Homeಮುಖಪುಟಛತ್ತೀಸ್‌ಗಢದಲ್ಲಿ ಮತದಾನ: 2 ಕಡೆಗಳಲ್ಲಿ ಐಇಡಿ ಸ್ಪೋಟ; ಚುನಾವಣಾ ಸಿಬ್ಬಂದಿಗಳಿಗೆ ಗಾಯ

ಛತ್ತೀಸ್‌ಗಢದಲ್ಲಿ ಮತದಾನ: 2 ಕಡೆಗಳಲ್ಲಿ ಐಇಡಿ ಸ್ಪೋಟ; ಚುನಾವಣಾ ಸಿಬ್ಬಂದಿಗಳಿಗೆ ಗಾಯ

- Advertisement -
- Advertisement -

ಛತ್ತೀಸ್‌ಗಢದಲ್ಲಿ ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, 2 ದಿನಗಳಲ್ಲಿ ಎರಡು ಕಡೆಗಳಲ್ಲಿ ಸ್ಪೋಟ ಸಂಭವಿಸಿದೆ. ಸುಕ್ಮಾ ಜಿಲ್ಲೆಯಲ್ಲಿ ಇಂದು ಮತದಾನ ಆರಂಭವಾದ ಬೆನ್ನಲ್ಲೇ ಸುಧಾರಿತ ಸ್ಫೋಟಕ ಸಾಧನ ಐಇಡಿ ಸ್ಫೋಟ ಸಂಭವಿಸಿದ್ದು ಚುನಾವಣಾ ಕರ್ತವ್ಯದಲ್ಲಿದ್ದ ಸಿಆರ್‌ಪಿಎಫ್ ಯೋಧ ಗಾಯಗೊಂಡಿದ್ದಾರೆ.

ಸುಕ್ಮಾದ ಹಿರಿಯ ಪೊಲೀಸ್ ಅಧಿಕಾರಿ ಕಿರಣ್ ಚವಾಣ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಸ್ಪೋಟದಲ್ಲಿ ಗಾಯಗೊಂಡ ಯೋಧನನ್ನು ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಅವರು ಪ್ರಥಮ ಚಿಕಿತ್ಸೆ ಪಡೆದು ಸುರಕ್ಷಿತವಾಗಿದ್ದಾರೆ. ಜವಾನ ಕೋಬ್ರಾ ಬೆಟಾಲಿಯನ್‌ನವರಾಗಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎಂದು ಹೇಳಿದ್ದಾರೆ.

ಕೋಬ್ರಾ 206 ಮತ್ತು ಸಿಆರ್‌ಪಿಎಫ್ ಸಿಬ್ಬಂದಿ  ತೊಂಡಮಾರ್ಕಾದಿಂದ ಎಲ್ಮಗುಂದ ಗ್ರಾಮಕ್ಕೆ ಗಸ್ತು ತಿರುಗುತ್ತಿದ್ದಾಗ ನಕ್ಸಲರು ಅಳವಡಿಸಿದ್ದ ಐಇಡಿಯನ್ನು ತುಳಿದು ಕಾಲಿಗೆ ಗಾಯವಾಗಿದೆ. ಎರಡು ದಿನಗಳಲ್ಲಿ ಛತ್ತೀಸ್‌ಗಢದಲ್ಲಿ ನಡೆದ ಎರಡನೇ ಐಇಡಿ ಸ್ಫೋಟ ಇದಾಗಿದೆ.

ನಿನ್ನೆ ಕಂಕೇರ್‌ನಲ್ಲಿ ಐಇಡಿ ಸ್ಫೋಟದಲ್ಲಿ ಬಿಎಸ್‌ಎಫ್ ಪೇದೆ ಮತ್ತು ಚುನಾವಣಾ ಕರ್ತವ್ಯ ನಿರತ ತಂಡದ ಸದಸ್ಯರು ಗಾಯಗೊಂಡಿದ್ದರು. ಗಾಯಗೊಂಡ ಪೇದೆಯನ್ನು ಪ್ರಕಾಶ್ ಚಂದ್ ಎಂದು ಗುರುತಿಸಲಾಗಿದ್ದು, ಅವರ ಕಾಲುಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಛೋಟೆಪೇಥಿಯಾಗೆ ರವಾನಿಸಲಾಗಿದೆ.

ಛತ್ತೀಸ್‌ಗಢದಲ್ಲಿ ಅತಿ ಸೂಕ್ಷ್ಮವೆಂದು ಪರಿಗಣಿತ ಬಸ್ತಾರ್ ಕ್ಷೇತ್ರ ಸೇರಿದಂತೆ 20 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಸುಗಮ ಮತದಾನಕ್ಕೆ 20 ಕ್ಷೇತ್ರಗಳ ಸೂಕ್ಷ್ಮ ಪ್ರದೇಶಗಳಲ್ಲಿನ 600ಕ್ಕೂ ಹೆಚ್ಚು ಮತಗಟ್ಟೆಗಳಿಗೆ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಗೆ ನ. 17 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಡಿ. 3 ರಂದು ಇತರ ನಾಲ್ಕು ರಾಜ್ಯಗಳೊಂದಿಗೆ ಮತ ಎಣಿಕೆ ನಡೆಯಲಿದೆ.

ಇದನ್ನು ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...