Homeಮುಖಪುಟ‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

- Advertisement -
- Advertisement -

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 10 ಶಂಕಿತ ಕುಕಿ ಉಗ್ರಗಾಮಿಗಳ “ಹತ್ಯೆ” ಘಟನೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ (ಸಿಆರ್‌ಪಿಎಫ್‌) ಪಡೆ “ಪಕ್ಷಪಾತವನ್ನು ಪ್ರದರ್ಶಿಸಿದೆ” ಎಂದು ಮಿಜೋರಾಂನ ವಿರೋಧ ಪಕ್ಷವಾದ ಮಿಜೋ ನ್ಯಾಷನಲ್ ಫ್ರಂಟ್ ಬುಧವಾರ ಆರೋಪಿಸಿದೆ. ಸಿಆರ್‌ಪಿಎಫ್‌ ಪಕ್ಷಪಾತ

ಶಂಕಿತ ಉಗ್ರಗಾಮಿಗಳು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಮೇಲೆ ದಾಳಿ ನಡೆಸಿದ ನಂತರ ಆರಂಭವಾದ ಗುಂಡಿನ ಚಕಮಕಿಯಲ್ಲಿ ಸೋಮವಾರ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಕುಕಿ-ಜೊ ಸಂಘಟನೆಗಳು ಇದನ್ನು ನಿರಾಕರಿಸಿದ್ದು, ಮೃತಪಟ್ಟವರು ‘ಗ್ರಾಮ ಸ್ವಯಂ ಸೇವಕ’ರಾಗಿದ್ದು, ಅವರನ್ನು ಭದ್ರತಾಪಡೆಗಳು ಹೊಂಚು ಹಾಕಿ ಕೊಂದಿದೆ ಎಂದು ಆರೋಪಿಸಿದ್ದಾರೆ. ಸಿಆರ್‌ಪಿಎಫ್‌ ಪಕ್ಷಪಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬುಧವಾರ ಹೇಳಿಕೆ ನೀಡಿರುವ ಮಿಜೋರಾಂನ ವಿಪಕ್ಷ ಮಿಜೊ ನ್ಯಾಷನಲ್ ಫ್ರಂಟ್, “ನಾವು CRPFನ ಈ ಕ್ರಮಗಳನ್ನು ಖಂಡಿಸುತ್ತೇವೆ. ಮಿಜೋ ಬುಡಕಟ್ಟುಗಳ ವಿರುದ್ಧ ಅವರ ತಾರತಮ್ಯದ ನಡವಳಿಕೆಯು ನಮ್ಮನ್ನು ತೀವ್ರ ಆತಂಕಕ್ಕೀಡು ಮಾಡಿದೆ” ಹೇಳಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಆಪಾದಿತ ಕ್ರಮಗಳು, ಮಣಿಪುರದಲ್ಲಿ ದುರ್ಬಲವಾದ ಪರಿಸ್ಥಿತಿಯನ್ನು ಉಲ್ಬಣಗೊಳಿಸುವ ಮತ್ತು ಶಾಂತಿಪಾಲಕರಾಗಿ CRPF ನ ವಿಶ್ವಾಸಾರ್ಹತೆಯನ್ನು ದುರ್ಬಲಗೊಳಿಸುವ ಅಪಾಯವನ್ನುಂಟುಮಾಡುತ್ತದೆ ಎಂದು ವಿರೋಧ ಪಕ್ಷವು ಹೇಳಿದೆ.

ಕುಕಿಗಳು ಮಿಜೋಸ್‌ನೊಂದಿಗೆ ನಿಕಟ ಜನಾಂಗೀಯ ಸಂಬಂಧಗಳನ್ನು ಹೊಂದಿದ್ದು, ತಮ್ಮನ್ನು “ಝೋ ಕುಟುಂಬದ” ಭಾಗವೆಂದು ಪರಿಗಣಿಸುತ್ತಾರೆ. ಮಿಜೋರಾಂನಲ್ಲಿ ಕುಕಿ ಜೋ ಸಮುದಾಯವು ಏಕೈಕ-ದೊಡ್ಡ ಜನಾಂಗೀಯ ಗುಂಪಾಗಿದೆ. ಡಿಸೆಂಬರ್‌ನಲ್ಲಿ ಮಿಜೋರಾಮ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಿಜೋ ನ್ಯಾಷನಲ್ ಫ್ರಂಟ್ ತನ್ನನ್ನು ಝೋ ನ್ಯಾಶನಲಿಸ್ಟ್ ಪಕ್ಷ ಎಂದು ಬಿಂಬಿಸಿಕೊಂಡಿದೆ.

ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಲು ಐಜ್ವಾಲ್‌ನಲ್ಲಿ ಸಮಾರಂಭವನ್ನು ಆಯೋಜಿಸಿದ್ದಕ್ಕಾಗಿ ಮಿಜೋ ಸಂಘಟನೆಗಳ ಗುಂಪಿನ ಉನ್ನತ ಸಂಘವಾದ ಯಂಗ್ ಮಿಜೋ ಅಸೋಸಿಯೇಷನ್ ​​ಅನ್ನು ಪಕ್ಷವು ಶ್ಲಾಘಿಸಿದೆ. ಈ ಸಭೆಯಲ್ಲಿ ಸಂಘವು ಹತ್ಯೆಯನ್ನು ಖಂಡಿಸಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ತನಿಖೆಗೆ ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿತು. “10 ಮಂದಿಯ ಕುಟುಂಬಗಳಿಗೆ ಆರ್ಥಿಕವಾಗಿ ಪರಿಹಾರ ನೀಡಬೇಕು ಮತ್ತು ಮಣಿಪುರದಲ್ಲಿನ ಅಶಾಂತಿಯನ್ನು ಆದಷ್ಟು ಬೇಗ ಪರಿಹರಿಸಬೇಕು” ಎಂದು ಸಂಘವು ಒತ್ತಾಯಿಸಿದೆ.

2023ರ ಮೇ ತಿಂಗಳಲ್ಲಿ, ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆಗಳು ಪ್ರಾರಂಭವಾದಾಗಿನಿಂದ ಹಳ್ಳಿಗಳನ್ನು ಕಾಪಾಡುವ ಶಸ್ತ್ರಸಜ್ಜಿತ ನಾಗರಿಕರಿಗೆ “ಗ್ರಾಮ ಸ್ವಯಂಸೇವಕರು” ಎಂಬ ಪದವನ್ನು ಬಳಸಲಾಗುತ್ತಿದೆ. ಹಿಂಸಾಚಾರ ಪ್ರಾರಂಭವಾದಾಗಿನಿಂದ ಕನಿಷ್ಠ 237 ಜನರು ಸಾವನ್ನಪ್ಪಿದ್ದಾರೆ ಮತ್ತು 59,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಇದನ್ನೂ ಓದಿ: ಯುಪಿ: ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಗ್ರಾಮಸ್ಥರು; ಜಾತಿ ನಿಂದನೆ ಪ್ರಕರಣ ದಾಖಲು

ಯುಪಿ: ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಗ್ರಾಮಸ್ಥರು; ಜಾತಿ ನಿಂದನೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“8.5 ಕೆಜಿ ತೂಕ ಕಳೆದುಕೊಂಡ ಸೋನಮ್ ವಾಂಗ್‌ಚುಕ್ ಎರಡು ದಿನಗಳಲ್ಲಿ ಸಾಯಬಹುದು: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...