Homeಮುಖಪುಟನಾಗಾರ್ಜುನ ಸಾಗರಕ್ಕಾಗಿ ಆಂಧ್ರ, ತೆಲಂಗಾಣ ಕಿತ್ತಾಟ: ಜಲಾಶಯದ ಬಳಿ ಸಿಆರ್‌ಪಿಎಫ್ ನಿಯೋಜನೆ

ನಾಗಾರ್ಜುನ ಸಾಗರಕ್ಕಾಗಿ ಆಂಧ್ರ, ತೆಲಂಗಾಣ ಕಿತ್ತಾಟ: ಜಲಾಶಯದ ಬಳಿ ಸಿಆರ್‌ಪಿಎಫ್ ನಿಯೋಜನೆ

- Advertisement -
- Advertisement -

ದೇಶದ ಪ್ರಮುಖ ಜಲಾಶಯಗಳಲ್ಲಿ ಒಂದಾದ ನಾಗಾರ್ಜುನ ಸಾಗರ ಅಣೆಕಟ್ಟೆಯ ನೀರಿನ ವಿಚಾರವಾಗಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ನಡುವೆ ಏರ್ಪಟ್ಟಿರುವ ಕಾಳಗ ತಾರಕಕ್ಕೇರಿದ್ದು, ಜಲಾಶಯದ ಬಳಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನೇಮಿಸಲಾಗಿದೆ.

ತೆಲಂಗಾಣ ವಿಧಾನಸಭೆಯ ಮತದಾನದ ಹಿಂದಿನ ದಿನ, ಅಂದರೆ ನವೆಂಬರ್‌ 29ರಂದು ರಾತ್ರಿ ನೀರಿನ ವಿಚಾರವಾಗಿ ಎರಡು ತೆಲುಗು ರಾಜ್ಯಗಳ ನಡುವೆ ಕಿತ್ತಾಟ ಶುರುವಾಗಿದೆ. 2014ರಲ್ಲಿ ತೆಲಂಗಾಣ ಪ್ರತ್ಯೇಖ ರಾಜ್ಯ ರಚನೆಯಾದ ಬಳಿಕ ಶುರುವಾದ ವಿವಾದ ಕಾನೂನಾತ್ಮಕ ಹೋರಾಟಗಳಿಗೆ ಮಾತ್ರ ಸೀಮಿತವಾಗಿ ಬೂದಿ ಮುಚ್ಚಿದ ಕೆಂಡದಂತಿತ್ತು. ಆದರೆ, ಈಗ ನೇರಾನೇರಾ ಜಗಳಕ್ಕೆ ಬಂದು ನಿಂತಿದೆ.

‘ನಮ್ಮ ಪಾಲಿನ ನೀರು ಕೊಡಿ’ ಎಂದು ಆಗಾಗ ತೆಲಂಗಾಣ ಸರ್ಕಾರಕ್ಕೆ ಒತ್ತಡ ಹೇರುತ್ತಿದ್ದ ಆಂಧ್ರ ಪ್ರದೇಶ ಸರ್ಕಾರ, ನವೆಂಬರ್‌ 29ರಂದು ಮಧ್ಯರಾತ್ರಿ ನೀರಾವರಿ ನಿಗಮದ ಅಧಿಕಾರಿಗಳು ಮತ್ತು ಸುಮಾರು 400 ಮಂದಿ ಪೊಲೀಸರನ್ನು ಅಣೆಕಟ್ಟೆಗೆ ನುಗ್ಗಿಸಿತ್ತು. ಪೊಲೀಸ್ ಸರ್ಪಗಾವಲಿನಲ್ಲಿ ಅಣೆಕಟ್ಟೆಯನ್ನು ಭಾಗಶಃ ವಶಕ್ಕೆ ಪಡೆದ ಆಂಧ್ರ ಪ್ರದೇಶದ ಅಧಿಕಾರಿಗಳು, ಜಲಾಶಯದ ಬಲ ಕಾಲುವೆಯ ಮೂಲಕ ತಮ್ಮ ರಾಜ್ಯಕ್ಕೆ ನೀರು ಹರಿಸಿಕೊಂಡಿದ್ದಾರೆ. ಈ ವೇಳೆ ತೆಲಂಗಾಣದ ಪೊಲೀಸರು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದರು. ಕೆಲ ಪೊಲೀಸರು ಮತ್ತು ಅಧಿಕಾರಿಗಳು ಅಣೆಕಟ್ಟೆಯ ಬಳಿ ತೆರಳಿದರೂ, ಭಾರೀ ಸಂಖ್ಯೆಯಲ್ಲಿದ್ದ ಆಂಧ್ರದ ಪಡೆಯನ್ನು ಎದುರಿಸಲು ಅವರಿಗೆ ಸಾಧ್ಯವಾಗಲಿಲ್ಲ. ಹಾಗಾಗಿ, ವಾಪಸ್ ಬಂಧಿದ್ದಾರೆ.

ತೆಲಂಗಾಣ ಸರ್ಕಾರ ಮತ್ತು ಅದರ ಅಧಿಕಾರಿಗಳು ಚುನಾಣೆಯಲ್ಲಿ ಮುಳುಗಿರುವಾಗ, ನವೆಂಬರ್ 30 ರಿಂದ ಡಿಸೆಂಬರ್ 1 (ನಿನ್ನೆ) ಮಧ್ಯಾಹ್ನದವರೆಗೆ ಆಂಧ್ರದ ಅಧಿಕಾರಿಗಳು ತಮಗೆ ಬೇಕಾದಷ್ಟು ನೀರನ್ನು ಜಲಾಶಯದಿಂದ ಹರಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಕೇಂದ್ರ ಸರ್ಕಾರ ಎರಡೂ ರಾಜ್ಯಗಳ ಜೊತೆ ಶುಕ್ರವಾರ ಸಭೆ ನಡೆಸಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು, ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ಕೃಷ್ಣಾ ನದಿ ನೀರು ನಿರ್ವಹಣಾ ಮಂಡಳಿ (ಕೆಆರ್‌ಎಂಬಿ) ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಅಣೆಕಟ್ಟೆ ಬಳಿ ನವೆಂಬರ್ 29ಕ್ಕೂ ಮೊದಲು ಇದ್ದ ಸ್ಥಿತಿಯನ್ನು ಪುನಃಸ್ಥಾಪಿಸಲು ಆಂಧ್ರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವರದಿಗಳ ಪ್ರಕಾರ, ಕೃಷ್ಣಾ ನದಿ ನೀರು ನಿರ್ವಹಣಾ ಮಂಡಳಿಯ ಸದಸ್ಯರಾಗಿರುವ ಎರಡೂ ರಾಜ್ಯಗಳು ತಾತ್ಕಾಲಿಕವಾಗಿ ಅಣೆಕಟ್ಟಿನ ಭದ್ರತೆಗಾಗಿ ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲು ಒಪ್ಪಿಕೊಂಡಿವೆ. ತೆಲಂಗಾಣದ ಮುಖ್ಯ ಕಾರ್ಯದರ್ಶಿ ಎ. ಸಂತಿ ಕುಮಾರಿ ಅವರು ನವೆಂಬರ್ 29 ರ ರಾತ್ರಿ ಅಣೆಕಟ್ಟೆಯ ಮೇಲೆ ಸುಮಾರು 500 ಮಂದಿ ಆಂಧ್ರ ಪೊಲೀಸ್ ಸಿಬ್ಬಂದಿ ಗುಂಪು ಗುಂಪಾಗಿ ಬಂದು ಕ್ಲೋಸ್-ಸರ್ಕ್ಯೂಟ್ ಟೆಲಿವಿಷನ್ ಕ್ಯಾಮರಾಗಳನ್ನು ನಾಶಪಡಿಸಿದ್ದಾರೆ ಎಂದು ಸಭೆಯಲ್ಲಿ ಆರೋಪಿಸಿದ್ದಾರೆ.

ಆಂಧ್ರದ ಅಧಿಕಾರಿಗಳು ಏಕಪಕ್ಷೀಯವಾಗಿ ಅಣೆಕಟ್ಟೆಯ ಹೆಡ್ ರೆಗ್ಯುಲೇಟರ್ ಸ್ಲೂಸ್‌ಗಳನ್ನು ತೆರೆದು 5,000 ಕ್ಯೂಸೆಕ್‌ಗೂ ಹೆಚ್ಚು ನೀರು ಅವರ ರಾಜ್ಯಕ್ಕೆ ಹರಿಸುತ್ತಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯ ಮತದಾನದ ಕರ್ತವ್ಯದಲ್ಲಿ ಪೊಲೀಸರು ಸೇರಿದಂತೆ ಸಂಪೂರ್ಣ ಆಡಳಿತ ಯಂತ್ರ ತೊಡಗಿದ್ದಾಗ ಆಂಧ್ರ ವರ್ತನೆ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಸೃಷ್ಟಿಸಿದೆ. ಆಂಧ್ರ ಎರಡನೇ ಬಾರಿಗೆ ಇಂತಹ ಮಿತಿ ಮೀರಿದ ವರ್ತನೆ ಮಾಡುತ್ತಿದೆ ಎಂದು ಸಂತಿ ಕುಮಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಆಂಧ್ರದ ಅಧಿಕಾರಿಗಳು, ಅಣೆಕಟ್ಟೆಯ ಅರ್ಧ ಭಾಗ ನಮಗೆ ಸೇರಿದ್ದು. ಇಲ್ಲಿ ಯಾವಾಗ ಬೇಕಾದರು ಪೊಲೀಸರನ್ನು ನಿಯೋಜಿಸಲು ಮತ್ತು ನೀರು ಹರಿಸಿಕೊಳ್ಳಲು ನಮಗೆ ಹಕ್ಕಿದೆ ಎಂದಿದ್ದಾರೆ. ಶುಕ್ರವಾರ ಆಂಧ್ರ ಸರ್ಕಾರಕ್ಕೆ ನೋಟಿಸ್ ನೀಡಿರುವ ಕೇಂದ್ರ ಜಲಶಕ್ತಿ ಸಚಿವಾಲಯ, ತಕ್ಷಣ ಅಣೆಕಟ್ಟೆಯ ಗೇಟ್ ಬಂದ್ ಮಾಡಿ ನೀರು ಹರಿಸುವುದನ್ನು ನಿಲ್ಲಿಸುವಂತೆ ಸೂಚಿಸಿದೆ.

ನಾಗಾರ್ಜುನ ಸಾಗರದಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ 512 ಟಿಎಂಸಿ ಮತ್ತು 299 ಟಿಎಂಸಿ ನೀರನ್ನು ತಾತ್ಕಾಲಿಕ ಆಧಾರದ ಮೇಲೆ ಹಂಚಿಕೊಳ್ಳುತ್ತಿವೆ. ತೆಲಂಗಾಣವು 2020-21 ರಿಂದ 50% ನೀರಿನ ಹಂಚಿಕೆಗೆ ಒತ್ತಾಯಿಸುತ್ತಿದೆ. ಅವಿಭಜಿತ ಆಂಧ್ರಪ್ರದೇಶದ ವಿಭಜನೆಯ ದಿನಾಂಕದಿಂದ, ಶ್ರೀಶೈಲಂ ಡ್ಯಾಂ ನಿರ್ವಹಣೆಯನ್ನು ಆಂಧ್ರ ಪ್ರದೇಶ ಮತ್ತು ನಾಗಾರ್ಜುನ ಸಾಗರದ ನಿರ್ವಹಣೆಯನ್ನು ತೆಲಂಗಾಣಕ್ಕೆ ವಹಿಸಲಾಗಿದೆ.

ಇದನ್ನೂ ಓದಿ : 10 ವರ್ಷಗಳಲ್ಲಿ ಶೇ.50 ಮಹಿಳಾ ಮುಖ್ಯಮಂತ್ರಿ ಕಾಂಗ್ರೆಸ್ ಗುರಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...