಹರಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಕೇಂದ್ರ ಸರ್ಕಾರ ಎರಡೂ ರಾಜ್ಯಗಳ ಜೊತೆ ಶುಕ್ರವಾರ ಸಭೆ ನಡೆಸಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು, ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ಕೃಷ್ಣಾ ನದಿ ನೀರು ನಿರ್ವಹಣಾ ಮಂಡಳಿ (ಕೆಆರ್‌ಎಂಬಿ) ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಅಣೆಕಟ್ಟೆ ಬಳಿ ನವೆಂಬರ್ 29ಕ್ಕೂ ಮೊದಲು ಇದ್ದ ಸ್ಥಿತಿಯನ್ನು ಪುನಃಸ್ಥಾಪಿಸಲು ಆಂಧ್ರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವರದಿಗಳ ಪ್ರಕಾರ, ಕೃಷ್ಣಾ ನದಿ ನೀರು ನಿರ್ವಹಣಾ ಮಂಡಳಿಯ ಸದಸ್ಯರಾಗಿರುವ ಎರಡೂ ರಾಜ್ಯಗಳು ತಾತ್ಕಾಲಿಕವಾಗಿ ಅಣೆಕಟ್ಟಿನ ಭದ್ರತೆಗಾಗಿ ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲು ಒಪ್ಪಿಕೊಂಡಿವೆ. ತೆಲಂಗಾಣದ ಮುಖ್ಯ ಕಾರ್ಯದರ್ಶಿ ಎ. ಸಂತಿ ಕುಮಾರಿ ಅವರು ನವೆಂಬರ್ 29 ರ ರಾತ್ರಿ ಅಣೆಕಟ್ಟೆಯ ಮೇಲೆ ಸುಮಾರು 500 ಮಂದಿ ಆಂಧ್ರ ಪೊಲೀಸ್ ಸಿಬ್ಬಂದಿ ಗುಂಪು ಗುಂಪಾಗಿ ಬಂದು ಕ್ಲೋಸ್-ಸರ್ಕ್ಯೂಟ್ ಟೆಲಿವಿಷನ್ ಕ್ಯಾಮರಾಗಳನ್ನು ನಾಶಪಡಿಸಿದ್ದಾರೆ ಎಂದು ಸಭೆಯಲ್ಲಿ ಆರೋಪಿಸಿದ್ದಾರೆ.

ಆಂಧ್ರದ ಅಧಿಕಾರಿಗಳು ಏಕಪಕ್ಷೀಯವಾಗಿ ಅಣೆಕಟ್ಟೆಯ ಹೆಡ್ ರೆಗ್ಯುಲೇಟರ್ ಸ್ಲೂಸ್‌ಗಳನ್ನು ತೆರೆದು 5,000 ಕ್ಯೂಸೆಕ್‌ಗೂ ಹೆಚ್ಚು ನೀರು ಅವರ ರಾಜ್ಯಕ್ಕೆ ಹರಿಸುತ್ತಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯ ಮತದಾನದ ಕರ್ತವ್ಯದಲ್ಲಿ ಪೊಲೀಸರು ಸೇರಿದಂತೆ ಸಂಪೂರ್ಣ ಆಡಳಿತ ಯಂತ್ರ ತೊಡಗಿದ್ದಾಗ ಆಂಧ್ರ ವರ್ತನೆ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಸೃಷ್ಟಿಸಿದೆ. ಆಂಧ್ರ ಎರಡನೇ ಬಾರಿಗೆ ಇಂತಹ ಮಿತಿ ಮೀರಿದ ವರ್ತನೆ ಮಾಡುತ್ತಿದೆ ಎಂದು ಸಂತಿ ಕುಮಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಆಂಧ್ರದ ಅಧಿಕಾರಿಗಳು, ಅಣೆಕಟ್ಟೆಯ ಅರ್ಧ ಭಾಗ ನಮಗೆ ಸೇರಿದ್ದು. ಇಲ್ಲಿ ಯಾವಾಗ ಬೇಕಾದರು ಪೊಲೀಸರನ್ನು ನಿಯೋಜಿಸಲು ಮತ್ತು ನೀರು ಹರಿಸಿಕೊಳ್ಳಲು ನಮಗೆ ಹಕ್ಕಿದೆ ಎಂದಿದ್ದಾರೆ. ಶುಕ್ರವಾರ ಆಂಧ್ರ ಸರ್ಕಾರಕ್ಕೆ ನೋಟಿಸ್ ನೀಡಿರುವ ಕೇಂದ್ರ ಜಲಶಕ್ತಿ ಸಚಿವಾಲಯ, ತಕ್ಷಣ ಅಣೆಕಟ್ಟೆಯ ಗೇಟ್ ಬಂದ್ ಮಾಡಿ ನೀರು ಹರಿಸುವುದನ್ನು ನಿಲ್ಲಿಸುವಂತೆ ಸೂಚಿಸಿದೆ.

ನಾಗಾರ್ಜುನ ಸಾಗರದಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ 512 ಟಿಎಂಸಿ ಮತ್ತು 299 ಟಿಎಂಸಿ ನೀರನ್ನು ತಾತ್ಕಾಲಿಕ ಆಧಾರದ ಮೇಲೆ ಹಂಚಿಕೊಳ್ಳುತ್ತಿವೆ. ತೆಲಂಗಾಣವು 2020-21 ರಿಂದ 50% ನೀರಿನ ಹಂಚಿಕೆಗೆ ಒತ್ತಾಯಿಸುತ್ತಿದೆ. ಅವಿಭಜಿತ ಆಂಧ್ರಪ್ರದೇಶದ ವಿಭಜನೆಯ ದಿನಾಂಕದಿಂದ, ಶ್ರೀಶೈಲಂ ಡ್ಯಾಂ ನಿರ್ವಹಣೆಯನ್ನು ಆಂಧ್ರ ಪ್ರದೇಶ ಮತ್ತು ನಾಗಾರ್ಜುನ ಸಾಗರದ ನಿರ್ವಹಣೆಯನ್ನು ತೆಲಂಗಾಣಕ್ಕೆ ವಹಿಸಲಾಗಿದೆ.

ಇದನ್ನೂ ಓದಿ : 10 ವರ್ಷಗಳಲ್ಲಿ ಶೇ.50 ಮಹಿಳಾ ಮುಖ್ಯಮಂತ್ರಿ ಕಾಂಗ್ರೆಸ್ ಗುರಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...