Homeಮುಖಪುಟಛತ್ತೀಸ್‌ಗಢದಲ್ಲಿ ಮತದಾನ: 2 ಕಡೆಗಳಲ್ಲಿ ಐಇಡಿ ಸ್ಪೋಟ; ಚುನಾವಣಾ ಸಿಬ್ಬಂದಿಗಳಿಗೆ ಗಾಯ

ಛತ್ತೀಸ್‌ಗಢದಲ್ಲಿ ಮತದಾನ: 2 ಕಡೆಗಳಲ್ಲಿ ಐಇಡಿ ಸ್ಪೋಟ; ಚುನಾವಣಾ ಸಿಬ್ಬಂದಿಗಳಿಗೆ ಗಾಯ

- Advertisement -
- Advertisement -

ಛತ್ತೀಸ್‌ಗಢದಲ್ಲಿ ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, 2 ದಿನಗಳಲ್ಲಿ ಎರಡು ಕಡೆಗಳಲ್ಲಿ ಸ್ಪೋಟ ಸಂಭವಿಸಿದೆ. ಸುಕ್ಮಾ ಜಿಲ್ಲೆಯಲ್ಲಿ ಇಂದು ಮತದಾನ ಆರಂಭವಾದ ಬೆನ್ನಲ್ಲೇ ಸುಧಾರಿತ ಸ್ಫೋಟಕ ಸಾಧನ ಐಇಡಿ ಸ್ಫೋಟ ಸಂಭವಿಸಿದ್ದು ಚುನಾವಣಾ ಕರ್ತವ್ಯದಲ್ಲಿದ್ದ ಸಿಆರ್‌ಪಿಎಫ್ ಯೋಧ ಗಾಯಗೊಂಡಿದ್ದಾರೆ.

ಸುಕ್ಮಾದ ಹಿರಿಯ ಪೊಲೀಸ್ ಅಧಿಕಾರಿ ಕಿರಣ್ ಚವಾಣ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಸ್ಪೋಟದಲ್ಲಿ ಗಾಯಗೊಂಡ ಯೋಧನನ್ನು ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಅವರು ಪ್ರಥಮ ಚಿಕಿತ್ಸೆ ಪಡೆದು ಸುರಕ್ಷಿತವಾಗಿದ್ದಾರೆ. ಜವಾನ ಕೋಬ್ರಾ ಬೆಟಾಲಿಯನ್‌ನವರಾಗಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎಂದು ಹೇಳಿದ್ದಾರೆ.

ಕೋಬ್ರಾ 206 ಮತ್ತು ಸಿಆರ್‌ಪಿಎಫ್ ಸಿಬ್ಬಂದಿ  ತೊಂಡಮಾರ್ಕಾದಿಂದ ಎಲ್ಮಗುಂದ ಗ್ರಾಮಕ್ಕೆ ಗಸ್ತು ತಿರುಗುತ್ತಿದ್ದಾಗ ನಕ್ಸಲರು ಅಳವಡಿಸಿದ್ದ ಐಇಡಿಯನ್ನು ತುಳಿದು ಕಾಲಿಗೆ ಗಾಯವಾಗಿದೆ. ಎರಡು ದಿನಗಳಲ್ಲಿ ಛತ್ತೀಸ್‌ಗಢದಲ್ಲಿ ನಡೆದ ಎರಡನೇ ಐಇಡಿ ಸ್ಫೋಟ ಇದಾಗಿದೆ.

ನಿನ್ನೆ ಕಂಕೇರ್‌ನಲ್ಲಿ ಐಇಡಿ ಸ್ಫೋಟದಲ್ಲಿ ಬಿಎಸ್‌ಎಫ್ ಪೇದೆ ಮತ್ತು ಚುನಾವಣಾ ಕರ್ತವ್ಯ ನಿರತ ತಂಡದ ಸದಸ್ಯರು ಗಾಯಗೊಂಡಿದ್ದರು. ಗಾಯಗೊಂಡ ಪೇದೆಯನ್ನು ಪ್ರಕಾಶ್ ಚಂದ್ ಎಂದು ಗುರುತಿಸಲಾಗಿದ್ದು, ಅವರ ಕಾಲುಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಛೋಟೆಪೇಥಿಯಾಗೆ ರವಾನಿಸಲಾಗಿದೆ.

ಛತ್ತೀಸ್‌ಗಢದಲ್ಲಿ ಅತಿ ಸೂಕ್ಷ್ಮವೆಂದು ಪರಿಗಣಿತ ಬಸ್ತಾರ್ ಕ್ಷೇತ್ರ ಸೇರಿದಂತೆ 20 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಸುಗಮ ಮತದಾನಕ್ಕೆ 20 ಕ್ಷೇತ್ರಗಳ ಸೂಕ್ಷ್ಮ ಪ್ರದೇಶಗಳಲ್ಲಿನ 600ಕ್ಕೂ ಹೆಚ್ಚು ಮತಗಟ್ಟೆಗಳಿಗೆ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಗೆ ನ. 17 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಡಿ. 3 ರಂದು ಇತರ ನಾಲ್ಕು ರಾಜ್ಯಗಳೊಂದಿಗೆ ಮತ ಎಣಿಕೆ ನಡೆಯಲಿದೆ.

ಇದನ್ನು ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ನ.9ಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...