Homeಮುಖಪುಟನಾಗಾರ್ಜುನ ಸಾಗರಕ್ಕಾಗಿ ಆಂಧ್ರ, ತೆಲಂಗಾಣ ಕಿತ್ತಾಟ: ಜಲಾಶಯದ ಬಳಿ ಸಿಆರ್‌ಪಿಎಫ್ ನಿಯೋಜನೆ

ನಾಗಾರ್ಜುನ ಸಾಗರಕ್ಕಾಗಿ ಆಂಧ್ರ, ತೆಲಂಗಾಣ ಕಿತ್ತಾಟ: ಜಲಾಶಯದ ಬಳಿ ಸಿಆರ್‌ಪಿಎಫ್ ನಿಯೋಜನೆ

- Advertisement -
- Advertisement -

ದೇಶದ ಪ್ರಮುಖ ಜಲಾಶಯಗಳಲ್ಲಿ ಒಂದಾದ ನಾಗಾರ್ಜುನ ಸಾಗರ ಅಣೆಕಟ್ಟೆಯ ನೀರಿನ ವಿಚಾರವಾಗಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ನಡುವೆ ಏರ್ಪಟ್ಟಿರುವ ಕಾಳಗ ತಾರಕಕ್ಕೇರಿದ್ದು, ಜಲಾಶಯದ ಬಳಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನೇಮಿಸಲಾಗಿದೆ.

ತೆಲಂಗಾಣ ವಿಧಾನಸಭೆಯ ಮತದಾನದ ಹಿಂದಿನ ದಿನ, ಅಂದರೆ ನವೆಂಬರ್‌ 29ರಂದು ರಾತ್ರಿ ನೀರಿನ ವಿಚಾರವಾಗಿ ಎರಡು ತೆಲುಗು ರಾಜ್ಯಗಳ ನಡುವೆ ಕಿತ್ತಾಟ ಶುರುವಾಗಿದೆ. 2014ರಲ್ಲಿ ತೆಲಂಗಾಣ ಪ್ರತ್ಯೇಖ ರಾಜ್ಯ ರಚನೆಯಾದ ಬಳಿಕ ಶುರುವಾದ ವಿವಾದ ಕಾನೂನಾತ್ಮಕ ಹೋರಾಟಗಳಿಗೆ ಮಾತ್ರ ಸೀಮಿತವಾಗಿ ಬೂದಿ ಮುಚ್ಚಿದ ಕೆಂಡದಂತಿತ್ತು. ಆದರೆ, ಈಗ ನೇರಾನೇರಾ ಜಗಳಕ್ಕೆ ಬಂದು ನಿಂತಿದೆ.

‘ನಮ್ಮ ಪಾಲಿನ ನೀರು ಕೊಡಿ’ ಎಂದು ಆಗಾಗ ತೆಲಂಗಾಣ ಸರ್ಕಾರಕ್ಕೆ ಒತ್ತಡ ಹೇರುತ್ತಿದ್ದ ಆಂಧ್ರ ಪ್ರದೇಶ ಸರ್ಕಾರ, ನವೆಂಬರ್‌ 29ರಂದು ಮಧ್ಯರಾತ್ರಿ ನೀರಾವರಿ ನಿಗಮದ ಅಧಿಕಾರಿಗಳು ಮತ್ತು ಸುಮಾರು 400 ಮಂದಿ ಪೊಲೀಸರನ್ನು ಅಣೆಕಟ್ಟೆಗೆ ನುಗ್ಗಿಸಿತ್ತು. ಪೊಲೀಸ್ ಸರ್ಪಗಾವಲಿನಲ್ಲಿ ಅಣೆಕಟ್ಟೆಯನ್ನು ಭಾಗಶಃ ವಶಕ್ಕೆ ಪಡೆದ ಆಂಧ್ರ ಪ್ರದೇಶದ ಅಧಿಕಾರಿಗಳು, ಜಲಾಶಯದ ಬಲ ಕಾಲುವೆಯ ಮೂಲಕ ತಮ್ಮ ರಾಜ್ಯಕ್ಕೆ ನೀರು ಹರಿಸಿಕೊಂಡಿದ್ದಾರೆ. ಈ ವೇಳೆ ತೆಲಂಗಾಣದ ಪೊಲೀಸರು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದರು. ಕೆಲ ಪೊಲೀಸರು ಮತ್ತು ಅಧಿಕಾರಿಗಳು ಅಣೆಕಟ್ಟೆಯ ಬಳಿ ತೆರಳಿದರೂ, ಭಾರೀ ಸಂಖ್ಯೆಯಲ್ಲಿದ್ದ ಆಂಧ್ರದ ಪಡೆಯನ್ನು ಎದುರಿಸಲು ಅವರಿಗೆ ಸಾಧ್ಯವಾಗಲಿಲ್ಲ. ಹಾಗಾಗಿ, ವಾಪಸ್ ಬಂಧಿದ್ದಾರೆ.

ತೆಲಂಗಾಣ ಸರ್ಕಾರ ಮತ್ತು ಅದರ ಅಧಿಕಾರಿಗಳು ಚುನಾಣೆಯಲ್ಲಿ ಮುಳುಗಿರುವಾಗ, ನವೆಂಬರ್ 30 ರಿಂದ ಡಿಸೆಂಬರ್ 1 (ನಿನ್ನೆ) ಮಧ್ಯಾಹ್ನದವರೆಗೆ ಆಂಧ್ರದ ಅಧಿಕಾರಿಗಳು ತಮಗೆ ಬೇಕಾದಷ್ಟು ನೀರನ್ನು ಜಲಾಶಯದಿಂದ ಹರಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಕೇಂದ್ರ ಸರ್ಕಾರ ಎರಡೂ ರಾಜ್ಯಗಳ ಜೊತೆ ಶುಕ್ರವಾರ ಸಭೆ ನಡೆಸಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು, ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ಕೃಷ್ಣಾ ನದಿ ನೀರು ನಿರ್ವಹಣಾ ಮಂಡಳಿ (ಕೆಆರ್‌ಎಂಬಿ) ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಅಣೆಕಟ್ಟೆ ಬಳಿ ನವೆಂಬರ್ 29ಕ್ಕೂ ಮೊದಲು ಇದ್ದ ಸ್ಥಿತಿಯನ್ನು ಪುನಃಸ್ಥಾಪಿಸಲು ಆಂಧ್ರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವರದಿಗಳ ಪ್ರಕಾರ, ಕೃಷ್ಣಾ ನದಿ ನೀರು ನಿರ್ವಹಣಾ ಮಂಡಳಿಯ ಸದಸ್ಯರಾಗಿರುವ ಎರಡೂ ರಾಜ್ಯಗಳು ತಾತ್ಕಾಲಿಕವಾಗಿ ಅಣೆಕಟ್ಟಿನ ಭದ್ರತೆಗಾಗಿ ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲು ಒಪ್ಪಿಕೊಂಡಿವೆ. ತೆಲಂಗಾಣದ ಮುಖ್ಯ ಕಾರ್ಯದರ್ಶಿ ಎ. ಸಂತಿ ಕುಮಾರಿ ಅವರು ನವೆಂಬರ್ 29 ರ ರಾತ್ರಿ ಅಣೆಕಟ್ಟೆಯ ಮೇಲೆ ಸುಮಾರು 500 ಮಂದಿ ಆಂಧ್ರ ಪೊಲೀಸ್ ಸಿಬ್ಬಂದಿ ಗುಂಪು ಗುಂಪಾಗಿ ಬಂದು ಕ್ಲೋಸ್-ಸರ್ಕ್ಯೂಟ್ ಟೆಲಿವಿಷನ್ ಕ್ಯಾಮರಾಗಳನ್ನು ನಾಶಪಡಿಸಿದ್ದಾರೆ ಎಂದು ಸಭೆಯಲ್ಲಿ ಆರೋಪಿಸಿದ್ದಾರೆ.

ಆಂಧ್ರದ ಅಧಿಕಾರಿಗಳು ಏಕಪಕ್ಷೀಯವಾಗಿ ಅಣೆಕಟ್ಟೆಯ ಹೆಡ್ ರೆಗ್ಯುಲೇಟರ್ ಸ್ಲೂಸ್‌ಗಳನ್ನು ತೆರೆದು 5,000 ಕ್ಯೂಸೆಕ್‌ಗೂ ಹೆಚ್ಚು ನೀರು ಅವರ ರಾಜ್ಯಕ್ಕೆ ಹರಿಸುತ್ತಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯ ಮತದಾನದ ಕರ್ತವ್ಯದಲ್ಲಿ ಪೊಲೀಸರು ಸೇರಿದಂತೆ ಸಂಪೂರ್ಣ ಆಡಳಿತ ಯಂತ್ರ ತೊಡಗಿದ್ದಾಗ ಆಂಧ್ರ ವರ್ತನೆ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಸೃಷ್ಟಿಸಿದೆ. ಆಂಧ್ರ ಎರಡನೇ ಬಾರಿಗೆ ಇಂತಹ ಮಿತಿ ಮೀರಿದ ವರ್ತನೆ ಮಾಡುತ್ತಿದೆ ಎಂದು ಸಂತಿ ಕುಮಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಆಂಧ್ರದ ಅಧಿಕಾರಿಗಳು, ಅಣೆಕಟ್ಟೆಯ ಅರ್ಧ ಭಾಗ ನಮಗೆ ಸೇರಿದ್ದು. ಇಲ್ಲಿ ಯಾವಾಗ ಬೇಕಾದರು ಪೊಲೀಸರನ್ನು ನಿಯೋಜಿಸಲು ಮತ್ತು ನೀರು ಹರಿಸಿಕೊಳ್ಳಲು ನಮಗೆ ಹಕ್ಕಿದೆ ಎಂದಿದ್ದಾರೆ. ಶುಕ್ರವಾರ ಆಂಧ್ರ ಸರ್ಕಾರಕ್ಕೆ ನೋಟಿಸ್ ನೀಡಿರುವ ಕೇಂದ್ರ ಜಲಶಕ್ತಿ ಸಚಿವಾಲಯ, ತಕ್ಷಣ ಅಣೆಕಟ್ಟೆಯ ಗೇಟ್ ಬಂದ್ ಮಾಡಿ ನೀರು ಹರಿಸುವುದನ್ನು ನಿಲ್ಲಿಸುವಂತೆ ಸೂಚಿಸಿದೆ.

ನಾಗಾರ್ಜುನ ಸಾಗರದಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ 512 ಟಿಎಂಸಿ ಮತ್ತು 299 ಟಿಎಂಸಿ ನೀರನ್ನು ತಾತ್ಕಾಲಿಕ ಆಧಾರದ ಮೇಲೆ ಹಂಚಿಕೊಳ್ಳುತ್ತಿವೆ. ತೆಲಂಗಾಣವು 2020-21 ರಿಂದ 50% ನೀರಿನ ಹಂಚಿಕೆಗೆ ಒತ್ತಾಯಿಸುತ್ತಿದೆ. ಅವಿಭಜಿತ ಆಂಧ್ರಪ್ರದೇಶದ ವಿಭಜನೆಯ ದಿನಾಂಕದಿಂದ, ಶ್ರೀಶೈಲಂ ಡ್ಯಾಂ ನಿರ್ವಹಣೆಯನ್ನು ಆಂಧ್ರ ಪ್ರದೇಶ ಮತ್ತು ನಾಗಾರ್ಜುನ ಸಾಗರದ ನಿರ್ವಹಣೆಯನ್ನು ತೆಲಂಗಾಣಕ್ಕೆ ವಹಿಸಲಾಗಿದೆ.

ಇದನ್ನೂ ಓದಿ : 10 ವರ್ಷಗಳಲ್ಲಿ ಶೇ.50 ಮಹಿಳಾ ಮುಖ್ಯಮಂತ್ರಿ ಕಾಂಗ್ರೆಸ್ ಗುರಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...