Homeಮುಖಪುಟನಾಗಾರ್ಜುನ ಸಾಗರಕ್ಕಾಗಿ ಆಂಧ್ರ, ತೆಲಂಗಾಣ ಕಿತ್ತಾಟ: ಜಲಾಶಯದ ಬಳಿ ಸಿಆರ್‌ಪಿಎಫ್ ನಿಯೋಜನೆ

ನಾಗಾರ್ಜುನ ಸಾಗರಕ್ಕಾಗಿ ಆಂಧ್ರ, ತೆಲಂಗಾಣ ಕಿತ್ತಾಟ: ಜಲಾಶಯದ ಬಳಿ ಸಿಆರ್‌ಪಿಎಫ್ ನಿಯೋಜನೆ

- Advertisement -
- Advertisement -

ದೇಶದ ಪ್ರಮುಖ ಜಲಾಶಯಗಳಲ್ಲಿ ಒಂದಾದ ನಾಗಾರ್ಜುನ ಸಾಗರ ಅಣೆಕಟ್ಟೆಯ ನೀರಿನ ವಿಚಾರವಾಗಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ನಡುವೆ ಏರ್ಪಟ್ಟಿರುವ ಕಾಳಗ ತಾರಕಕ್ಕೇರಿದ್ದು, ಜಲಾಶಯದ ಬಳಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನೇಮಿಸಲಾಗಿದೆ.

ತೆಲಂಗಾಣ ವಿಧಾನಸಭೆಯ ಮತದಾನದ ಹಿಂದಿನ ದಿನ, ಅಂದರೆ ನವೆಂಬರ್‌ 29ರಂದು ರಾತ್ರಿ ನೀರಿನ ವಿಚಾರವಾಗಿ ಎರಡು ತೆಲುಗು ರಾಜ್ಯಗಳ ನಡುವೆ ಕಿತ್ತಾಟ ಶುರುವಾಗಿದೆ. 2014ರಲ್ಲಿ ತೆಲಂಗಾಣ ಪ್ರತ್ಯೇಖ ರಾಜ್ಯ ರಚನೆಯಾದ ಬಳಿಕ ಶುರುವಾದ ವಿವಾದ ಕಾನೂನಾತ್ಮಕ ಹೋರಾಟಗಳಿಗೆ ಮಾತ್ರ ಸೀಮಿತವಾಗಿ ಬೂದಿ ಮುಚ್ಚಿದ ಕೆಂಡದಂತಿತ್ತು. ಆದರೆ, ಈಗ ನೇರಾನೇರಾ ಜಗಳಕ್ಕೆ ಬಂದು ನಿಂತಿದೆ.

‘ನಮ್ಮ ಪಾಲಿನ ನೀರು ಕೊಡಿ’ ಎಂದು ಆಗಾಗ ತೆಲಂಗಾಣ ಸರ್ಕಾರಕ್ಕೆ ಒತ್ತಡ ಹೇರುತ್ತಿದ್ದ ಆಂಧ್ರ ಪ್ರದೇಶ ಸರ್ಕಾರ, ನವೆಂಬರ್‌ 29ರಂದು ಮಧ್ಯರಾತ್ರಿ ನೀರಾವರಿ ನಿಗಮದ ಅಧಿಕಾರಿಗಳು ಮತ್ತು ಸುಮಾರು 400 ಮಂದಿ ಪೊಲೀಸರನ್ನು ಅಣೆಕಟ್ಟೆಗೆ ನುಗ್ಗಿಸಿತ್ತು. ಪೊಲೀಸ್ ಸರ್ಪಗಾವಲಿನಲ್ಲಿ ಅಣೆಕಟ್ಟೆಯನ್ನು ಭಾಗಶಃ ವಶಕ್ಕೆ ಪಡೆದ ಆಂಧ್ರ ಪ್ರದೇಶದ ಅಧಿಕಾರಿಗಳು, ಜಲಾಶಯದ ಬಲ ಕಾಲುವೆಯ ಮೂಲಕ ತಮ್ಮ ರಾಜ್ಯಕ್ಕೆ ನೀರು ಹರಿಸಿಕೊಂಡಿದ್ದಾರೆ. ಈ ವೇಳೆ ತೆಲಂಗಾಣದ ಪೊಲೀಸರು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದರು. ಕೆಲ ಪೊಲೀಸರು ಮತ್ತು ಅಧಿಕಾರಿಗಳು ಅಣೆಕಟ್ಟೆಯ ಬಳಿ ತೆರಳಿದರೂ, ಭಾರೀ ಸಂಖ್ಯೆಯಲ್ಲಿದ್ದ ಆಂಧ್ರದ ಪಡೆಯನ್ನು ಎದುರಿಸಲು ಅವರಿಗೆ ಸಾಧ್ಯವಾಗಲಿಲ್ಲ. ಹಾಗಾಗಿ, ವಾಪಸ್ ಬಂಧಿದ್ದಾರೆ.

ತೆಲಂಗಾಣ ಸರ್ಕಾರ ಮತ್ತು ಅದರ ಅಧಿಕಾರಿಗಳು ಚುನಾಣೆಯಲ್ಲಿ ಮುಳುಗಿರುವಾಗ, ನವೆಂಬರ್ 30 ರಿಂದ ಡಿಸೆಂಬರ್ 1 (ನಿನ್ನೆ) ಮಧ್ಯಾಹ್ನದವರೆಗೆ ಆಂಧ್ರದ ಅಧಿಕಾರಿಗಳು ತಮಗೆ ಬೇಕಾದಷ್ಟು ನೀರನ್ನು ಜಲಾಶಯದಿಂದ ಹರಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಕೇಂದ್ರ ಸರ್ಕಾರ ಎರಡೂ ರಾಜ್ಯಗಳ ಜೊತೆ ಶುಕ್ರವಾರ ಸಭೆ ನಡೆಸಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು, ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ಕೃಷ್ಣಾ ನದಿ ನೀರು ನಿರ್ವಹಣಾ ಮಂಡಳಿ (ಕೆಆರ್‌ಎಂಬಿ) ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಅಣೆಕಟ್ಟೆ ಬಳಿ ನವೆಂಬರ್ 29ಕ್ಕೂ ಮೊದಲು ಇದ್ದ ಸ್ಥಿತಿಯನ್ನು ಪುನಃಸ್ಥಾಪಿಸಲು ಆಂಧ್ರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವರದಿಗಳ ಪ್ರಕಾರ, ಕೃಷ್ಣಾ ನದಿ ನೀರು ನಿರ್ವಹಣಾ ಮಂಡಳಿಯ ಸದಸ್ಯರಾಗಿರುವ ಎರಡೂ ರಾಜ್ಯಗಳು ತಾತ್ಕಾಲಿಕವಾಗಿ ಅಣೆಕಟ್ಟಿನ ಭದ್ರತೆಗಾಗಿ ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲು ಒಪ್ಪಿಕೊಂಡಿವೆ. ತೆಲಂಗಾಣದ ಮುಖ್ಯ ಕಾರ್ಯದರ್ಶಿ ಎ. ಸಂತಿ ಕುಮಾರಿ ಅವರು ನವೆಂಬರ್ 29 ರ ರಾತ್ರಿ ಅಣೆಕಟ್ಟೆಯ ಮೇಲೆ ಸುಮಾರು 500 ಮಂದಿ ಆಂಧ್ರ ಪೊಲೀಸ್ ಸಿಬ್ಬಂದಿ ಗುಂಪು ಗುಂಪಾಗಿ ಬಂದು ಕ್ಲೋಸ್-ಸರ್ಕ್ಯೂಟ್ ಟೆಲಿವಿಷನ್ ಕ್ಯಾಮರಾಗಳನ್ನು ನಾಶಪಡಿಸಿದ್ದಾರೆ ಎಂದು ಸಭೆಯಲ್ಲಿ ಆರೋಪಿಸಿದ್ದಾರೆ.

ಆಂಧ್ರದ ಅಧಿಕಾರಿಗಳು ಏಕಪಕ್ಷೀಯವಾಗಿ ಅಣೆಕಟ್ಟೆಯ ಹೆಡ್ ರೆಗ್ಯುಲೇಟರ್ ಸ್ಲೂಸ್‌ಗಳನ್ನು ತೆರೆದು 5,000 ಕ್ಯೂಸೆಕ್‌ಗೂ ಹೆಚ್ಚು ನೀರು ಅವರ ರಾಜ್ಯಕ್ಕೆ ಹರಿಸುತ್ತಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯ ಮತದಾನದ ಕರ್ತವ್ಯದಲ್ಲಿ ಪೊಲೀಸರು ಸೇರಿದಂತೆ ಸಂಪೂರ್ಣ ಆಡಳಿತ ಯಂತ್ರ ತೊಡಗಿದ್ದಾಗ ಆಂಧ್ರ ವರ್ತನೆ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಸೃಷ್ಟಿಸಿದೆ. ಆಂಧ್ರ ಎರಡನೇ ಬಾರಿಗೆ ಇಂತಹ ಮಿತಿ ಮೀರಿದ ವರ್ತನೆ ಮಾಡುತ್ತಿದೆ ಎಂದು ಸಂತಿ ಕುಮಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಆಂಧ್ರದ ಅಧಿಕಾರಿಗಳು, ಅಣೆಕಟ್ಟೆಯ ಅರ್ಧ ಭಾಗ ನಮಗೆ ಸೇರಿದ್ದು. ಇಲ್ಲಿ ಯಾವಾಗ ಬೇಕಾದರು ಪೊಲೀಸರನ್ನು ನಿಯೋಜಿಸಲು ಮತ್ತು ನೀರು ಹರಿಸಿಕೊಳ್ಳಲು ನಮಗೆ ಹಕ್ಕಿದೆ ಎಂದಿದ್ದಾರೆ. ಶುಕ್ರವಾರ ಆಂಧ್ರ ಸರ್ಕಾರಕ್ಕೆ ನೋಟಿಸ್ ನೀಡಿರುವ ಕೇಂದ್ರ ಜಲಶಕ್ತಿ ಸಚಿವಾಲಯ, ತಕ್ಷಣ ಅಣೆಕಟ್ಟೆಯ ಗೇಟ್ ಬಂದ್ ಮಾಡಿ ನೀರು ಹರಿಸುವುದನ್ನು ನಿಲ್ಲಿಸುವಂತೆ ಸೂಚಿಸಿದೆ.

ನಾಗಾರ್ಜುನ ಸಾಗರದಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ 512 ಟಿಎಂಸಿ ಮತ್ತು 299 ಟಿಎಂಸಿ ನೀರನ್ನು ತಾತ್ಕಾಲಿಕ ಆಧಾರದ ಮೇಲೆ ಹಂಚಿಕೊಳ್ಳುತ್ತಿವೆ. ತೆಲಂಗಾಣವು 2020-21 ರಿಂದ 50% ನೀರಿನ ಹಂಚಿಕೆಗೆ ಒತ್ತಾಯಿಸುತ್ತಿದೆ. ಅವಿಭಜಿತ ಆಂಧ್ರಪ್ರದೇಶದ ವಿಭಜನೆಯ ದಿನಾಂಕದಿಂದ, ಶ್ರೀಶೈಲಂ ಡ್ಯಾಂ ನಿರ್ವಹಣೆಯನ್ನು ಆಂಧ್ರ ಪ್ರದೇಶ ಮತ್ತು ನಾಗಾರ್ಜುನ ಸಾಗರದ ನಿರ್ವಹಣೆಯನ್ನು ತೆಲಂಗಾಣಕ್ಕೆ ವಹಿಸಲಾಗಿದೆ.

ಇದನ್ನೂ ಓದಿ : 10 ವರ್ಷಗಳಲ್ಲಿ ಶೇ.50 ಮಹಿಳಾ ಮುಖ್ಯಮಂತ್ರಿ ಕಾಂಗ್ರೆಸ್ ಗುರಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...