Homeಮುಖಪುಟನಾಗಾರ್ಜುನ ಸಾಗರಕ್ಕಾಗಿ ಆಂಧ್ರ, ತೆಲಂಗಾಣ ಕಿತ್ತಾಟ: ಜಲಾಶಯದ ಬಳಿ ಸಿಆರ್‌ಪಿಎಫ್ ನಿಯೋಜನೆ

ನಾಗಾರ್ಜುನ ಸಾಗರಕ್ಕಾಗಿ ಆಂಧ್ರ, ತೆಲಂಗಾಣ ಕಿತ್ತಾಟ: ಜಲಾಶಯದ ಬಳಿ ಸಿಆರ್‌ಪಿಎಫ್ ನಿಯೋಜನೆ

- Advertisement -
- Advertisement -

ದೇಶದ ಪ್ರಮುಖ ಜಲಾಶಯಗಳಲ್ಲಿ ಒಂದಾದ ನಾಗಾರ್ಜುನ ಸಾಗರ ಅಣೆಕಟ್ಟೆಯ ನೀರಿನ ವಿಚಾರವಾಗಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ನಡುವೆ ಏರ್ಪಟ್ಟಿರುವ ಕಾಳಗ ತಾರಕಕ್ಕೇರಿದ್ದು, ಜಲಾಶಯದ ಬಳಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನೇಮಿಸಲಾಗಿದೆ.

ತೆಲಂಗಾಣ ವಿಧಾನಸಭೆಯ ಮತದಾನದ ಹಿಂದಿನ ದಿನ, ಅಂದರೆ ನವೆಂಬರ್‌ 29ರಂದು ರಾತ್ರಿ ನೀರಿನ ವಿಚಾರವಾಗಿ ಎರಡು ತೆಲುಗು ರಾಜ್ಯಗಳ ನಡುವೆ ಕಿತ್ತಾಟ ಶುರುವಾಗಿದೆ. 2014ರಲ್ಲಿ ತೆಲಂಗಾಣ ಪ್ರತ್ಯೇಖ ರಾಜ್ಯ ರಚನೆಯಾದ ಬಳಿಕ ಶುರುವಾದ ವಿವಾದ ಕಾನೂನಾತ್ಮಕ ಹೋರಾಟಗಳಿಗೆ ಮಾತ್ರ ಸೀಮಿತವಾಗಿ ಬೂದಿ ಮುಚ್ಚಿದ ಕೆಂಡದಂತಿತ್ತು. ಆದರೆ, ಈಗ ನೇರಾನೇರಾ ಜಗಳಕ್ಕೆ ಬಂದು ನಿಂತಿದೆ.

‘ನಮ್ಮ ಪಾಲಿನ ನೀರು ಕೊಡಿ’ ಎಂದು ಆಗಾಗ ತೆಲಂಗಾಣ ಸರ್ಕಾರಕ್ಕೆ ಒತ್ತಡ ಹೇರುತ್ತಿದ್ದ ಆಂಧ್ರ ಪ್ರದೇಶ ಸರ್ಕಾರ, ನವೆಂಬರ್‌ 29ರಂದು ಮಧ್ಯರಾತ್ರಿ ನೀರಾವರಿ ನಿಗಮದ ಅಧಿಕಾರಿಗಳು ಮತ್ತು ಸುಮಾರು 400 ಮಂದಿ ಪೊಲೀಸರನ್ನು ಅಣೆಕಟ್ಟೆಗೆ ನುಗ್ಗಿಸಿತ್ತು. ಪೊಲೀಸ್ ಸರ್ಪಗಾವಲಿನಲ್ಲಿ ಅಣೆಕಟ್ಟೆಯನ್ನು ಭಾಗಶಃ ವಶಕ್ಕೆ ಪಡೆದ ಆಂಧ್ರ ಪ್ರದೇಶದ ಅಧಿಕಾರಿಗಳು, ಜಲಾಶಯದ ಬಲ ಕಾಲುವೆಯ ಮೂಲಕ ತಮ್ಮ ರಾಜ್ಯಕ್ಕೆ ನೀರು ಹರಿಸಿಕೊಂಡಿದ್ದಾರೆ. ಈ ವೇಳೆ ತೆಲಂಗಾಣದ ಪೊಲೀಸರು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದರು. ಕೆಲ ಪೊಲೀಸರು ಮತ್ತು ಅಧಿಕಾರಿಗಳು ಅಣೆಕಟ್ಟೆಯ ಬಳಿ ತೆರಳಿದರೂ, ಭಾರೀ ಸಂಖ್ಯೆಯಲ್ಲಿದ್ದ ಆಂಧ್ರದ ಪಡೆಯನ್ನು ಎದುರಿಸಲು ಅವರಿಗೆ ಸಾಧ್ಯವಾಗಲಿಲ್ಲ. ಹಾಗಾಗಿ, ವಾಪಸ್ ಬಂಧಿದ್ದಾರೆ.

ತೆಲಂಗಾಣ ಸರ್ಕಾರ ಮತ್ತು ಅದರ ಅಧಿಕಾರಿಗಳು ಚುನಾಣೆಯಲ್ಲಿ ಮುಳುಗಿರುವಾಗ, ನವೆಂಬರ್ 30 ರಿಂದ ಡಿಸೆಂಬರ್ 1 (ನಿನ್ನೆ) ಮಧ್ಯಾಹ್ನದವರೆಗೆ ಆಂಧ್ರದ ಅಧಿಕಾರಿಗಳು ತಮಗೆ ಬೇಕಾದಷ್ಟು ನೀರನ್ನು ಜಲಾಶಯದಿಂದ ಹರಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಕೇಂದ್ರ ಸರ್ಕಾರ ಎರಡೂ ರಾಜ್ಯಗಳ ಜೊತೆ ಶುಕ್ರವಾರ ಸಭೆ ನಡೆಸಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು, ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ಕೃಷ್ಣಾ ನದಿ ನೀರು ನಿರ್ವಹಣಾ ಮಂಡಳಿ (ಕೆಆರ್‌ಎಂಬಿ) ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಅಣೆಕಟ್ಟೆ ಬಳಿ ನವೆಂಬರ್ 29ಕ್ಕೂ ಮೊದಲು ಇದ್ದ ಸ್ಥಿತಿಯನ್ನು ಪುನಃಸ್ಥಾಪಿಸಲು ಆಂಧ್ರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವರದಿಗಳ ಪ್ರಕಾರ, ಕೃಷ್ಣಾ ನದಿ ನೀರು ನಿರ್ವಹಣಾ ಮಂಡಳಿಯ ಸದಸ್ಯರಾಗಿರುವ ಎರಡೂ ರಾಜ್ಯಗಳು ತಾತ್ಕಾಲಿಕವಾಗಿ ಅಣೆಕಟ್ಟಿನ ಭದ್ರತೆಗಾಗಿ ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲು ಒಪ್ಪಿಕೊಂಡಿವೆ. ತೆಲಂಗಾಣದ ಮುಖ್ಯ ಕಾರ್ಯದರ್ಶಿ ಎ. ಸಂತಿ ಕುಮಾರಿ ಅವರು ನವೆಂಬರ್ 29 ರ ರಾತ್ರಿ ಅಣೆಕಟ್ಟೆಯ ಮೇಲೆ ಸುಮಾರು 500 ಮಂದಿ ಆಂಧ್ರ ಪೊಲೀಸ್ ಸಿಬ್ಬಂದಿ ಗುಂಪು ಗುಂಪಾಗಿ ಬಂದು ಕ್ಲೋಸ್-ಸರ್ಕ್ಯೂಟ್ ಟೆಲಿವಿಷನ್ ಕ್ಯಾಮರಾಗಳನ್ನು ನಾಶಪಡಿಸಿದ್ದಾರೆ ಎಂದು ಸಭೆಯಲ್ಲಿ ಆರೋಪಿಸಿದ್ದಾರೆ.

ಆಂಧ್ರದ ಅಧಿಕಾರಿಗಳು ಏಕಪಕ್ಷೀಯವಾಗಿ ಅಣೆಕಟ್ಟೆಯ ಹೆಡ್ ರೆಗ್ಯುಲೇಟರ್ ಸ್ಲೂಸ್‌ಗಳನ್ನು ತೆರೆದು 5,000 ಕ್ಯೂಸೆಕ್‌ಗೂ ಹೆಚ್ಚು ನೀರು ಅವರ ರಾಜ್ಯಕ್ಕೆ ಹರಿಸುತ್ತಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯ ಮತದಾನದ ಕರ್ತವ್ಯದಲ್ಲಿ ಪೊಲೀಸರು ಸೇರಿದಂತೆ ಸಂಪೂರ್ಣ ಆಡಳಿತ ಯಂತ್ರ ತೊಡಗಿದ್ದಾಗ ಆಂಧ್ರ ವರ್ತನೆ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಸೃಷ್ಟಿಸಿದೆ. ಆಂಧ್ರ ಎರಡನೇ ಬಾರಿಗೆ ಇಂತಹ ಮಿತಿ ಮೀರಿದ ವರ್ತನೆ ಮಾಡುತ್ತಿದೆ ಎಂದು ಸಂತಿ ಕುಮಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಆಂಧ್ರದ ಅಧಿಕಾರಿಗಳು, ಅಣೆಕಟ್ಟೆಯ ಅರ್ಧ ಭಾಗ ನಮಗೆ ಸೇರಿದ್ದು. ಇಲ್ಲಿ ಯಾವಾಗ ಬೇಕಾದರು ಪೊಲೀಸರನ್ನು ನಿಯೋಜಿಸಲು ಮತ್ತು ನೀರು ಹರಿಸಿಕೊಳ್ಳಲು ನಮಗೆ ಹಕ್ಕಿದೆ ಎಂದಿದ್ದಾರೆ. ಶುಕ್ರವಾರ ಆಂಧ್ರ ಸರ್ಕಾರಕ್ಕೆ ನೋಟಿಸ್ ನೀಡಿರುವ ಕೇಂದ್ರ ಜಲಶಕ್ತಿ ಸಚಿವಾಲಯ, ತಕ್ಷಣ ಅಣೆಕಟ್ಟೆಯ ಗೇಟ್ ಬಂದ್ ಮಾಡಿ ನೀರು ಹರಿಸುವುದನ್ನು ನಿಲ್ಲಿಸುವಂತೆ ಸೂಚಿಸಿದೆ.

ನಾಗಾರ್ಜುನ ಸಾಗರದಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ 512 ಟಿಎಂಸಿ ಮತ್ತು 299 ಟಿಎಂಸಿ ನೀರನ್ನು ತಾತ್ಕಾಲಿಕ ಆಧಾರದ ಮೇಲೆ ಹಂಚಿಕೊಳ್ಳುತ್ತಿವೆ. ತೆಲಂಗಾಣವು 2020-21 ರಿಂದ 50% ನೀರಿನ ಹಂಚಿಕೆಗೆ ಒತ್ತಾಯಿಸುತ್ತಿದೆ. ಅವಿಭಜಿತ ಆಂಧ್ರಪ್ರದೇಶದ ವಿಭಜನೆಯ ದಿನಾಂಕದಿಂದ, ಶ್ರೀಶೈಲಂ ಡ್ಯಾಂ ನಿರ್ವಹಣೆಯನ್ನು ಆಂಧ್ರ ಪ್ರದೇಶ ಮತ್ತು ನಾಗಾರ್ಜುನ ಸಾಗರದ ನಿರ್ವಹಣೆಯನ್ನು ತೆಲಂಗಾಣಕ್ಕೆ ವಹಿಸಲಾಗಿದೆ.

ಇದನ್ನೂ ಓದಿ : 10 ವರ್ಷಗಳಲ್ಲಿ ಶೇ.50 ಮಹಿಳಾ ಮುಖ್ಯಮಂತ್ರಿ ಕಾಂಗ್ರೆಸ್ ಗುರಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...