Homeಮುಖಪುಟಛತ್ತೀಸ್‌ಗಢದಲ್ಲಿ ಮತದಾನ: 2 ಕಡೆಗಳಲ್ಲಿ ಐಇಡಿ ಸ್ಪೋಟ; ಚುನಾವಣಾ ಸಿಬ್ಬಂದಿಗಳಿಗೆ ಗಾಯ

ಛತ್ತೀಸ್‌ಗಢದಲ್ಲಿ ಮತದಾನ: 2 ಕಡೆಗಳಲ್ಲಿ ಐಇಡಿ ಸ್ಪೋಟ; ಚುನಾವಣಾ ಸಿಬ್ಬಂದಿಗಳಿಗೆ ಗಾಯ

- Advertisement -
- Advertisement -

ಛತ್ತೀಸ್‌ಗಢದಲ್ಲಿ ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, 2 ದಿನಗಳಲ್ಲಿ ಎರಡು ಕಡೆಗಳಲ್ಲಿ ಸ್ಪೋಟ ಸಂಭವಿಸಿದೆ. ಸುಕ್ಮಾ ಜಿಲ್ಲೆಯಲ್ಲಿ ಇಂದು ಮತದಾನ ಆರಂಭವಾದ ಬೆನ್ನಲ್ಲೇ ಸುಧಾರಿತ ಸ್ಫೋಟಕ ಸಾಧನ ಐಇಡಿ ಸ್ಫೋಟ ಸಂಭವಿಸಿದ್ದು ಚುನಾವಣಾ ಕರ್ತವ್ಯದಲ್ಲಿದ್ದ ಸಿಆರ್‌ಪಿಎಫ್ ಯೋಧ ಗಾಯಗೊಂಡಿದ್ದಾರೆ.

ಸುಕ್ಮಾದ ಹಿರಿಯ ಪೊಲೀಸ್ ಅಧಿಕಾರಿ ಕಿರಣ್ ಚವಾಣ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಸ್ಪೋಟದಲ್ಲಿ ಗಾಯಗೊಂಡ ಯೋಧನನ್ನು ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಅವರು ಪ್ರಥಮ ಚಿಕಿತ್ಸೆ ಪಡೆದು ಸುರಕ್ಷಿತವಾಗಿದ್ದಾರೆ. ಜವಾನ ಕೋಬ್ರಾ ಬೆಟಾಲಿಯನ್‌ನವರಾಗಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎಂದು ಹೇಳಿದ್ದಾರೆ.

ಕೋಬ್ರಾ 206 ಮತ್ತು ಸಿಆರ್‌ಪಿಎಫ್ ಸಿಬ್ಬಂದಿ  ತೊಂಡಮಾರ್ಕಾದಿಂದ ಎಲ್ಮಗುಂದ ಗ್ರಾಮಕ್ಕೆ ಗಸ್ತು ತಿರುಗುತ್ತಿದ್ದಾಗ ನಕ್ಸಲರು ಅಳವಡಿಸಿದ್ದ ಐಇಡಿಯನ್ನು ತುಳಿದು ಕಾಲಿಗೆ ಗಾಯವಾಗಿದೆ. ಎರಡು ದಿನಗಳಲ್ಲಿ ಛತ್ತೀಸ್‌ಗಢದಲ್ಲಿ ನಡೆದ ಎರಡನೇ ಐಇಡಿ ಸ್ಫೋಟ ಇದಾಗಿದೆ.

ನಿನ್ನೆ ಕಂಕೇರ್‌ನಲ್ಲಿ ಐಇಡಿ ಸ್ಫೋಟದಲ್ಲಿ ಬಿಎಸ್‌ಎಫ್ ಪೇದೆ ಮತ್ತು ಚುನಾವಣಾ ಕರ್ತವ್ಯ ನಿರತ ತಂಡದ ಸದಸ್ಯರು ಗಾಯಗೊಂಡಿದ್ದರು. ಗಾಯಗೊಂಡ ಪೇದೆಯನ್ನು ಪ್ರಕಾಶ್ ಚಂದ್ ಎಂದು ಗುರುತಿಸಲಾಗಿದ್ದು, ಅವರ ಕಾಲುಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಛೋಟೆಪೇಥಿಯಾಗೆ ರವಾನಿಸಲಾಗಿದೆ.

ಛತ್ತೀಸ್‌ಗಢದಲ್ಲಿ ಅತಿ ಸೂಕ್ಷ್ಮವೆಂದು ಪರಿಗಣಿತ ಬಸ್ತಾರ್ ಕ್ಷೇತ್ರ ಸೇರಿದಂತೆ 20 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಸುಗಮ ಮತದಾನಕ್ಕೆ 20 ಕ್ಷೇತ್ರಗಳ ಸೂಕ್ಷ್ಮ ಪ್ರದೇಶಗಳಲ್ಲಿನ 600ಕ್ಕೂ ಹೆಚ್ಚು ಮತಗಟ್ಟೆಗಳಿಗೆ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಗೆ ನ. 17 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಡಿ. 3 ರಂದು ಇತರ ನಾಲ್ಕು ರಾಜ್ಯಗಳೊಂದಿಗೆ ಮತ ಎಣಿಕೆ ನಡೆಯಲಿದೆ.

ಇದನ್ನು ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...