Homeಮುಖಪುಟನಾಗಾರ್ಜುನ ಸಾಗರಕ್ಕಾಗಿ ಆಂಧ್ರ, ತೆಲಂಗಾಣ ಕಿತ್ತಾಟ: ಜಲಾಶಯದ ಬಳಿ ಸಿಆರ್‌ಪಿಎಫ್ ನಿಯೋಜನೆ

ನಾಗಾರ್ಜುನ ಸಾಗರಕ್ಕಾಗಿ ಆಂಧ್ರ, ತೆಲಂಗಾಣ ಕಿತ್ತಾಟ: ಜಲಾಶಯದ ಬಳಿ ಸಿಆರ್‌ಪಿಎಫ್ ನಿಯೋಜನೆ

- Advertisement -
- Advertisement -

ದೇಶದ ಪ್ರಮುಖ ಜಲಾಶಯಗಳಲ್ಲಿ ಒಂದಾದ ನಾಗಾರ್ಜುನ ಸಾಗರ ಅಣೆಕಟ್ಟೆಯ ನೀರಿನ ವಿಚಾರವಾಗಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ನಡುವೆ ಏರ್ಪಟ್ಟಿರುವ ಕಾಳಗ ತಾರಕಕ್ಕೇರಿದ್ದು, ಜಲಾಶಯದ ಬಳಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನೇಮಿಸಲಾಗಿದೆ.

ತೆಲಂಗಾಣ ವಿಧಾನಸಭೆಯ ಮತದಾನದ ಹಿಂದಿನ ದಿನ, ಅಂದರೆ ನವೆಂಬರ್‌ 29ರಂದು ರಾತ್ರಿ ನೀರಿನ ವಿಚಾರವಾಗಿ ಎರಡು ತೆಲುಗು ರಾಜ್ಯಗಳ ನಡುವೆ ಕಿತ್ತಾಟ ಶುರುವಾಗಿದೆ. 2014ರಲ್ಲಿ ತೆಲಂಗಾಣ ಪ್ರತ್ಯೇಖ ರಾಜ್ಯ ರಚನೆಯಾದ ಬಳಿಕ ಶುರುವಾದ ವಿವಾದ ಕಾನೂನಾತ್ಮಕ ಹೋರಾಟಗಳಿಗೆ ಮಾತ್ರ ಸೀಮಿತವಾಗಿ ಬೂದಿ ಮುಚ್ಚಿದ ಕೆಂಡದಂತಿತ್ತು. ಆದರೆ, ಈಗ ನೇರಾನೇರಾ ಜಗಳಕ್ಕೆ ಬಂದು ನಿಂತಿದೆ.

‘ನಮ್ಮ ಪಾಲಿನ ನೀರು ಕೊಡಿ’ ಎಂದು ಆಗಾಗ ತೆಲಂಗಾಣ ಸರ್ಕಾರಕ್ಕೆ ಒತ್ತಡ ಹೇರುತ್ತಿದ್ದ ಆಂಧ್ರ ಪ್ರದೇಶ ಸರ್ಕಾರ, ನವೆಂಬರ್‌ 29ರಂದು ಮಧ್ಯರಾತ್ರಿ ನೀರಾವರಿ ನಿಗಮದ ಅಧಿಕಾರಿಗಳು ಮತ್ತು ಸುಮಾರು 400 ಮಂದಿ ಪೊಲೀಸರನ್ನು ಅಣೆಕಟ್ಟೆಗೆ ನುಗ್ಗಿಸಿತ್ತು. ಪೊಲೀಸ್ ಸರ್ಪಗಾವಲಿನಲ್ಲಿ ಅಣೆಕಟ್ಟೆಯನ್ನು ಭಾಗಶಃ ವಶಕ್ಕೆ ಪಡೆದ ಆಂಧ್ರ ಪ್ರದೇಶದ ಅಧಿಕಾರಿಗಳು, ಜಲಾಶಯದ ಬಲ ಕಾಲುವೆಯ ಮೂಲಕ ತಮ್ಮ ರಾಜ್ಯಕ್ಕೆ ನೀರು ಹರಿಸಿಕೊಂಡಿದ್ದಾರೆ. ಈ ವೇಳೆ ತೆಲಂಗಾಣದ ಪೊಲೀಸರು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದರು. ಕೆಲ ಪೊಲೀಸರು ಮತ್ತು ಅಧಿಕಾರಿಗಳು ಅಣೆಕಟ್ಟೆಯ ಬಳಿ ತೆರಳಿದರೂ, ಭಾರೀ ಸಂಖ್ಯೆಯಲ್ಲಿದ್ದ ಆಂಧ್ರದ ಪಡೆಯನ್ನು ಎದುರಿಸಲು ಅವರಿಗೆ ಸಾಧ್ಯವಾಗಲಿಲ್ಲ. ಹಾಗಾಗಿ, ವಾಪಸ್ ಬಂಧಿದ್ದಾರೆ.

ತೆಲಂಗಾಣ ಸರ್ಕಾರ ಮತ್ತು ಅದರ ಅಧಿಕಾರಿಗಳು ಚುನಾಣೆಯಲ್ಲಿ ಮುಳುಗಿರುವಾಗ, ನವೆಂಬರ್ 30 ರಿಂದ ಡಿಸೆಂಬರ್ 1 (ನಿನ್ನೆ) ಮಧ್ಯಾಹ್ನದವರೆಗೆ ಆಂಧ್ರದ ಅಧಿಕಾರಿಗಳು ತಮಗೆ ಬೇಕಾದಷ್ಟು ನೀರನ್ನು ಜಲಾಶಯದಿಂದ ಹರಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಕೇಂದ್ರ ಸರ್ಕಾರ ಎರಡೂ ರಾಜ್ಯಗಳ ಜೊತೆ ಶುಕ್ರವಾರ ಸಭೆ ನಡೆಸಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು, ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ಕೃಷ್ಣಾ ನದಿ ನೀರು ನಿರ್ವಹಣಾ ಮಂಡಳಿ (ಕೆಆರ್‌ಎಂಬಿ) ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಅಣೆಕಟ್ಟೆ ಬಳಿ ನವೆಂಬರ್ 29ಕ್ಕೂ ಮೊದಲು ಇದ್ದ ಸ್ಥಿತಿಯನ್ನು ಪುನಃಸ್ಥಾಪಿಸಲು ಆಂಧ್ರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವರದಿಗಳ ಪ್ರಕಾರ, ಕೃಷ್ಣಾ ನದಿ ನೀರು ನಿರ್ವಹಣಾ ಮಂಡಳಿಯ ಸದಸ್ಯರಾಗಿರುವ ಎರಡೂ ರಾಜ್ಯಗಳು ತಾತ್ಕಾಲಿಕವಾಗಿ ಅಣೆಕಟ್ಟಿನ ಭದ್ರತೆಗಾಗಿ ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲು ಒಪ್ಪಿಕೊಂಡಿವೆ. ತೆಲಂಗಾಣದ ಮುಖ್ಯ ಕಾರ್ಯದರ್ಶಿ ಎ. ಸಂತಿ ಕುಮಾರಿ ಅವರು ನವೆಂಬರ್ 29 ರ ರಾತ್ರಿ ಅಣೆಕಟ್ಟೆಯ ಮೇಲೆ ಸುಮಾರು 500 ಮಂದಿ ಆಂಧ್ರ ಪೊಲೀಸ್ ಸಿಬ್ಬಂದಿ ಗುಂಪು ಗುಂಪಾಗಿ ಬಂದು ಕ್ಲೋಸ್-ಸರ್ಕ್ಯೂಟ್ ಟೆಲಿವಿಷನ್ ಕ್ಯಾಮರಾಗಳನ್ನು ನಾಶಪಡಿಸಿದ್ದಾರೆ ಎಂದು ಸಭೆಯಲ್ಲಿ ಆರೋಪಿಸಿದ್ದಾರೆ.

ಆಂಧ್ರದ ಅಧಿಕಾರಿಗಳು ಏಕಪಕ್ಷೀಯವಾಗಿ ಅಣೆಕಟ್ಟೆಯ ಹೆಡ್ ರೆಗ್ಯುಲೇಟರ್ ಸ್ಲೂಸ್‌ಗಳನ್ನು ತೆರೆದು 5,000 ಕ್ಯೂಸೆಕ್‌ಗೂ ಹೆಚ್ಚು ನೀರು ಅವರ ರಾಜ್ಯಕ್ಕೆ ಹರಿಸುತ್ತಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯ ಮತದಾನದ ಕರ್ತವ್ಯದಲ್ಲಿ ಪೊಲೀಸರು ಸೇರಿದಂತೆ ಸಂಪೂರ್ಣ ಆಡಳಿತ ಯಂತ್ರ ತೊಡಗಿದ್ದಾಗ ಆಂಧ್ರ ವರ್ತನೆ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಸೃಷ್ಟಿಸಿದೆ. ಆಂಧ್ರ ಎರಡನೇ ಬಾರಿಗೆ ಇಂತಹ ಮಿತಿ ಮೀರಿದ ವರ್ತನೆ ಮಾಡುತ್ತಿದೆ ಎಂದು ಸಂತಿ ಕುಮಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಆಂಧ್ರದ ಅಧಿಕಾರಿಗಳು, ಅಣೆಕಟ್ಟೆಯ ಅರ್ಧ ಭಾಗ ನಮಗೆ ಸೇರಿದ್ದು. ಇಲ್ಲಿ ಯಾವಾಗ ಬೇಕಾದರು ಪೊಲೀಸರನ್ನು ನಿಯೋಜಿಸಲು ಮತ್ತು ನೀರು ಹರಿಸಿಕೊಳ್ಳಲು ನಮಗೆ ಹಕ್ಕಿದೆ ಎಂದಿದ್ದಾರೆ. ಶುಕ್ರವಾರ ಆಂಧ್ರ ಸರ್ಕಾರಕ್ಕೆ ನೋಟಿಸ್ ನೀಡಿರುವ ಕೇಂದ್ರ ಜಲಶಕ್ತಿ ಸಚಿವಾಲಯ, ತಕ್ಷಣ ಅಣೆಕಟ್ಟೆಯ ಗೇಟ್ ಬಂದ್ ಮಾಡಿ ನೀರು ಹರಿಸುವುದನ್ನು ನಿಲ್ಲಿಸುವಂತೆ ಸೂಚಿಸಿದೆ.

ನಾಗಾರ್ಜುನ ಸಾಗರದಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ 512 ಟಿಎಂಸಿ ಮತ್ತು 299 ಟಿಎಂಸಿ ನೀರನ್ನು ತಾತ್ಕಾಲಿಕ ಆಧಾರದ ಮೇಲೆ ಹಂಚಿಕೊಳ್ಳುತ್ತಿವೆ. ತೆಲಂಗಾಣವು 2020-21 ರಿಂದ 50% ನೀರಿನ ಹಂಚಿಕೆಗೆ ಒತ್ತಾಯಿಸುತ್ತಿದೆ. ಅವಿಭಜಿತ ಆಂಧ್ರಪ್ರದೇಶದ ವಿಭಜನೆಯ ದಿನಾಂಕದಿಂದ, ಶ್ರೀಶೈಲಂ ಡ್ಯಾಂ ನಿರ್ವಹಣೆಯನ್ನು ಆಂಧ್ರ ಪ್ರದೇಶ ಮತ್ತು ನಾಗಾರ್ಜುನ ಸಾಗರದ ನಿರ್ವಹಣೆಯನ್ನು ತೆಲಂಗಾಣಕ್ಕೆ ವಹಿಸಲಾಗಿದೆ.

ಇದನ್ನೂ ಓದಿ : 10 ವರ್ಷಗಳಲ್ಲಿ ಶೇ.50 ಮಹಿಳಾ ಮುಖ್ಯಮಂತ್ರಿ ಕಾಂಗ್ರೆಸ್ ಗುರಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...